AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕೊಡಗು ಕ್ಷೇತ್ರದಲ್ಲಿ ನಾನು ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತದೆ: ಪ್ರತಾಪ್ ಸಿಂಹ

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರವಾದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಯೇ ಕಾಂಗ್ರೆಸ್​​ಗೆ ದೊಡ್ಡ ಸವಾಲಾಗಿ ಪರಿಣಮಿಸಿರುವಾಗ ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈ ತಪ್ಪಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ಚಾಮುಂಡಿ ನನ್ನ ಕೈ ಬಿಡಲ್ಲ ಎಂದರು.

ಮೈಸೂರು ಕೊಡಗು ಕ್ಷೇತ್ರದಲ್ಲಿ ನಾನು ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತದೆ: ಪ್ರತಾಪ್ ಸಿಂಹ
ಮೈಸೂರು ಕೊಡಗು ಕ್ಷೇತ್ರದಲ್ಲಿ ನಾನು ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತದೆ ಎಂದ ಪ್ರತಾಪ್ ಸಿಂಹ
Follow us
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi

Updated on:Mar 09, 2024 | 7:53 PM

ಮೈಸೂರು, ಮಾ.9: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಗೊಂದಲದ ಗೂಡಾಗಿದೆ. ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈ ತಪ್ಪಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ಕಾಯಲು ಬೆಟ್ಟದ ಮೇಲೆ ತಾಯಿ ಇದ್ದಾಳೆ. ಚಾಮುಂಡಿ ನನ್ನ ಕೈ ಬಿಡಲ್ಲ ಎಂದರು. ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್​ಗೆ ಬೆಂಬಲಿಸುವ ವಿಚಾರವಾಗಿ ಮಾತನಾಡಿದ ಅವರು, ನಾನು ಗೆದ್ದರೆ ಸಿದ್ದರಾಮಯ್ಯ (Siddaramaiah) ಅವರು ಸೀಟು ಅಲುಗಾಡುತ್ತದೆ. ಪ್ರತಾಪ್ ಸಿಂಹ ಸೋಲಿಸಲು ಆಗಲ್ಲ ಎಂದು ಕಾಂಗ್ರೆಸ್‌ಗೆ ಗೊತ್ತಿದೆ. ಹೀಗಿರುವಾಗ ಕಾಂಗ್ರೆಸ್‌ಗೆ ನಮ್ಮ ಪಕ್ಷದವರು ಹೇಗೆ ಸಪೋರ್ಟ್ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಸಂಸದರ ಟಿಕೆಟ್ ನಿರ್ಧಾರ ಮಾಡುವುದು ಜನರು. ರಾಜ್ಯದಲ್ಲಿ 28 ಮಂದಿ ಸಂಸದರು ಇದ್ದಾರೆ. ಅವರ ಕೆಲಸಗಳನ್ನು ನೋಡಿ ಟಿಕೆಟ್ ನೀಡುತ್ತಾರೆ. ಜನ ಖುಷಿಯಾಗಿದ್ದಾರೆ ಅಂದರೆ ಮೇಲಿನವರು ಅದೇ ನಿರ್ಧಾರ ಮಾಡುತ್ತಾರೆ. ಮೈಸೂರಿನಲ್ಲಿ ನಾನು ಇಂತಾ ಕೆಲಸ ಮಾಡಿಲ್ಲ ಎಂದು ಹೇಳಲಿ. ಯಾರೋ ಒಂದಷ್ಟು ಜನ ಅಸೂಯೆಗೆ ಮಾತನಾಡುತ್ತಾರೆ. ಆದರೆ, ಕಾಯಲು ಬೆಟ್ಟದ ಮೇಲೆ ಒಬ್ಬಳು ತಾಯಿ ಇದ್ದಾಳೆ ಎಂದರು.

ಮೈಸೂರಿನಲ್ಲಿ ಯಾರೂ ಮಾಡಿರದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಗ್ರೇಟರ್ ಮೈಸೂರು ಮಾಡಲು ನಾನು ಹೊರಟಿದ್ದೇನೆ. ಹಲವು ಅಭಿವೃದ್ಧಿ ಯೋಜನೆಗಳನ್ನು ನಾನು ಮಾಡಿದ್ದೇನೆ. ಹಿಂದುತ್ವದ ಪರ ನಾನು ಕೆಲಸ ಮಾಡಿದ್ದೇನೆ. ಕರ್ನಾಟಕ ಆಳಿದವರಿಂದಲೂ ಔಟರ್ ರಿಂಗ್‌ರೋಡ್ ತರಲು ಆಗಿಲ್ಲ. ನಾನು ರಾಜ್ಯದಲ್ಲಿ ಮೊದಲಾಗಿ ಮೈಸೂರಿಗೆ ಮೊದಲ ಪೆರಿಪೆರಲ್ ರಿಂಗ್ ರೋಡ್ ತರಲು ಹೊರಟಿದ್ದೇನೆ ಎಂದರು.

ಇದನ್ನೂ ಓದಿ: ಕೊಡಗು-ಮೈಸೂರು ಕ್ಷೇತ್ರದಿಂದ ಯದುವೀರ್ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆಯೇ? ಪ್ರತಾಪ್ ಸಿಂಹ ರನೌಟ್?

ಕೆಲಸವೇ ನನಗೆ ಶ್ರೀರಕ್ಷೆ. ಮೈಸೂರು ಕೊಡಗು ಜನರು ನನ್ನ ಕೈ ಹಿಡಿಯುತ್ತಾರೆ. ತಾಯಿ ಚಾಮುಂಡಿ ನನ್ನ ಕೈ ಬಿಡಲ್ಲ. ಈ ಬಾರಿಯೂ ನಾನು 2 ರಿಂದ 3 ಲಕ್ಷ ಮತಗಳಿಂದ ಗೆಲ್ಲುತ್ತೇನೆ. ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ. 10 ವರ್ಷ ನಿಯತ್ತಾಗಿ ಕೆಲಸ ಮಾಡಿದ್ದೇನೆ. ಪ್ರೀತಿಸುವವರು ಅಷ್ಟೇ ಪ್ರಮಾಣದಲ್ಲಿ ಇದೆ. ರಾಜಕೀಯದಲ್ಲಿ ದ್ವೇಷ ಅಸೂಯೆ ಇದ್ದೆ ಇರುತ್ತದೆ. ಆದರೆ, ಮೈಸೂರು ಕೊಡಗು ಜನರ ಪ್ರೀತಿಯ ನಡುವೆ ಅಸೂಯೆ ಯಾವುದು ನಿಲ್ಲಲ್ಲ ಎಂದರು.

ಕಾರ್ಯಕರ್ತರು ಯಾರು ಅಭ್ಯರ್ಥಿ ಆಗಬೇಕೆಂದು ಹೇಳಿದ್ದಾರೆ. ಅದರ ಶೀಟ್ ನೋಡಿದರೆ ಗೊತ್ತಾಗುತ್ತದೆ. ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾದಗ ನಿಂತಿದ್ದು ನಾನು. ಬಿಜೆಪಿ ಕಾರ್ಯಕರ್ತರು ಖುಷಿ ಪಡುವ ಸಂಸದ ಇದ್ದರೆ ಅದು ನಾನೇ. ಈ ವಿಚಾರವಾಗಿ ಪ್ರತಾಪ್ ಸಿಂಹ ಎರಡು ಕೇಸ್ ಹಾಕಿಸಿಕೊಂಡಿದ್ದಾನೆ. ಪ್ರತಾಪ್ ಸಿಂಹ ರೂಲರ್ ಅಲ್ಲ, ಕೆಲಸಗಾರ. ಈ ಭಾಗದಲ್ಲಿ ಹನುಮ ಜಯಂತಿ ಆಗುತ್ತಿದ್ದರೆ ಅದಕ್ಕೆ ಪ್ರತಾಪ್ ಸಿಂಹ ಕಾರಣ ಎಂದರು.

ಜನರು ನನ್ನ ಕೈ ಹಿಡಿಯಲು ರೆಡಿ ಇದ್ದಾರೆ. ಪಕ್ಷ ನನ್ನ ಕೈ ಬಿಡಲ್ಲ ಎಂಬ ನಂಬಿಕೆ ಇದೆ. ಜನರಿಗೆ ರೂಲರ್ ಬೇಡಾ, ಬೇಕಿರೋದು ಕೆಲಸಗಾರ. ಪತ್ರಕರ್ತನಾಗಿದ್ದವನನ್ನು ಎರಡು ಬಾರಿ ಎಂಪಿ ಮಾಡಿದ್ದು ಬಿಜೆಪಿ. ಕಾಂಗ್ರೆಸ್ ಅವರಿಗೆ ಅಭ್ಯರ್ಥಿ ಹುಡುಕಲು ಆಗುತ್ತಿಲ್ಲ. ಇದರಿಂದ ಪ್ರತಾಪ್ ಸಿಂಹ ಶಕ್ತಿ ಏನು ಅಂತಾ ಕಾಂಗ್ರೆಸ್ ಅವರಿಗೆ ಗೊತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 pm, Sat, 9 March 24

1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ