AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shootout: ನಂಜನಗೂಡಿನಲ್ಲಿ ಶೂಟೌಟ್, ಕಾಡು ಮೊಲ ಬೇಟೆಗಾಗಿ ರಾತ್ರಿ ವೇಳೆ ಹಾರಿಸಿದ ಗುಂಡಿಗೆ ಕಾರ್ಮಿಕ ಬಲಿ

Hunting: ಎರಡು ವರ್ಷಗಳ ಹಿಂದೆ ನಂಜನಗೂಡಿಗೆ ಬಂದಿದ್ದ ಪ್ರಸನ್ನನ್, ನಂಜನಗೂಡು ತಾಲೂಕಿನ ಕುರಿಹುಂಡಿ ಗ್ರಾಮದ ಗುರುಸ್ವಾಮಿ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ರಾತ್ರಿ 8.30ರಲ್ಲಿ ಕಾಡುಮೊಲ ಬೇಟೆಯಾಡಲು ತನ್ನ ಬಂದೂಕಿನಿಂದ ಗುಂಡು ಹಾರಿಸಿದ್ದ ನಿಶಾದ್ ಗುರಿ ತಪ್ಪಿ ಪ್ರಸನ್ನನ್ ಕಾಲಿಗೆ ಗುಂಡು ಹೊಡೆದಿದ್ದಾನೆ.

Shootout: ನಂಜನಗೂಡಿನಲ್ಲಿ ಶೂಟೌಟ್, ಕಾಡು ಮೊಲ ಬೇಟೆಗಾಗಿ ರಾತ್ರಿ ವೇಳೆ ಹಾರಿಸಿದ ಗುಂಡಿಗೆ ಕಾರ್ಮಿಕ ಬಲಿ
ನಂಜನಗೂಡಿನಲ್ಲಿ ಶೂಟೌಟ್: ಕಾಡು ಮೊಲ ಬೇಟೆಗಾಗಿ ರಾತ್ರಿ ವೇಳೆ ಹಾರಿಸಿದ ಗುಂಡಿಗೆ ಕಾರ್ಮಿಕ ಬಲಿ
TV9 Web
| Edited By: |

Updated on:Jun 17, 2021 | 4:17 PM

Share

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಶೂಟೌಟ್ ನಡೆದಿದೆ. ಕಾಡು ಮೊಲ ಬೇಟೆಗಾಗಿ ಹಾರಿದ ಗುಂಡಿಗೆ ಕಾರ್ಮಿಕ ಬಲಿಯಾಗಿದ್ದಾನೆ. ಕಾರ್ಯ ಗ್ರಾಮದ ಬಳಿ ದುರ್ಘಟನೆ ನಡೆದಿದ್ದು, ಕೇರಳ ಮೂಲದ ಕಾರ್ಮಿಕ ಪ್ರಸನ್ನನ್ ಮೃತಪಟ್ಟವ. ಕಾಡು ಮೊಲದ ಬೇಟೆಗಾಗಿ ಗುಂಡು ಹಾರಿಸಿ ಕಾರ್ಮಿಕನ ಬಲಿ ಪಡೆದ ಆರೋಪಿ ನಿಶಾದ್ ಎಂದು ಗುರುತಿಸಲಾಗಿದೆ. ಆರೋಪಿ ನಿಶಾದ್ ಸಹ ಕೇರಳ ಮೂಲದವನೇ.

ಎರಡು ವರ್ಷಗಳ ಹಿಂದೆ ನಂಜನಗೂಡಿಗೆ ಬಂದಿದ್ದ ಪ್ರಸನ್ನನ್, ನಂಜನಗೂಡು ತಾಲೂಕಿನ ಕುರಿಹುಂಡಿ ಗ್ರಾಮದ ಗುರುಸ್ವಾಮಿ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ರಾತ್ರಿ 8.30ರಲ್ಲಿ ಕಾಡುಮೊಲ ಬೇಟೆಯಾಡಲು ತನ್ನ ಬಂದೂಕಿನಿಂದ ಗುಂಡು ಹಾರಿಸಿದ್ದ ನಿಶಾದ್ ಗುರಿ ತಪ್ಪಿ ಪ್ರಸನ್ನನ್ ಕಾಲಿಗೆ ಗುಂಡು ಹೊಡೆದಿದ್ದಾನೆ. ಕೂಡಲೇ ಪ್ರಸನ್ನನ್‌‌ನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಸನ್ನನ್ ಅಸುನೀಗಿದ್ದಾನೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಿಶಾದ್​ನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

hunting misfire allegedly hunter misfire labourer died in nanjangud 2

ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಿಶಾದ್​ನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಕಾಡುಹಂದಿಯ ಬೇಟೆಗೆ ಹಾಕಿದ್ದ ವಿದ್ಯುತ್​ ತಂತಿ ತುಳಿದು  ಗಾಯಗೊಂಡ ರೈತ

ಕೋಲಾರ: ಬೇಟೆಗೆ ಹಾಕಿದ್ದ ವಿದ್ಯುತ್​ ತಂತಿ ತುಳಿದು ರೈತನೊಬ್ಬ ಗಾಯಗೊಂಡಿದ್ದಾನೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪೆದ್ದಪಲ್ಲಿ ಗ್ರಾಮದ ಬಳಿ ರೈತ ಶ್ರೀನಿವಾಸ್ (50)​ ಗಂಭೀರವಾಗಿ ಗಾಯಗೊಂಡಿದ್ದಾನೆ.  ಕಿಡಿಗೇಡಿಗಳು ಕಾಡುಹಂದಿಯ ಬೇಟೆಗೆ ವಿದ್ಯುತ್ ತಂತಿ ಹಾಕಿದ್ದರು ಎನ್ನಲಾಗಿದೆ. ಈ ಹಿಂದೆಯೂ, ವಿದ್ಯುತ್ ತಂತಿ ತಗುಲಿ ಕಾಡಿನಲ್ಲಿರುವ ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ. ಇನ್ನು ರೈತ ಶ್ರೀನಿವಾಸ ಮೇಕೆಗಳಿಗೆ ಮೇವು ತರುವಾಗ ವಿದ್ಯುತ್​ ತಂತಿ ತುಳಿದು ಘಟನೆ ನಡೆದಿದೆ. ಗೌನಿಪಲ್ಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

ಇತ್ತೀಚೆಗೆ ಕೋಲಾರ ಜಿಲ್ಲೆಯಲ್ಲಿಯೂ ಇಂತಹುದೇ ಘಟನೆ ನಡೆದಿತ್ತು..

ಸೋಮವಾರ ರಾತ್ರಿ  (ಜೂನ್ 14) ನಾಲ್ವರು ಸ್ನೇಹಿತರು ಬೇಟೆಗೆಂದು ಹೋಗಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದ ಬಳಿ ಗುಂಡು ತಗುಲಿ ಶಂಕರ್ ಎಂಬುವವರು ಸಾವನ್ನಪ್ಪಿದ್ದರು.

ಸೋಮವಾರ ರಾತ್ರಿ ನಾಲ್ವರು ಸ್ನೇಹಿತರಾದ ಕೋದಂಡಪ್ಪ, ಶ್ರೀನಿವಾಸ, ಚೌಡಪ್ಪ ಮತ್ತು ಶಂಕರ್ ಬೇಟೆಗೆಂದು ತೆರಳಿದ್ದಾಗ ಈ ಘಟನೆ ನಡೆದಿತ್ತು. ಲೈಸೆನ್ಸ್ ಹೊಂದಿದ್ದ ಕೋದಂಡಪ್ಪ ಗನ್​ನಿಂದ ಮಿಸ್ ಫೈರ್​​ ಆದಾಗ ಗುಂಡು ನೇರವಾಗಿ ಶಂಕರ್ ಹಣೆಗೆ ಬಿದ್ದಿತ್ತು. ಶಂಕರ್ ಸ್ಥಳದಲ್ಲೇ ಮೃತಪಟ್ಟಿದ್ದ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

(hunting misfire allegedly hunter misfire labourer died in nanjangud)

ಅಲ್ಮೇರಾದಲ್ಲಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದು ಆಡುತ್ತಿದ್ದ ಬಾಲಕನ ತೊಡೆಗೆ ಗುಂಡು ತಗುಲಿ ಗಾಯ

Published On - 3:52 pm, Thu, 17 June 21

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು