AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬಡವ, ನನ್ನ ಕತ್ತು ಸೀಳ ಬೇಡಿ: ಉದಯಪುರ ಹತ್ಯೆ ಖಂಡಿಸಿ ಮೈಸೂರಿನಲ್ಲಿ ವಿಭಿನ್ನ ಅಭಿಯಾನ

ಮೈಸೂರು ಜಿಲ್ಲೆಯ ಬೀದಿಬದಿ ವ್ಯಾಪಾರಿಗಳು ಹಾಗೂ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ.

ನಾನು ಬಡವ, ನನ್ನ ಕತ್ತು ಸೀಳ ಬೇಡಿ: ಉದಯಪುರ ಹತ್ಯೆ ಖಂಡಿಸಿ ಮೈಸೂರಿನಲ್ಲಿ ವಿಭಿನ್ನ ಅಭಿಯಾನ
ಮೈಸೂರು ಜಿಲ್ಲೆಯ ನಂಜನಗೂಡು ಮತ್ತು ಟಿ.ನರಸೀಪುರದ ವ್ಯಾಪಾರಿಗಳು ಉದಯಪುರದ ಟೈಲರ್ ಹತ್ಯೆ ಖಂಡಿಸಿ ಪ್ರತಿಭಟಿಸಿದರು.
TV9 Web
| Edited By: |

Updated on: Jun 30, 2022 | 10:22 AM

Share

ಮೈಸೂರು: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಅವರ ಹತ್ಯೆ (Udaipur tailor Kanhaiya Lal) ಖಂಡಿಸಿ ಜಿಲ್ಲೆಯ ನಂಜನಗೂಡು ಮತ್ತು ಟಿ.ನರಸೀಪುರದ ಬೀದಿಬದಿ ವ್ಯಾಪಾರಿಗಳು ಹಾಗೂ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ವಿಭಿನ್ನ ಅಭಿಯಾನ ಆರಂಭಿಸಿದರು. ‘ನಾನು ಬಡವ, ನನ್ನ ಕತ್ತು ಸೀಳಬೇಡಿ’ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ‘ನಾನು ಸತ್ಯ ಹೇಳಲ್ಲ, ಸತ್ಯ ಹೇಳುವವರ ಪರವೂ ನಿಲ್ಲುವುದೂ ಇಲ್ಲ. ನಾನು ಬಡವ, ನನ್ನ ಕತ್ತು ಸೀಳಬೇಡಿ’ ಎಂದು ಅಂಗಡಿಗಳ ಎದುರು ನಾಮಫಲಕ‌ ಹಿಡಿದು ಅಭಿಯಾನ ನಡೆಸಿದರು.

ಪ್ರಕರಣದ ಹಿನ್ನೆಲೆ

ಬಿಜೆಪಿಯ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದ ರಾಜಸ್ಥಾನದ ಉದಯ್​ಪುರ್ ನಗರದ ನಿವಾಸಿ ಟೈಲರ್ ಕನ್ಹಯ್ಯಲಾಲ್ ಅವರನ್ನು ಜೂನ್ 28ರಂದು ಮುಸ್ಲಿಂ ಮೂಲಭೂತವಾದಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ಈ ಹತ್ಯೆಗೆ ಜೂನ್ 17ರಂದೇ ಭೂಮಿಕೆ ಸಿದ್ಧವಾಗಿತ್ತು ಎನ್ನುವ ಆಘಾತಕಾರಿ ವಿಚಾರ ನಂತರ ಬಹಿರಂಗವಾಗಿತ್ತು. ಕೊಲೆಗೆ 11 ದಿನ ಮೊದಲೇ, ಅಂದರೆ ಜೂನ್ 17ರಂದೇ ಕೊಲೆಗಡುಕ ಮೊಹಮದ್ ರಿಯಾಜ್ ಅಖ್ತಾರಿ ತನ್ನ ಉದ್ದೇಶವನ್ನು ಬಹಿರಂಗಪಡಿಸಿದ್ದ. ಅಷ್ಟೇ ಅಲ್ಲದೆ, ಅತ್ಯಂತ ಹೆಮ್ಮೆಯಿಂದ ತನ್ನ ಉದ್ದೇಶಿತ ಕೃತ್ಯಕ್ಕೆ ವಿವರಣೆಯನ್ನೂ ಕೊಟ್ಟುಕೊಂಡಿದ್ದ. ನಾನು ಮೊದಲ ಕೊಲೆ ಮಾಡಿದ ನಂತರ ಇನ್ನಷ್ಟು ಜನರನ್ನು ಇದೇ ರೀತಿ ಕೊಂದುಹಾಕಿ ಎಂದು ಕರೆ ನೀಡಿದ್ದ.

ಇತರರು ಸಹ ತನ್ನ ಮಾದರಿಯನ್ನು ಯಾವುದೇ ಹೆದರಿಕೆಯಿಲ್ಲದೆ ಅನುಸರಿಸಬೇಕು. ಒಂದು ವೇಳೆ ಸಾವು ಬಂದರೂ ನಾನು ಹೆದರುವುದಿಲ್ಲ. ಸಾವು ಎನ್ನುವುದು ಸ್ವರ್ಗವಿದ್ದಂತೆ. ಜೈಲಿಗೆ ಹೋದರೂ ಪರವಾಗಿಲ್ಲ. ಯಾವುದೇ ಚಿಂತೆಯಿಲ್ಲ ಎಂದು ಹೇಳಿದ್ದ. ಹಿಂದೂಗಳೊಂದಿಗೆ ಶಾಂತಿ ಮತ್ತು ಸೌಹಾರ್ದದಿಂದ ವರ್ತಿಸಬೇಕು ಎನ್ನುವ ಮುಸ್ಲಿಮ್ ಸಮುದಾಯದ ಹಿರಿಯ ಬಗ್ಗೆಯೂ ಅಖ್ತಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ. ಮುಸ್ಲಿಮೇತರರ ಬಗ್ಗೆ ಮಾತನಾಡಲು ನೀವು ಹೆದರುತ್ತೀರಿ. ಹಸಿರು ಬಳೆ ತೊಟ್ಟು ಮನೆಗಳಲ್ಲಿಯೇ ಇರಿ ಎಂದು ಹೇಳಿದ್ದ.

ಶಿರಚ್ಛೇದದ ವಿಡಿಯೊ ಕಿಚ್ಚು ಹೊತ್ತಿಸುವಂತಿದೆ. ಅದನ್ನು ನೋಡಬೇಡಿ ಎಂದು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಮಾಧ್ಯಮಗಳಿಗೂ ಇಂಥ ವಿಡಿಯೊ ಪ್ರಸಾರ ಮಾಡಬೇಡಿ ಎಂದು ವಿನಂತಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಸ್ಥಾನ ಪೊಲೀಸ್ ಇಲಾಖೆಯ ಎಡಿಜಿ (ಕಾನೂನು ಸುವ್ಯವಸ್ಥೆ) ಹವಾ ಸಿಂಗ್ ಘುಮಾರಿಯಾ, ಇದು ಮನಸ್ಸು ಕದಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​