AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shootout: ನಂಜನಗೂಡಿನಲ್ಲಿ ಶೂಟೌಟ್, ಕಾಡು ಮೊಲ ಬೇಟೆಗಾಗಿ ರಾತ್ರಿ ವೇಳೆ ಹಾರಿಸಿದ ಗುಂಡಿಗೆ ಕಾರ್ಮಿಕ ಬಲಿ

Hunting: ಎರಡು ವರ್ಷಗಳ ಹಿಂದೆ ನಂಜನಗೂಡಿಗೆ ಬಂದಿದ್ದ ಪ್ರಸನ್ನನ್, ನಂಜನಗೂಡು ತಾಲೂಕಿನ ಕುರಿಹುಂಡಿ ಗ್ರಾಮದ ಗುರುಸ್ವಾಮಿ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ರಾತ್ರಿ 8.30ರಲ್ಲಿ ಕಾಡುಮೊಲ ಬೇಟೆಯಾಡಲು ತನ್ನ ಬಂದೂಕಿನಿಂದ ಗುಂಡು ಹಾರಿಸಿದ್ದ ನಿಶಾದ್ ಗುರಿ ತಪ್ಪಿ ಪ್ರಸನ್ನನ್ ಕಾಲಿಗೆ ಗುಂಡು ಹೊಡೆದಿದ್ದಾನೆ.

Shootout: ನಂಜನಗೂಡಿನಲ್ಲಿ ಶೂಟೌಟ್, ಕಾಡು ಮೊಲ ಬೇಟೆಗಾಗಿ ರಾತ್ರಿ ವೇಳೆ ಹಾರಿಸಿದ ಗುಂಡಿಗೆ ಕಾರ್ಮಿಕ ಬಲಿ
ನಂಜನಗೂಡಿನಲ್ಲಿ ಶೂಟೌಟ್: ಕಾಡು ಮೊಲ ಬೇಟೆಗಾಗಿ ರಾತ್ರಿ ವೇಳೆ ಹಾರಿಸಿದ ಗುಂಡಿಗೆ ಕಾರ್ಮಿಕ ಬಲಿ
TV9 Web
| Edited By: |

Updated on:Jun 17, 2021 | 4:17 PM

Share

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಶೂಟೌಟ್ ನಡೆದಿದೆ. ಕಾಡು ಮೊಲ ಬೇಟೆಗಾಗಿ ಹಾರಿದ ಗುಂಡಿಗೆ ಕಾರ್ಮಿಕ ಬಲಿಯಾಗಿದ್ದಾನೆ. ಕಾರ್ಯ ಗ್ರಾಮದ ಬಳಿ ದುರ್ಘಟನೆ ನಡೆದಿದ್ದು, ಕೇರಳ ಮೂಲದ ಕಾರ್ಮಿಕ ಪ್ರಸನ್ನನ್ ಮೃತಪಟ್ಟವ. ಕಾಡು ಮೊಲದ ಬೇಟೆಗಾಗಿ ಗುಂಡು ಹಾರಿಸಿ ಕಾರ್ಮಿಕನ ಬಲಿ ಪಡೆದ ಆರೋಪಿ ನಿಶಾದ್ ಎಂದು ಗುರುತಿಸಲಾಗಿದೆ. ಆರೋಪಿ ನಿಶಾದ್ ಸಹ ಕೇರಳ ಮೂಲದವನೇ.

ಎರಡು ವರ್ಷಗಳ ಹಿಂದೆ ನಂಜನಗೂಡಿಗೆ ಬಂದಿದ್ದ ಪ್ರಸನ್ನನ್, ನಂಜನಗೂಡು ತಾಲೂಕಿನ ಕುರಿಹುಂಡಿ ಗ್ರಾಮದ ಗುರುಸ್ವಾಮಿ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ರಾತ್ರಿ 8.30ರಲ್ಲಿ ಕಾಡುಮೊಲ ಬೇಟೆಯಾಡಲು ತನ್ನ ಬಂದೂಕಿನಿಂದ ಗುಂಡು ಹಾರಿಸಿದ್ದ ನಿಶಾದ್ ಗುರಿ ತಪ್ಪಿ ಪ್ರಸನ್ನನ್ ಕಾಲಿಗೆ ಗುಂಡು ಹೊಡೆದಿದ್ದಾನೆ. ಕೂಡಲೇ ಪ್ರಸನ್ನನ್‌‌ನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಸನ್ನನ್ ಅಸುನೀಗಿದ್ದಾನೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಿಶಾದ್​ನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

hunting misfire allegedly hunter misfire labourer died in nanjangud 2

ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಿಶಾದ್​ನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಕಾಡುಹಂದಿಯ ಬೇಟೆಗೆ ಹಾಕಿದ್ದ ವಿದ್ಯುತ್​ ತಂತಿ ತುಳಿದು  ಗಾಯಗೊಂಡ ರೈತ

ಕೋಲಾರ: ಬೇಟೆಗೆ ಹಾಕಿದ್ದ ವಿದ್ಯುತ್​ ತಂತಿ ತುಳಿದು ರೈತನೊಬ್ಬ ಗಾಯಗೊಂಡಿದ್ದಾನೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪೆದ್ದಪಲ್ಲಿ ಗ್ರಾಮದ ಬಳಿ ರೈತ ಶ್ರೀನಿವಾಸ್ (50)​ ಗಂಭೀರವಾಗಿ ಗಾಯಗೊಂಡಿದ್ದಾನೆ.  ಕಿಡಿಗೇಡಿಗಳು ಕಾಡುಹಂದಿಯ ಬೇಟೆಗೆ ವಿದ್ಯುತ್ ತಂತಿ ಹಾಕಿದ್ದರು ಎನ್ನಲಾಗಿದೆ. ಈ ಹಿಂದೆಯೂ, ವಿದ್ಯುತ್ ತಂತಿ ತಗುಲಿ ಕಾಡಿನಲ್ಲಿರುವ ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ. ಇನ್ನು ರೈತ ಶ್ರೀನಿವಾಸ ಮೇಕೆಗಳಿಗೆ ಮೇವು ತರುವಾಗ ವಿದ್ಯುತ್​ ತಂತಿ ತುಳಿದು ಘಟನೆ ನಡೆದಿದೆ. ಗೌನಿಪಲ್ಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

ಇತ್ತೀಚೆಗೆ ಕೋಲಾರ ಜಿಲ್ಲೆಯಲ್ಲಿಯೂ ಇಂತಹುದೇ ಘಟನೆ ನಡೆದಿತ್ತು..

ಸೋಮವಾರ ರಾತ್ರಿ  (ಜೂನ್ 14) ನಾಲ್ವರು ಸ್ನೇಹಿತರು ಬೇಟೆಗೆಂದು ಹೋಗಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದ ಬಳಿ ಗುಂಡು ತಗುಲಿ ಶಂಕರ್ ಎಂಬುವವರು ಸಾವನ್ನಪ್ಪಿದ್ದರು.

ಸೋಮವಾರ ರಾತ್ರಿ ನಾಲ್ವರು ಸ್ನೇಹಿತರಾದ ಕೋದಂಡಪ್ಪ, ಶ್ರೀನಿವಾಸ, ಚೌಡಪ್ಪ ಮತ್ತು ಶಂಕರ್ ಬೇಟೆಗೆಂದು ತೆರಳಿದ್ದಾಗ ಈ ಘಟನೆ ನಡೆದಿತ್ತು. ಲೈಸೆನ್ಸ್ ಹೊಂದಿದ್ದ ಕೋದಂಡಪ್ಪ ಗನ್​ನಿಂದ ಮಿಸ್ ಫೈರ್​​ ಆದಾಗ ಗುಂಡು ನೇರವಾಗಿ ಶಂಕರ್ ಹಣೆಗೆ ಬಿದ್ದಿತ್ತು. ಶಂಕರ್ ಸ್ಥಳದಲ್ಲೇ ಮೃತಪಟ್ಟಿದ್ದ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

(hunting misfire allegedly hunter misfire labourer died in nanjangud)

ಅಲ್ಮೇರಾದಲ್ಲಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದು ಆಡುತ್ತಿದ್ದ ಬಾಲಕನ ತೊಡೆಗೆ ಗುಂಡು ತಗುಲಿ ಗಾಯ

Published On - 3:52 pm, Thu, 17 June 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ