AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ನಿಜವಾದ ಜನ್ಮ ದಿನ ನನಗೆ ಗೊತ್ತಿಲ್ಲ; ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ನಾವು ಎಷ್ಟು ವರ್ಷ ಇದ್ದೇವೇ ಎಂಬುವುದು ಮುಖ್ಯವಲ್ಲ. ಇರುವಷ್ಟು ದಿನವೂ ಆರೋಗ್ಯವಾಗಿ ಜೀವಿಸಬೇಕು. 2000ರಲ್ಲಿ 2 ಸ್ಟೆಂಟ್ ಹಾಕಿಸಿದ್ದೇನೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ನನ್ನ ನಿಜವಾದ ಜನ್ಮ ದಿನ ನನಗೆ ಗೊತ್ತಿಲ್ಲ; ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 11, 2021 | 11:58 AM

Share

ಮೈಸೂರು: ನಾನು ಜನಿಸಿದ ನಿಖರ ದಿನಾಂಕ ನನ್ನ ತಂದೆ-ತಾಯಿ ಸೇರಿದಂತೆ ನನಗೂ ಗೊತ್ತಿಲ್ಲ. ಹಾಗಾಗಿ ನಾನು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರಲಿಲ್ಲ. ಆದರೆ ಶಾಲೆಗೆ ಸೇರಿದಾಗ ನೀಡಿರುವ ಆಗಸ್ಟ್ 12ನ್ನೇ ನನ್ನ ಜನ್ಮ ದಿನವೆಂದುಕೊಂಡಿರುವ ಅಭಿಮಾನಿಗಳು ಹುಟ್ಟು ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ. ನಾನು ಈಗಲೂ ಗಟ್ಟಿ ಮುಟ್ಟಾಗಿದ್ದೇನೆ. ನಾನು ಮೊದಲು ಸಿಗರೇಟ್ ಸೇದುತ್ತಿದುದರಿಂದ ಹೃದಯ ನಾಳದಲ್ಲಿ ಬ್ಲಾಕ್ ಆಗಿತ್ತು ಪರಿಣಾಮ ನನ್ನ ಹೃದಯಕ್ಕೆ ಸ್ಟಂಟ್ ಅಳವಡಿಸಿದ್ದಾರೆ. ಅದನ್ನು ಹೊರತುಪಡಿಸಿದರೆ ನನಗೆ ಬೇರಾವುದೇ ಗಂಭೀರ ಕಾಯಿಲೆಗಳಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಡಯಾಬಿಟಿಸ್ ಬಂದರೆ ಬೇರೆ ಬೇರೆ ಖಾಯಿಲೆಗಳು ಬರುತ್ತವೆ. ನನಗೆ ಡಯಾಬಿಟಿಕ್ ಬಂದರೂ ಎಚ್ಚರಿಕೆ ವಹಿಸಿದ್ದರಿಂದ ನನ್ನ ಆರೋಗ್ಯ ಈಗಲೂ ಉತ್ತಮವಾಗಿದೆ. ನಾವು ಎಷ್ಟು ವರ್ಷ ಇದ್ದೇವೆ ಎಂಬುವುದು ಮುಖ್ಯವಲ್ಲ. ಇರುವಷ್ಟು ದಿನವೂ ಆರೋಗ್ಯವಾಗಿ ಜೀವಿಸಬೇಕು. 2000ರಲ್ಲಿ 2 ಸ್ಟೆಂಟ್ ಹಾಕಿಸಿದ್ದೇನೆ. ನಾನು ಈಗ ಆ್ಯಕ್ಟಿವ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿ ಯಾವತ್ತೂ ಸಾಮಾಜಿಕ ನ್ಯಾಯದ ಪರ ಇರಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಪಕ್ಷದ ವಿರುದ್ಧ ಆರೋಪ ಮಾಡಿದ್ದು, ಬಿಜೆಪಿ ಯಾವತ್ತೂ ಸಾಮಾಜಿಕ ನ್ಯಾಯದ ಪರ ಇರಲ್ಲ. ಬಿಜೆಪಿಯವರು ಯಾವತ್ತೂ ಮೀಸಲಾತಿ ಪರವಾಗಿ ಇಲ್ಲ. ಮುಂದುವರಿದ ಸಮುದಾಯಕ್ಕೂ ಮೀಸಲಾತಿ ಕೊಟ್ಟಿದ್ದಾರೆ. ಬಡವರಿಗೆ ಶೇಕಡಾ 10ರಷ್ಟು ಮೀಸಲಾತಿ ಕೊಟ್ಟಿದ್ದಾರೆ. ಹೀಗಾಗಿ ಅವರು ಈಗ ಮೀಸಲಾತಿ ವಿರುದ್ಧ ಮಾತನಾಡಲ್ಲ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ 16 ವರ್ಷಗಳ ಕಾಲ ಆಡಳಿತ ಮಾಡಿದೆ. ಇವರು ಯಾಕೆ ಜಾತಿ ಗಣತಿ ಮಾಡಬಾರದು? ಜಾತಿ ಗಣತಿ ಮಾಡಿದರೆ ಬಡವರು ಯಾರೆಂದು ತಿಳಿಯುತ್ತದೆ. ಆ ನಂತರ ಯೋಜನೆಗಳನ್ನು ರೂಪಿಸಿ ಅವರಿಗೆ ಸಹಾಯ ಮಾಡಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಜಾತಿಗಣತಿ ಬಿಡುಗಡೆ ಮಾಡದ ವಿಚಾರವಾಗಿ ಮಾತನಾಡಿದ ಅವರು, ಒತ್ತಾಯ ಮಾಡುತ್ತಾರೆಂದು ಮೀಸಲಾತಿ ಕೊಡಲು ಸಾಧ್ಯವಿಲ್ಲ. ಈ ಬಗ್ಗೆ ಬಿಜೆಪಿಯವರನ್ನೇ ಕೇಳಬೇಕು. ನಾನು ಅಧಿಕಾರದಲ್ಲಿದ್ದಾಗ ಜಾತಿಗಣತಿ ಸಿದ್ಧವಾಗಿರಲಿಲ್ಲ. ಕುಮಾರಸ್ವಾಮಿ ಕಾಲದಲ್ಲಿ ಜಾತಿಗಣತಿ ಸಿದ್ಧವಾಗಿತ್ತು. ಜಾತಿಗಣತಿ ಬಿಡುಗಡೆ ಬೇಡವೆಂದು ಹೆಚ್​ಡಿಕೆ ಹೇಳಿದ್ದರು. ಸಂವಿಧಾನಬದ್ಧವಾಗಿದ್ದಾಗ ವರದಿ ಬಿಡುಗಡೆ ಮಾಡಬೇಕು. ಈಗಿನ ಸರ್ಕಾರ ಜಾತಿಗಣತಿ ವರದಿ ಬಿಡುಗಡೆ ಮಾಡಲಿ. ನಾವು ಅಧಿಕಾರಕ್ಕೆ ಬಂದರೆ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸಂಪುಟದಲ್ಲಿ ಮೈಸೂರು ಮೂಲೆಗುಂಪು; ಸಿದ್ಧರಾಮಯ್ಯ ಪ್ರಭಾವ ತಗ್ಗಿಸುವ ಅವಕಾಶ ಕೈಚೆಲ್ಲಿತೇ ಬಿಜೆಪಿ ಹೈಕಮಾಂಡ್?

ಮುಂದಿನ ಸಿಎಂ ಸಿದ್ಧರಾಮಯ್ಯ ಎಂದಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ನನಗೆ ಯಾವುದೇ ಎಚ್ಚರಿಕೆ ನೀಡಿಲ್ಲ: ಶಾಸಕ ಜಮೀರ್ ಅಹ್ಮದ್

Published On - 11:37 am, Wed, 11 August 21

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ