AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T Narasipura Accident: ಟಿ ನರಸೀಪುರ ಅಪಘಾತದ ಭೀಕರ ವಿಡಿಯೋ

ಮೈಸೂರು: ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದ ದೃಶ್ಯ ಡ್ಯಾಶ್​ಕ್ಯಾಮ್​​ನಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ.

Ganapathi Sharma
|

Updated on: May 29, 2023 | 9:16 PM

Share

ಮೈಸೂರು: ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ (Kollegal – T Narasipura Road) ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದ ದೃಶ್ಯ ಡ್ಯಾಶ್​ಕ್ಯಾಮ್​​ನಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಇದೀಗ ಅಪಘಾತದ ವಿಡಿಯೋ ಬಹಿರಂಗಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ಏಕಾಏಕಿ ಬಸ್​ಗೆ ಡಿಕ್ಕಿಯಾಗಿ ಮುದ್ದೆಯಾದ ದೃಶ್ಯ ಮನಕಲಕುವಂತಿದೆ.

ಬಳ್ಳಾರಿ ಮೂಲದ ಒಂದೇ ಕುಟುಂಬದ ಸದಸ್ಯರು ಶನಿವಾರ ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಚಾಮುಂಡಿ ಬೆಟ್ಟ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗ ಬೆಟ್ಟಗಳಿಗೆ ಭೇಟಿ ನೀಡಿ ಮೈಸೂರಿಗೆ ಹಿಂತಿರುಗುತ್ತಿದ್ದರು. ಇದೇ ವೇಳೆ, ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್​ಗೆ ಅಪ್ಪಳಿಸಿದೆ. ಈ ಮಧ್ಯೆ, ಮೃತಪಟ್ಟ 10 ಜನರ ಮನೆಯವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಟ್ವೀಟ್​ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Mysuru News: ಟಿ ನರಸೀಪುರ ಬಳಿ ಖಾಸಗಿ ಬಸ್, ಕಾರು ಡಿಕ್ಕಿ; ಕಾರಿನಲ್ಲಿದ್ದ 10 ಮಂದಿ ದುರ್ಮರಣ

ಈ ಮಧ್ಯೆ, ಘಟನಾ ಸ್ಥಳಕ್ಕೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪೋಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಮಹದೇವಪ್ಪ, ಈ ಘಟನೆ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇನೆ. ಸಿಎಂ ಸಹಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ನಾನು ಸಹ ಆಸ್ಪತ್ರೆಗೆ ಭೇಟಿ ನೀಡುತ್ತೇನೆ.ಈ ಸಂಬಂಧ ಅಧಿಕಾರಿಗಳ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ