AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shootout: ನಂಜನಗೂಡಿನಲ್ಲಿ ಶೂಟೌಟ್, ಕಾಡು ಮೊಲ ಬೇಟೆಗಾಗಿ ರಾತ್ರಿ ವೇಳೆ ಹಾರಿಸಿದ ಗುಂಡಿಗೆ ಕಾರ್ಮಿಕ ಬಲಿ

Hunting: ಎರಡು ವರ್ಷಗಳ ಹಿಂದೆ ನಂಜನಗೂಡಿಗೆ ಬಂದಿದ್ದ ಪ್ರಸನ್ನನ್, ನಂಜನಗೂಡು ತಾಲೂಕಿನ ಕುರಿಹುಂಡಿ ಗ್ರಾಮದ ಗುರುಸ್ವಾಮಿ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ರಾತ್ರಿ 8.30ರಲ್ಲಿ ಕಾಡುಮೊಲ ಬೇಟೆಯಾಡಲು ತನ್ನ ಬಂದೂಕಿನಿಂದ ಗುಂಡು ಹಾರಿಸಿದ್ದ ನಿಶಾದ್ ಗುರಿ ತಪ್ಪಿ ಪ್ರಸನ್ನನ್ ಕಾಲಿಗೆ ಗುಂಡು ಹೊಡೆದಿದ್ದಾನೆ.

Shootout: ನಂಜನಗೂಡಿನಲ್ಲಿ ಶೂಟೌಟ್, ಕಾಡು ಮೊಲ ಬೇಟೆಗಾಗಿ ರಾತ್ರಿ ವೇಳೆ ಹಾರಿಸಿದ ಗುಂಡಿಗೆ ಕಾರ್ಮಿಕ ಬಲಿ
ನಂಜನಗೂಡಿನಲ್ಲಿ ಶೂಟೌಟ್: ಕಾಡು ಮೊಲ ಬೇಟೆಗಾಗಿ ರಾತ್ರಿ ವೇಳೆ ಹಾರಿಸಿದ ಗುಂಡಿಗೆ ಕಾರ್ಮಿಕ ಬಲಿ
TV9 Web
| Updated By: ಸಾಧು ಶ್ರೀನಾಥ್​|

Updated on:Jun 17, 2021 | 4:17 PM

Share

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಶೂಟೌಟ್ ನಡೆದಿದೆ. ಕಾಡು ಮೊಲ ಬೇಟೆಗಾಗಿ ಹಾರಿದ ಗುಂಡಿಗೆ ಕಾರ್ಮಿಕ ಬಲಿಯಾಗಿದ್ದಾನೆ. ಕಾರ್ಯ ಗ್ರಾಮದ ಬಳಿ ದುರ್ಘಟನೆ ನಡೆದಿದ್ದು, ಕೇರಳ ಮೂಲದ ಕಾರ್ಮಿಕ ಪ್ರಸನ್ನನ್ ಮೃತಪಟ್ಟವ. ಕಾಡು ಮೊಲದ ಬೇಟೆಗಾಗಿ ಗುಂಡು ಹಾರಿಸಿ ಕಾರ್ಮಿಕನ ಬಲಿ ಪಡೆದ ಆರೋಪಿ ನಿಶಾದ್ ಎಂದು ಗುರುತಿಸಲಾಗಿದೆ. ಆರೋಪಿ ನಿಶಾದ್ ಸಹ ಕೇರಳ ಮೂಲದವನೇ.

ಎರಡು ವರ್ಷಗಳ ಹಿಂದೆ ನಂಜನಗೂಡಿಗೆ ಬಂದಿದ್ದ ಪ್ರಸನ್ನನ್, ನಂಜನಗೂಡು ತಾಲೂಕಿನ ಕುರಿಹುಂಡಿ ಗ್ರಾಮದ ಗುರುಸ್ವಾಮಿ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ರಾತ್ರಿ 8.30ರಲ್ಲಿ ಕಾಡುಮೊಲ ಬೇಟೆಯಾಡಲು ತನ್ನ ಬಂದೂಕಿನಿಂದ ಗುಂಡು ಹಾರಿಸಿದ್ದ ನಿಶಾದ್ ಗುರಿ ತಪ್ಪಿ ಪ್ರಸನ್ನನ್ ಕಾಲಿಗೆ ಗುಂಡು ಹೊಡೆದಿದ್ದಾನೆ. ಕೂಡಲೇ ಪ್ರಸನ್ನನ್‌‌ನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಸನ್ನನ್ ಅಸುನೀಗಿದ್ದಾನೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಿಶಾದ್​ನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

hunting misfire allegedly hunter misfire labourer died in nanjangud 2

ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಿಶಾದ್​ನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಕಾಡುಹಂದಿಯ ಬೇಟೆಗೆ ಹಾಕಿದ್ದ ವಿದ್ಯುತ್​ ತಂತಿ ತುಳಿದು  ಗಾಯಗೊಂಡ ರೈತ

ಕೋಲಾರ: ಬೇಟೆಗೆ ಹಾಕಿದ್ದ ವಿದ್ಯುತ್​ ತಂತಿ ತುಳಿದು ರೈತನೊಬ್ಬ ಗಾಯಗೊಂಡಿದ್ದಾನೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪೆದ್ದಪಲ್ಲಿ ಗ್ರಾಮದ ಬಳಿ ರೈತ ಶ್ರೀನಿವಾಸ್ (50)​ ಗಂಭೀರವಾಗಿ ಗಾಯಗೊಂಡಿದ್ದಾನೆ.  ಕಿಡಿಗೇಡಿಗಳು ಕಾಡುಹಂದಿಯ ಬೇಟೆಗೆ ವಿದ್ಯುತ್ ತಂತಿ ಹಾಕಿದ್ದರು ಎನ್ನಲಾಗಿದೆ. ಈ ಹಿಂದೆಯೂ, ವಿದ್ಯುತ್ ತಂತಿ ತಗುಲಿ ಕಾಡಿನಲ್ಲಿರುವ ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ. ಇನ್ನು ರೈತ ಶ್ರೀನಿವಾಸ ಮೇಕೆಗಳಿಗೆ ಮೇವು ತರುವಾಗ ವಿದ್ಯುತ್​ ತಂತಿ ತುಳಿದು ಘಟನೆ ನಡೆದಿದೆ. ಗೌನಿಪಲ್ಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

ಇತ್ತೀಚೆಗೆ ಕೋಲಾರ ಜಿಲ್ಲೆಯಲ್ಲಿಯೂ ಇಂತಹುದೇ ಘಟನೆ ನಡೆದಿತ್ತು..

ಸೋಮವಾರ ರಾತ್ರಿ  (ಜೂನ್ 14) ನಾಲ್ವರು ಸ್ನೇಹಿತರು ಬೇಟೆಗೆಂದು ಹೋಗಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದ ಬಳಿ ಗುಂಡು ತಗುಲಿ ಶಂಕರ್ ಎಂಬುವವರು ಸಾವನ್ನಪ್ಪಿದ್ದರು.

ಸೋಮವಾರ ರಾತ್ರಿ ನಾಲ್ವರು ಸ್ನೇಹಿತರಾದ ಕೋದಂಡಪ್ಪ, ಶ್ರೀನಿವಾಸ, ಚೌಡಪ್ಪ ಮತ್ತು ಶಂಕರ್ ಬೇಟೆಗೆಂದು ತೆರಳಿದ್ದಾಗ ಈ ಘಟನೆ ನಡೆದಿತ್ತು. ಲೈಸೆನ್ಸ್ ಹೊಂದಿದ್ದ ಕೋದಂಡಪ್ಪ ಗನ್​ನಿಂದ ಮಿಸ್ ಫೈರ್​​ ಆದಾಗ ಗುಂಡು ನೇರವಾಗಿ ಶಂಕರ್ ಹಣೆಗೆ ಬಿದ್ದಿತ್ತು. ಶಂಕರ್ ಸ್ಥಳದಲ್ಲೇ ಮೃತಪಟ್ಟಿದ್ದ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

(hunting misfire allegedly hunter misfire labourer died in nanjangud)

ಅಲ್ಮೇರಾದಲ್ಲಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದು ಆಡುತ್ತಿದ್ದ ಬಾಲಕನ ತೊಡೆಗೆ ಗುಂಡು ತಗುಲಿ ಗಾಯ

Published On - 3:52 pm, Thu, 17 June 21

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?