Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಪತ್ನಿಯನ್ನು ಕಪಿಲಾ ನದಿಯಲ್ಲಿ ಮುಳುಗಿಸಿ ಹತ್ಯೆ; ಆರೋಪಿ ಪತಿ ಬಂಧನ

ಆರೋಪಿ ರಾಜೇಶ್‌, 5 ತಿಂಗಳ ಗರ್ಭಿಣಿಯಾಗಿದ್ದ ದೇವಿಯನ್ನು ನಂಜನಗೂಡಿನ ಕಪಿಲಾ ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಹಾಗೂ ತನ್ನ ಮತ್ತೊಂದು ಮಗುವನ್ನೂ ಕೊಲೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ.

ಗರ್ಭಿಣಿ ಪತ್ನಿಯನ್ನು ಕಪಿಲಾ ನದಿಯಲ್ಲಿ ಮುಳುಗಿಸಿ ಹತ್ಯೆ; ಆರೋಪಿ ಪತಿ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 15, 2021 | 12:00 PM

ಮೈಸೂರು: ಗರ್ಭಿಣಿ ಪತ್ನಿಯನ್ನು ಕಪಿಲಾ ನದಿಯಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. ದೇವಿ(28) ಕೊಲೆಯಾದ ಗರ್ಭಿಣಿ. ರಾಜೇಶ್‌ ಕೊಲೆ ಮಾಡಿದ ಆರೋಪಿ. ಮುದ್ದಳ್ಳಿಯ ರಾಜೇಶ್‌ ತನ್ನ ಗರ್ಭಿಣಿ ಪತ್ನಿ ದೇವಿ(28) ಕೊಲೆ ಮಾಡಿದ್ದಾನೆ.

ಆರೋಪಿ ರಾಜೇಶ್‌, 5 ತಿಂಗಳ ಗರ್ಭಿಣಿಯಾಗಿದ್ದ ದೇವಿಯನ್ನು ನಂಜನಗೂಡಿನ ಕಪಿಲಾ ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಹಾಗೂ ತನ್ನ ಮತ್ತೊಂದು ಮಗುವನ್ನೂ ಕೊಲೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಸ್ಥಳೀಯರು ಮಗುವನ್ನು ರಕ್ಷಿಸಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂಜನಗೂಡು ಪೊಲೀಸರು ಆರೋಪಿ ರಾಜೇಶ್ನನ್ನು ಅರೆಸ್ಟ್ ಮಾಡಿದ್ದಾರೆ.

ರಸ್ತೆಯಲ್ಲಿ ಓಡಾಡುವ ವಿಚಾರಕ್ಕೆ ಕ್ಯಾತೆ ತೆಗೆದು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಹೊಸಳ್ಳಿಯಲ್ಲಿ ರಸ್ತೆಯಲ್ಲಿ ಓಡಾಡುವ ವಿಚಾರಕ್ಕೆ ಕ್ಯಾತೆ ತೆಗೆದು ಯೋಗೇಶ್ ಎಂಬುವವರ ಮೇಲೆ ಒಂದು ಗುಂಪು ಹಲ್ಲೆ ಮಾಡಿದೆ.

ಗ್ರಾಮದಲ್ಲಿ 2 ಸಮುದಾಯಗಳ ಮಧ್ಯೆ ಅಸಮಾಧಾನ ಭುಗಿಲೆದ್ದಿದೆ. ಘಟನೆಯಲ್ಲಿ ಗ್ರಾಮದ ಯೋಗೇಶ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸೈಕಲ್ ಚೈನ್‌ನಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ. ಗ್ರಾಮಕ್ಕೆ ಮೈಸೂರು ಎಸ್‌ಪಿ ಆರ್.ಚೇತನ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ಪ್ರಕರಣ ಸಂಬಂಧ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕೈಗಾರಿಕಾ ಪ್ರದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಆತಂಕ; ರಾಬರಿ ಗ್ಯಾಂಗ್​ಗೆ ಭಯಭೀತರಾದ ಕಾರ್ಮಿಕರು

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು