AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಾಗುತ್ತಿದೆ ಮೈಸೂರು; ಸಿದ್ಧತೆ ಹೇಗಿದೆ?

ಮೈಸೂರಿನಲ್ಲಿ ದಸರಾಕ್ಕೆ ತಯಾರಿ ಜೋರಾಗಿದೆ. ಈ ನಡುವೆ ನಗರದ ಹಲವೆಡೆ ಪಾರ್ಕಿಂಗ್, ಸಂಚಾರ ವ್ಯವಸ್ಥೆಗಳಲ್ಲಿ ಬದಲಾವಣೆಗಳನ್ನೂ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಕುರಿತ ವರದಿ ಇಲ್ಲಿದೆ.

Mysuru Dasara: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಾಗುತ್ತಿದೆ ಮೈಸೂರು; ಸಿದ್ಧತೆ ಹೇಗಿದೆ?
ಮೈಸೂರು ದಸರಾ
TV9 Web
| Updated By: shivaprasad.hs|

Updated on: Oct 03, 2021 | 11:13 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅರಮನೆಯ ಆವರಣದಲ್ಲಿ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದ್ದು, ಅಂಬಾರಿ ಹೊರುವ ಗೋಪಾಲಸ್ವಾಮಿ ಆನೆಗೆ ಮರದ ಅಂಬಾರಿ ಹೊರಿಸಿ ತಾಲೀಮು ನೀಡಲಾಗುತ್ತಿದೆ. 900 ಕೆಜಿ ತೂಕ ಹೊರಿಸಿ ಗೋಪಾಲಸ್ವಾಮಿ ಆನೆಗೆ ಅಭ್ಯಾಸ ಮಾಡಿಸಲಾಗುತ್ತಿದ್ದು, ಅದಕ್ಕೆ ಕುಮ್ಕಿ ಆನೆಗಳಾದ ಚೈತ್ರಾ, ಕಾವೇರಿ ಸಾಥ್ ನೀಡುತ್ತಿದ್ದಾರೆ.  

ಮತ್ತೊಂದು ಡಬ್ಬಲ್ ಡೆಕ್ಕರ್ ಬಸ್ ಆರಂಭಿಸಲು ಚಿಂತನೆ: ವಿಶ್ವವಿಖ್ಯಾತ ಮೈಸೂರು ದಸರಾ ವಿಶೇಷವಾಗಿ ಮತ್ತೊಂದು ಡಬಲ್ ಡೆಕ್ಕರ್ ಬಸ್ ಆರಂಭಿಸಲು ರಾಜ್ಯ ಪ್ರವಾಸೋದ್ಯಮ ನಿಗಮ ಚಿಂತನೆ ನಡೆಸಿದೆ. ಈಗಾಗಲೇ ಎರಡು ಅಂಬಾರಿ ಬಸ್ ಸಂಚಾರ ಆರಂಭಿಸಲಾಗಿದ್ದು, ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೊಂದು ಬಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ದಸರಾ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ಬೆಳಗ್ಗೆ ಸಂಜೆ ಬಸ್‌ಗಳು ಸಂಚಾರ ನಡೆಸುತ್ತಿವೆ. ಆದ್ದರಿಂದ ದಸರಾ ಉದ್ಘಾಟನೆಗೂ ಮುನ್ನ ಮತ್ತೊಂದು ಅಂಬಾರಿ ಬಸ್ಸು ಕಾರ್ಯಾರಂಭ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ದಸರಾ ಸಂದರ್ಭದಲ್ಲಿ ಸಂಚಾರ ವ್ಯವಸ್ಥೆ ಹೇಗಿರಲಿದೆ? ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಹಲವು ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ. ಅಕ್ಟೋಬರ್ 7ರಿಂದ 15ರವರೆಗೆ ಸಂಜೆ 4ರಿಂದ ರಾತ್ರಿ 10ರವರೆಗೆ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ.

ಅರಮನೆಯ ಸುತ್ತಲಿನ ರಸ್ತೆಗಳು, ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ, ಕುಸ್ತಿ ಅಖಾಡ ಜಂಕ್ಷನ್, ಬಿ.ಎನ್.ರಸ್ತೆ ಜಯಚಾಮರಾಜ ಒಡೆಯರ್ ವೃತ್ತ, ಆಲ್ಬರ್ಟ್ ಪಿಕ್ಚರ್ ರಸ್ತೆ, ಚಾಮರಾಜ ಒಡೆಯರ್‌ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ನ್ಯೂ ಎಸ್.ಆರ್.ರಸ್ತೆ ಬಸವೇಶ್ವರ ವೃತ್ತ, ಚಾಮರಾಜ ಜೋಡಿ ರಸ್ತೆ, ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತದಲ್ಲಿ ಏಕಮುಖ ಸಂಚಾರಕ್ಕೆ ಆದೇಶ ನೀಡಲಾಗಿದೆ. ಇದರ ಜೊತೆಗೆ ಮೈಸೂರಿನ ಹಲವು ಪ್ರಮುಖ ರಸ್ತೆಗಳಲ್ಲಿ ಏಕ ಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ ಚಂದ್ರಗುಪ್ತ ತಿಳಿಸಿದ್ದಾರೆ.

ಕೆಲವು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ: ಅಂಬಾವಿಲಾಸ ಅರಮನೆ ಸುತ್ತಮುತ್ತ, ಸಯ್ಯಾಜಿರಾವ್ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಬಸವೇಶ್ವರ ವೃತ್ತ, ಪುರಂದರ ರಸ್ತೆ, ಬಿ.ರಾಚಯ್ಯ ವೃತ್ತದಿಂದ ಬಿ.ಎನ್.ರಸ್ತೆ ಜಂಕ್ಷನ್, ಶಿವರಾತ್ರಿ ರಾಜೇಂದ್ರ ವೃತ್ತದಿಂದ ಜಯಚಾಮರಾಜೇಂದ್ರ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆಯ ಜಯಚಾಮರಾಜೇಂದ್ರ ವೃತ್ತದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದವರೆಗೆ ಹಾಗೂ ಇನ್ನಿತರ ಹಲವು ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ.

ಇದನ್ನೂ ಓದಿ:

ವಿಶ್ವವಿಖ್ಯಾತ ದಸರಾ ಮಹೋತ್ಸವ; ಮೈಸೂರಿನ ಕೆಲ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ

ಸಿ.ಪಿ. ಯೋಗೇಶ್ವರ್ ಪುತ್ರಿ ಬಾಡಿಗೆ ಬಾಕಿ ಪ್ರಕರಣ: ಮಾಧ್ಯಮದ ಮುಂದೆ ಸತ್ಯ ಹೇಳಿದ್ದಕ್ಕೇ ನಿರ್ದೇಶಕಿ ಇಂದಿರಾಗೆ ಅವಾಜ್ ಹಾಕಿದ TAPCMS ಅಧ್ಯಕ್ಷ

ಬೆಳಗಾವಿ: 140 ಅಡಿ ಕಂದಕಕ್ಕೆ ಉರುಳಿ ಬಿದ್ದರೂ ಬದುಕಿ ಬಂದ ಯುವಕ; ಗೋಕಾಕ್ ಫಾಲ್ಸ್‌ನಲ್ಲಿ ಅಚ್ಚರಿ ಘಟನೆ

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ