AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Clinics: ನಮ್ಮ ಕ್ಲಿನಿಕ್​ಗಳಿಗೆ ಮೈಸೂರಿನಲ್ಲಿ ಭರ್ಜರಿ ಯಶಸ್ಸು, ಎರಡೇ ತಿಂಗಳಲ್ಲಿ 46,000 ಜನರಿಗೆ ಚಿಕಿತ್ಸೆ

ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಒಟ್ಟು 6 ನಮ್ಮ ಕ್ಲಿನಿಕ್​ಗಳು ಸದ್ಯ ಕಾರ್ಯನಿರ್ವಹಿಸುತ್ತಿವೆ. ಇನ್ನೂ 3 ನಮ್ಮ ಕ್ಲಿನಿಕ್​ಗಳನ್ನು ತೆರೆಯಲು ಚಿಂತನೆ ನಡೆಸುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕೇವಲ 2 ತಿಂಗಳ ಅವಧಿಯಲ್ಲಿ 46,000 ಜನರು ನಮ್ಮ ಕ್ಲಿನಿಕ್​​ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದಿರುವುದೇ ಇದಕ್ಕೆ ಕಾರಣ.

Namma Clinics: ನಮ್ಮ ಕ್ಲಿನಿಕ್​ಗಳಿಗೆ ಮೈಸೂರಿನಲ್ಲಿ ಭರ್ಜರಿ ಯಶಸ್ಸು, ಎರಡೇ ತಿಂಗಳಲ್ಲಿ 46,000 ಜನರಿಗೆ ಚಿಕಿತ್ಸೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 14, 2024 | 7:30 AM

Share

ಮೈಸೂರು, ಫೆಬ್ರವರಿ 14: ಬಡವರಿಗೆ ಉತ್ತಮ ಆರೋಗ್ಯ ಸೇವೆಗಳನ್ನು (Health service) ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆರಂಭಿಸಿರುವ ‘ನಮ್ಮ ಕ್ಲಿನಿಕ್​’ಗಳಿಗೆ (Namma Clinics) ಮೈಸೂರಿನಲ್ಲಿ (Mysuru) ಉತ್ತಮ ಪ್ರತಿಕ್ರಿಯೆ ಲಭ್ಯವಾಗುತ್ತಿದೆ. ಈ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಬಡವರು ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಇನ್ನೂ ಮೂರು ಕ್ಲಿನಿಕ್‌ಗಳನ್ನು ಸ್ಥಾಪಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಂತನೆ ನಡೆಸಿದೆ.

ರಾಜ್ಯ ಸರ್ಕಾರವು ಸದ್ಯ ಮೈಸೂರು ನಗರದಲ್ಲಿ ಮೂರು ನಮ್ಮ ಕ್ಲಿನಿಕ್​ಗಳನ್ನು ಸ್ಥಾಪಿಸಿದೆ. ಹೂಟಗಳ್ಳಿ, ಶ್ರೀರಾಂಪುರ, ಯರಗನಹಳ್ಳಿ (ರಮ್ಮನಹಳ್ಳಿ) ಮತ್ತು ಜಿಲ್ಲೆಯಾದ್ಯಂತ ಮೂರು ನಮ್ಮ ಕ್ಲಿನಿಕ್​ಗಳು (ಎಚ್‌ಡಿ ಕೋಟೆ, ಕೆಆರ್ ನಗರ ಮತ್ತು ಟಿ. ನರಸೀಪುರ) 2022 ರ ಡಿಸೆಂಬರ್​ನಿಂದ ರಾಷ್ಟ್ರೀಯ ನಗರ ಆರೋಗ್ಯ ಮಿಷನ್ (NUHM) ಅಡಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ನಮ್ಮ ಕ್ಲಿನಿಕ್​​ಗಳು ರೋಗಗಳನ್ನು, ವಿಶೇಷವಾಗಿ ಸಾಂಕ್ರಾಮಿಕವಲ್ಲದ ಮತ್ತು ಜೀವನಶೈಲಿಯ ರೋಗಗಳನ್ನು ಆರಂಭಿಕ ಹಂತದಲ್ಲಿ ಪರೀಕ್ಷಿಸಲು ಸಹಾಯ ಮಾಡುತ್ತವೆ. ಇದರಿಂದಾಗಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯುವುದ ಜತೆಗೆ ಜೀವಕ್ಕೆ ಅಪಾಯಕಾರಿಯಾಗುವಂಥ ಸಮಸ್ಯೆಗಳ ನಿರ್ಮೂಲನೆ ಸುಲಭವಾಗುತ್ತದೆ.

ನಮ್ಮ ಕ್ಲಿನಿಕ್​ಗಳು ಉಪ ಕೇಂದ್ರಗಳಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ (PHC) ಆವರಣದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಕಾರ್ಯನಿರ್ವಹಿಸುತ್ತವೆ. 15 ತಿಂಗಳ ಹಿಂದೆ ನಮ್ಮ ಕ್ಲಿನಿಕ್ ಆರಂಭಿಸಿದ ನಂತರ ಸಾವಿರಾರು ಬಡ ರೋಗಿಗಳು ಈ ಆರೋಗ್ಯ ಸೌಲಭ್ಯದ ಪ್ರಯೋಜನ ಪಡೆದಿದ್ದಾರೆ. ಹೆಚ್ಚುತ್ತಿರುವ ಜನಪ್ರಿಯತೆಯನ್ನು ಪರಿಗಣಿಸಿ, ಆರೋಗ್ಯ ಇಲಾಖೆಯು ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಎರಡು ಕ್ಲಿನಿಕ್‌ಗಳ ಸಮಯವನ್ನು ರಾತ್ರಿ 8 ರವರೆಗೆ ವಿಸ್ತರಿಸಿದೆ.

2023 ರ ಏಪ್ರಿಲ್​​ನಿಂದ 2024 ರ ಜನವರಿ ಅಂತ್ಯದವರೆಗೆ, ಮೈಸೂರು ಜಿಲ್ಲೆಯ 6 ಕ್ಲಿನಿಕ್‌ಗಳಿಗೆ 46,000 ಕ್ಕೂ ಹೆಚ್ಚು ಜನರು ಭೇಟಿ ನೀಡಿದ್ದಾರೆ. ಅವರಲ್ಲಿ 23,055 ಪುರುಷರು ಮತ್ತು 23,843 ಮಹಿಳೆಯರಾಗಿದ್ದಾರೆ.

ನಗರ ಜನಸಂಖ್ಯೆಯು ದಿನದಿಂದ ದಿನಕ್ಕೆ ಬೆಳೆಯುತ್ತಿದೆ ಮತ್ತು ಪಿಎಚ್‌ಸಿಗಳಲ್ಲಿ ಹೆಚ್ಚುತ್ತಿರುವ ಒತ್ತಡವನ್ನು ಪರಿಗಣಿಸಿ, ನಗರ ಬಡವರ ಆರೋಗ್ಯ ಅಗತ್ಯಗಳನ್ನು ಪೂರೈಸಲು ಸರ್ಕಾರ ನಮ್ಮ ಕ್ಲಿನಿಕ್​ಗಳನ್ನು ಸ್ಥಾಪಿಸಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ. ಪಿಸಿ ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಗೆ ಬರಲಿದೆ ಜಿಪಿಎಸ್ ಆಧಾರಿತ ಟೋಲಿಂಗ್ ವ್ಯವಸ್ಥೆ: ಸ್ವಯಂಚಾಲಿತ ಶುಲ್ಕ ಪಾವತಿ

ಮೈಸೂರು ಜಿಲ್ಲೆಯ ನಮ್ಮ ಕ್ಲಿನಿಕ್‌ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇನ್ನೂ ಮೂರು ಕ್ಲಿನಿಕ್‌ಗಳನ್ನು ತೆರೆಯುವ ಯೋಜನೆ ಇದೆ ಎಂದು ಅವರು ಹೇಳಿದ್ದಾರೆ. ಈ ಕ್ಲಿನಿಕ್​ಗಳಲ್ಲಿ 41,940 ರೋಗಿಗಳಿಗೆ ಉಚಿತ ಔಷಧಿಗಳನ್ನು ನೀಡಲಾಗಿದ್ದು, 11,465 ರೋಗಿಗಳು ಕ್ಲಿನಿಕ್‌ಗಳಲ್ಲಿನ ಡಯಾಗ್ನೋಸ್ಟಿಕ್ ಲ್ಯಾಬ್‌ಗಳಲ್ಲಿ ರೋಗ ಪತ್ತೆ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ