Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ನಿಜವಾದ ಜನ್ಮ ದಿನ ನನಗೆ ಗೊತ್ತಿಲ್ಲ; ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ನಾವು ಎಷ್ಟು ವರ್ಷ ಇದ್ದೇವೇ ಎಂಬುವುದು ಮುಖ್ಯವಲ್ಲ. ಇರುವಷ್ಟು ದಿನವೂ ಆರೋಗ್ಯವಾಗಿ ಜೀವಿಸಬೇಕು. 2000ರಲ್ಲಿ 2 ಸ್ಟೆಂಟ್ ಹಾಕಿಸಿದ್ದೇನೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ನನ್ನ ನಿಜವಾದ ಜನ್ಮ ದಿನ ನನಗೆ ಗೊತ್ತಿಲ್ಲ; ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Follow us
TV9 Web
| Updated By: preethi shettigar

Updated on:Aug 11, 2021 | 11:58 AM

ಮೈಸೂರು: ನಾನು ಜನಿಸಿದ ನಿಖರ ದಿನಾಂಕ ನನ್ನ ತಂದೆ-ತಾಯಿ ಸೇರಿದಂತೆ ನನಗೂ ಗೊತ್ತಿಲ್ಲ. ಹಾಗಾಗಿ ನಾನು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರಲಿಲ್ಲ. ಆದರೆ ಶಾಲೆಗೆ ಸೇರಿದಾಗ ನೀಡಿರುವ ಆಗಸ್ಟ್ 12ನ್ನೇ ನನ್ನ ಜನ್ಮ ದಿನವೆಂದುಕೊಂಡಿರುವ ಅಭಿಮಾನಿಗಳು ಹುಟ್ಟು ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ. ನಾನು ಈಗಲೂ ಗಟ್ಟಿ ಮುಟ್ಟಾಗಿದ್ದೇನೆ. ನಾನು ಮೊದಲು ಸಿಗರೇಟ್ ಸೇದುತ್ತಿದುದರಿಂದ ಹೃದಯ ನಾಳದಲ್ಲಿ ಬ್ಲಾಕ್ ಆಗಿತ್ತು ಪರಿಣಾಮ ನನ್ನ ಹೃದಯಕ್ಕೆ ಸ್ಟಂಟ್ ಅಳವಡಿಸಿದ್ದಾರೆ. ಅದನ್ನು ಹೊರತುಪಡಿಸಿದರೆ ನನಗೆ ಬೇರಾವುದೇ ಗಂಭೀರ ಕಾಯಿಲೆಗಳಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಡಯಾಬಿಟಿಸ್ ಬಂದರೆ ಬೇರೆ ಬೇರೆ ಖಾಯಿಲೆಗಳು ಬರುತ್ತವೆ. ನನಗೆ ಡಯಾಬಿಟಿಕ್ ಬಂದರೂ ಎಚ್ಚರಿಕೆ ವಹಿಸಿದ್ದರಿಂದ ನನ್ನ ಆರೋಗ್ಯ ಈಗಲೂ ಉತ್ತಮವಾಗಿದೆ. ನಾವು ಎಷ್ಟು ವರ್ಷ ಇದ್ದೇವೆ ಎಂಬುವುದು ಮುಖ್ಯವಲ್ಲ. ಇರುವಷ್ಟು ದಿನವೂ ಆರೋಗ್ಯವಾಗಿ ಜೀವಿಸಬೇಕು. 2000ರಲ್ಲಿ 2 ಸ್ಟೆಂಟ್ ಹಾಕಿಸಿದ್ದೇನೆ. ನಾನು ಈಗ ಆ್ಯಕ್ಟಿವ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿ ಯಾವತ್ತೂ ಸಾಮಾಜಿಕ ನ್ಯಾಯದ ಪರ ಇರಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಪಕ್ಷದ ವಿರುದ್ಧ ಆರೋಪ ಮಾಡಿದ್ದು, ಬಿಜೆಪಿ ಯಾವತ್ತೂ ಸಾಮಾಜಿಕ ನ್ಯಾಯದ ಪರ ಇರಲ್ಲ. ಬಿಜೆಪಿಯವರು ಯಾವತ್ತೂ ಮೀಸಲಾತಿ ಪರವಾಗಿ ಇಲ್ಲ. ಮುಂದುವರಿದ ಸಮುದಾಯಕ್ಕೂ ಮೀಸಲಾತಿ ಕೊಟ್ಟಿದ್ದಾರೆ. ಬಡವರಿಗೆ ಶೇಕಡಾ 10ರಷ್ಟು ಮೀಸಲಾತಿ ಕೊಟ್ಟಿದ್ದಾರೆ. ಹೀಗಾಗಿ ಅವರು ಈಗ ಮೀಸಲಾತಿ ವಿರುದ್ಧ ಮಾತನಾಡಲ್ಲ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ 16 ವರ್ಷಗಳ ಕಾಲ ಆಡಳಿತ ಮಾಡಿದೆ. ಇವರು ಯಾಕೆ ಜಾತಿ ಗಣತಿ ಮಾಡಬಾರದು? ಜಾತಿ ಗಣತಿ ಮಾಡಿದರೆ ಬಡವರು ಯಾರೆಂದು ತಿಳಿಯುತ್ತದೆ. ಆ ನಂತರ ಯೋಜನೆಗಳನ್ನು ರೂಪಿಸಿ ಅವರಿಗೆ ಸಹಾಯ ಮಾಡಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಜಾತಿಗಣತಿ ಬಿಡುಗಡೆ ಮಾಡದ ವಿಚಾರವಾಗಿ ಮಾತನಾಡಿದ ಅವರು, ಒತ್ತಾಯ ಮಾಡುತ್ತಾರೆಂದು ಮೀಸಲಾತಿ ಕೊಡಲು ಸಾಧ್ಯವಿಲ್ಲ. ಈ ಬಗ್ಗೆ ಬಿಜೆಪಿಯವರನ್ನೇ ಕೇಳಬೇಕು. ನಾನು ಅಧಿಕಾರದಲ್ಲಿದ್ದಾಗ ಜಾತಿಗಣತಿ ಸಿದ್ಧವಾಗಿರಲಿಲ್ಲ. ಕುಮಾರಸ್ವಾಮಿ ಕಾಲದಲ್ಲಿ ಜಾತಿಗಣತಿ ಸಿದ್ಧವಾಗಿತ್ತು. ಜಾತಿಗಣತಿ ಬಿಡುಗಡೆ ಬೇಡವೆಂದು ಹೆಚ್​ಡಿಕೆ ಹೇಳಿದ್ದರು. ಸಂವಿಧಾನಬದ್ಧವಾಗಿದ್ದಾಗ ವರದಿ ಬಿಡುಗಡೆ ಮಾಡಬೇಕು. ಈಗಿನ ಸರ್ಕಾರ ಜಾತಿಗಣತಿ ವರದಿ ಬಿಡುಗಡೆ ಮಾಡಲಿ. ನಾವು ಅಧಿಕಾರಕ್ಕೆ ಬಂದರೆ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸಂಪುಟದಲ್ಲಿ ಮೈಸೂರು ಮೂಲೆಗುಂಪು; ಸಿದ್ಧರಾಮಯ್ಯ ಪ್ರಭಾವ ತಗ್ಗಿಸುವ ಅವಕಾಶ ಕೈಚೆಲ್ಲಿತೇ ಬಿಜೆಪಿ ಹೈಕಮಾಂಡ್?

ಮುಂದಿನ ಸಿಎಂ ಸಿದ್ಧರಾಮಯ್ಯ ಎಂದಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ನನಗೆ ಯಾವುದೇ ಎಚ್ಚರಿಕೆ ನೀಡಿಲ್ಲ: ಶಾಸಕ ಜಮೀರ್ ಅಹ್ಮದ್

Published On - 11:37 am, Wed, 11 August 21

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ