ಮೈಸೂರು: ಹಾಸ್ಟೆಲ್​ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ

ಮೈಸೂರಿನ ಮಾನಸ ಗಂಗೋತ್ರಿ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ಹೈದರಾಬಾದ್​​ ಮೂಲದ ಪ್ರಥಮ BSc ವಿದ್ಯಾರ್ಥಿಯೋರ್ವ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮತ್ತೊಂದೆಡೆ ಕಚೇರಿ ಬಳಿ ಸಿಗರೇಟ್ ಸೇದಬೇಡ ಎಂದಿದ್ದಕ್ಕೆ ಕಂದಾಯ ನಿರೀಕ್ಷಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನಲ್ಲಿ ನಡೆದ ಈ ಪ್ರತ್ಯೇಕ ಘಟನೆಗಳ ವಿವರ ಈ ಕೆಳಗಿನಂತಿದೆ.

ಮೈಸೂರು: ಹಾಸ್ಟೆಲ್​ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ
ಪ್ರಾತಿನಿಧಿಕ ಚಿತ್ರ
Edited By:

Updated on: Dec 07, 2023 | 7:48 AM

ಮೈಸೂರು, (ಡಿಸೆಂಬರ್ 07): ಮೈಸೂರಿನ ಮಾನಸ ಗಂಗೋತ್ರಿ(Mysuru manasa gangothri) ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ವಿದ್ಯಾರ್ಥಿಯ(Student) ಶವ ಪತ್ತೆಯಾಗಿದೆ. ಹೈದರಾಬಾದ್​​ (hyderabad) ಮೂಲದ ಪ್ರಥಮ BSc ವಿದ್ಯಾರ್ಥಿ ಅಕ್ಷಜ್​​(18) ಮೃತದೇಹ ಪತ್ತೆಯಾಗಿದೆ. ಮೃತ ಅಕ್ಷಜ್​ ಮುಖಕ್ಕೆ ಪ್ಲಾಸ್ಟಿಕ್​ ಕವರ್​​ ಬಿಗಿಯಲಾಗಿದೆ. ಹಾಗೇ ಕೈಗಳನ್ನು ಕಟ್ಟಿಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಷಜ್​ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಆಫೀಸ್​ ಬಳಿ ಸಿಗರೇಟ್​​ ಸೇದಬೇಡ ಎಂದಿದ್ದಕ್ಕೆ ಅಧಿಕಾರಿ ಮೇಲೆ ಹಲ್ಲೆ

ಮೈಸೂರು: ಆಫೀಸ್​ ಬಳಿ ಸಿಗರೇಟ್​​ ಸೇದಬೇಡ ಎಂದಿದ್ದಕ್ಕೆ ಕಂದಾಯ ನಿರೀಕ್ಷಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಬಸವನಗುಡಿಯಲ್ಲಿರುವ ಪಾಲಿಕೆ ವಲಯ ಕಚೇರಿ 5ರಲ್ಲಿ ನಡೆದಿದೆ. ಕಂದಾಯ ನಿರೀಕ್ಷಕ ನಂದಕುಮಾರ್​​ ಮೇಲೆ ಧನುಷ್​​ ಎಂಬಾತ ಹಲ್ಲೆ ಮಾಡಿದ್ದಾನೆ. ಧನುಷ್ ಕಚೇರಿ ಮುಂಭಾಗ ಸಿಗರೇಟು ಸೇದುತ್ತಿದ್ದ. ಇದನ್ನು ಗಮನಿಸಿದ ಕಂದಾಯ ನಿರೀಕ್ಷಕ ನಂದಕುಮಾರ್, ಇಲ್ಲಿ ಸಿಗರೇಟು ಸೇದಬೇಡಿ ಹೋಗಿ ಎಂದಿದ್ದಾರೆ. ಇದರಿಂದ ಕುಪಿತಗೊಂಡ ಧನುಷ್, ನನ್ನನ್ನು ಹೋಗು ಎನ್ನಲು ನೀನು ಯಾರು ಎಂದು ಹಲ್ಲೆ ನಡೆಸಿದ್ದಾನೆ.

ಧನುಷ್​​ ಎಂಬಾತ ಮೈಸೂರು ನಗರದ ಕುಂಬಾರ ಕೊಪ್ಪಲಿನ ನಿವಾಸಿಯಾಗಿದ್ದು, ನನ್ನನ್ನು ಹೋಗು ಎನ್ನಲು ನೀನು ಯಾರು ಎಂದು ಕಚೇರಿಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಅವಾಚ್ಯ ಶಬ್ದದಿಂದ ನಿಂದಿಸಿ ಹಲ್ಲೆ ನಡೆಸಿದ ದೃಶ್ಯ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈಸೂರು ಮೇಟಗಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us