AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

Shilpa Nag: ಸಾಮಾಜಿಕ ಜಾಲತಾಣದಲ್ಲಿ ಐ ಸ್ಟ್ಯಾಂಡ್ ವಿತ್ ಅವರ್ ಕಮಿಷನರ್ ಎಂದು ತಮ್ಮ ವೈಯಕ್ತಿಕ ಭಾವಚಿತ್ರದೊಂದಿಗೆ ಪೋಸ್ಟ್​ ಹಂಚಿಕೊಳ್ಳುತ್ತಿದ್ದಾರೆ.

ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ
ಶಿಲ್ಪಾ ನಾಗ್ ಪರ ಅಭಿಯಾನ
TV9 Web
| Edited By: |

Updated on: Jun 03, 2021 | 7:51 PM

Share

ಮೈಸೂರು: ಅರಮನೆ ನಗರಿಯ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್​ ರಾಜೀನಾಮೆ ವಿಚಾರವಾಗಿ ಪಾಲಿಕೆ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದು, ಶಿಲ್ಪಾ ನಾಗ್​ರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಐ ಸ್ಟ್ಯಾಂಡ್ ವಿತ್ ಅವರ್ ಕಮಿಷನರ್ ಎಂದು ತಮ್ಮ ವೈಯಕ್ತಿಕ ಭಾವಚಿತ್ರದೊಂದಿಗೆ ಪೋಸ್ಟ್​ ಹಂಚಿಕೊಳ್ಳುತ್ತಿದ್ದಾರೆ.

ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ವಿಚಾರವಾಗಿ, ಪಾಲಿಕೆ ಪ್ರಭಾರ ಮೇಯರ್ ಅನ್ವರ್ ಬೇಗ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಆಯುಕ್ತರು ರಾಜೀನಾಮೆ ನೀಡಬಾರದು‌. ಪಾಲಿಕೆಯ 65 ಸದಸ್ಯರು ಶಿಲ್ಪಾ ನಾಗ್​ರ ಜತೆಗೆ ಇದ್ದೇವೆ. ಜಿಲ್ಲಾಧಿಕಾರಿ ಇಷ್ಟು ಕಿರುಕುಳ ನೀಡಿದ್ದಾರೆ ಅಂತಾ ನಮಗೂ ಗೊತ್ತಿರಲಿಲ್ಲ. ಮೈಸೂರು ಪಾಲಿಕೆಗಷ್ಟೇ ಅಲ್ಲ, ದೇಶಕ್ಕೆ ಈ ರೀತಿಯ ಅಧಿಕಾರಿ ಬೇಕು‌ ಎಂದು ತಿಳಿಸಿದರು.

ರಾಜೀನಾಮೆ ಅಂಗೀಕಾರ ಮಾಡಲ್ಲ: ಸಚಿವ ಸೋಮಶೇಖರ್ ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪಾ ನಾಗ್ ಅತ್ಯಂತ ದಕ್ಷತೆ, ಪ್ರಾಮಾಣಿಕತೆ ಮತ್ತು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ರಾಜಿನಾಮೆಯನ್ನು ಸರ್ಕಾರ ಯಾವ ಕಾರಣಕ್ಕೂ ಅಂಗೀಕಾರ ಮಾಡುವುದಿಲ್ಲ. ಈ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಮಾತನಾಡುತ್ತೇನೆ ಎಂದು ಸಹಕಾರ ಸಚಿವ ಸೋಮಶೇಖರ್ ಪತ್ರಿಕಾ ಪ್ರಕಟಣೆ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಶಿಲ್ಪಾ ನಾಗ್ ಅವರು ಸೇವೆಯಲ್ಲಿ ಮುಂದುವರಿಯುವಂತೆ ಮನವೊಲಿಸಲಾಗುವುದು. ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ. ಶುಕ್ರವಾರ ನಾನು ಮೈಸೂರು ಪ್ರವಾಸ ಕೈಗೊಂಡಿದ್ದು, ಆ ವೇಳೆ ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಸರ್ಕಾರಿ‌ ಕಾರು ಬಿಟ್ಟು ತೆರಳಿರುವ ಶಿಲ್ಪಾನಾಗ್ ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ಕೊಡುತ್ತೇನೆ ಎಂದು ಸುದ್ದಿಗೋಷ್ಠಿ ನಡೆಸಿದ ಬಳಿಕ‌ ಸ್ನೇಹಿತರ ಕಾರಿ‌ನಲ್ಲಿ ತೆರಳಿದರು. ಆನಂತರ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರ ಕಾರಿನ ಚಾಲಕ‌, ನೀವು ಮನೆಗೆ ಹೋಗಿ ಎಂದು ನಮ್ಮ ಬಳಿ ಹೇಳಿ ತೆರಳಿದ್ದಾರೆ. ಅವರು ಕಳೆದ ಮೂರ್ನಾಲ್ಕು ದಿನದಿಂದ ಊಟವನ್ನು ಸರಿಯಾಗಿ ಮಾಡಿಲ್ಲ. ಕಚೇರಿಗೆ ಊಟ ತೆಗೆದುಕೊಂಡು ಹೋದರೂ ಊಟ ಮಾಡುತ್ತಿರಲಿಲ್ಲ. ಬೇಸರದಿಂದ ಇದಂತೆ ಇದ್ದರು. ಅವರು ತುಂಬ ಶ್ರಮದಿಂದ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಯಾವ ಕಾರಣಕ್ಕೆ ಬೇಸರ ಇತ್ತು ಎಂಬುದನ್ನು ನಮಗೆ ತಿಳಿಸಿರಲಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಮೈಸೂರಿನಲ್ಲಿ ಐಎಎಸ್​ vs ಐಎಎಸ್​: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ

‘ಕೇಂದ್ರ ಸರ್ಕಾರವೇ ಕೊವಿಡ್​ 19 ಲಸಿಕೆ ಖರೀದಿಸಿ ಪೂರೈಕೆ ಮಾಡಲಿ..’-ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಒಡಿಶಾ ಸಿಎಂ

(I stand with our Commissioner Campaign on Mysore Corporation Commissioner Shilpa Nag in Social Site by Corporation members)

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ