AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯೇಂದ್ರನನ್ನ ಮಿನಿಸ್ಟರ್ ಮಾಡಿದರೆ ಗುಣಾತ್ಮಕ ಬದಲಾವಣೆ ಆಗುತ್ತಾ: ಪತ್ರಕರ್ತರ ಪ್ರಶ್ನೆಗೆ ಹೆಚ್.ವಿಶ್ವನಾಥ್ ವ್ಯಂಗ್ಯ

ಪಠ್ಯಪುಸ್ತಕ ಪರಿಷ್ಕರಣೆಗೆ ಹೆಚ್.ವಿಶ್ವನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ ಪಠ್ಯಪುಸ್ತಕ ಯಾವುದೇ ಕಾರಣಕ್ಕೂ ಬೇಡ.

ವಿಜಯೇಂದ್ರನನ್ನ ಮಿನಿಸ್ಟರ್ ಮಾಡಿದರೆ ಗುಣಾತ್ಮಕ ಬದಲಾವಣೆ ಆಗುತ್ತಾ: ಪತ್ರಕರ್ತರ ಪ್ರಶ್ನೆಗೆ ಹೆಚ್.ವಿಶ್ವನಾಥ್ ವ್ಯಂಗ್ಯ
ಹೆಚ್.ವಿಶ್ವನಾಥ್
TV9 Web
| Edited By: |

Updated on: May 21, 2022 | 3:06 PM

Share

ಮೈಸೂರು: ರಾಜ್ಯದಲ್ಲಿ ಸಚಿವ ಸಂಪುಟ ಚರ್ಚೆ ನಡೆಯುತ್ತಿದ್ದು, ವಿಜಯೇಂದ್ರಗೆ ಸಚಿವ ಸ್ಥಾನ ನೀಡುವುದಕ್ಕೆ ಹೆಚ್.ವಿಶ್ವನಾಥ್ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಮಿನಿಸ್ಟರ್ ಆಗ್ತಾರ ಎನ್ನುವ ಪತ್ರಕರ್ತರ ಪ್ರಶ್ನೆಗೆ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಆಗುವುದಾದರೆ ಆಗಲಿ ಬಿಡಿ. ಗುಣಾತ್ಮಕ ವಿಚಾರಕ್ಕೆ ಬದಲಾವಣೆಗಳು ಆಗಬೇಕು. ವಿಜಯೇಂದ್ರ ಮಿನಿಸ್ಟರ್ ಮಾಡಿದರೆ ಗುಣಾತ್ಮಕ ಬದಲಾವಣೆ ಆಗುತ್ತಾ ಎಂದು ಮೈಸೂರಿನಲ್ಲಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪ್ರಶ್ನೆ ಕೇಳಿದರು. ವಿಶ್ವನಾಥ್​ಗೆ ಸಚಿವ ಸ್ಥಾನ ನೀಡುವಂತೆ ಹೋರಾಟ ವಿಚಾರವಾಗಿ ಕೆಲವರು ಹೋರಾಟ ಮಾಡುತ್ತಾ ಇದ್ದಾರೆ. ಆದರೆ ಇವರು ಕೊಡಬೇಕಲ್ಲ ಎಂದು ಹೇಳಿದರು.

ಪಠ್ಯಪುಸ್ತಕ ಪರಿಷ್ಕರಣೆಗೆ ಹೆಚ್.ವಿಶ್ವನಾಥ್ ತೀವ್ರ ಅಸಮಾಧಾನ

ಪಠ್ಯಪುಸ್ತಕ ಪರಿಷ್ಕರಣೆಗೆ ಹೆಚ್.ವಿಶ್ವನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ ಪಠ್ಯಪುಸ್ತಕ ಯಾವುದೇ ಕಾರಣಕ್ಕೂ ಬೇಡ. ಯಜ್ಞ ಕುಂಡ ಯಾವ ಕಡೆ ಇರಬೇಕೆಂದು ಪಠ್ಯದಲ್ಲಿ ಸೇರ್ಪಡೆ ಮಾಡಿದ್ದು, ಇಂತಹ ಪಠ್ಯಬೋಧನೆ ಮಾಡುವುದು ಯಾರಿಗೆ ಬೇಕು? ಶಿಕ್ಷಣ ತಜ್ಞರಲ್ಲದವರು ಅಧ್ಯಕ್ಷರಾಗಿರುವುದು ದುರಂತ. ರೋಹಿತ್ ಚಕ್ರತೀರ್ಥ ಸಂಘ ಪರಿವಾರದ ಕಾರ್ಯಕರ್ತ. ಹೆಡ್ಗೆವಾರ್​ಗೂ ಟಿಪ್ಪುಗೆ ಹೋಲಿಕೆ ಮಾಡುತ್ತಿರುವುದು ಸರಿಯಲ್ಲ. ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಡಿದ ವೀರಚರಿತ್ರೆ ಗೊತ್ತಿಲ್ವಾ? ಟಿಪ್ಪು ಮಂಡಿಯೂರದೆ ತನ್ನ ಮಕ್ಕಳನ್ನು ಗಿರವಿ ಇಟ್ಟವನು ಎಂದು ಹೇಳಿದರು.

ಇದನ್ನೂ ಓದಿ: Tax On Gold: ಅಟ್ಟ ಏರಿ ಕುಳಿತಿದ್ದ ಚಿನ್ನದ ಬೆಲೆಯಲ್ಲಿ ಒಂದಿಷ್ಟು ಇಳಿಕೆ; ಮನೆಯಲ್ಲಿರುವ ಚಿನ್ನಕ್ಕೆ ತೆರಿಗೆ ಲೆಕ್ಕಾಚಾರ ಹೇಗೆ ಗೊತ್ತಾ?

ಮಳೆ ಅವಾಂತರ ಬೆಂಗಳೂರಿನಲ್ಲಿ ಮಳೆ ಅವಾಂತರ ವಿಚಾರವಾಗಿ ಮಾತನಾಡಿದ್ದು, ರಾಜಕಾಲುವೆ ಒತ್ತುವರಿಯಿಂದಲೇ ಸಮಸ್ಯೆಯಾಗಿದೆ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದ ವೇಳೆ ಬೆಂಗಳೂರಿನ ರಾಜಕಾಲುವೆ ಒತ್ತುವರಿ ತೆರವು ಆರಂಭಿಸಿದ್ದರು. ಆ ಜಾಗದಲ್ಲಿ ಪ್ರಸಿದ್ಧ ನಟ, ಶ್ರೀಮಂತ ರಾಜಕಾರಣಿ ಮನೆ ಇದ್ದವು ಎಂದು ಕಾರ್ಯಾಚರಣೆ ನಿಲ್ಲಿಸಿದರು. ಬಡವರು ಮಾತ್ರ ಮನೆ ಕಳೆದು ಕೊಂಡು ಬೀದಿಗೆ ಬಿದ್ದರು. ಶ್ರೀಮಂತರ ಮನೆಗಳು ಹಾಗೇ ಉಳಿದವು. ಶ್ರೀಮಂತರಿಗಾಗಿ ಬಡವರನ್ನು ಬೀದಿಗೆ ತಂದಿದ್ದಾರೆ. ಬೆಂಗಳೂರಿನ ಕೆ.ಆರ್. ಪುರಂಗೆ ಸಿಎಂ ಹೋದರೆ ಅಲ್ಲಿ ಹೂ ಎರಚುತ್ತಾರೆ. ಅಲ್ಲಿನ ಜನರ ಮನೆಗೆ ನೀರು ಹೋಗಿದೆ ಇವರು ಹೂ ಎರಚಿ ಸಂಭ್ರಮಿಸುತ್ತಾರೆ ಇದು ಸರಿನಾ? ಮೂಲಭೂತ ಸೌಕರ್ಯಕ್ಕೆ ಎಲ್ಲೆಡೆ ಅತಿ ಹೆಚ್ಚು ಹಣ ಖರ್ಚಾಗುತ್ತಿದೆ. ಪ್ರತಿ ಫಲ ಮಾತ್ರ ಇಲ್ಲ ಎಂದು ಹೇಳಿದರು.

ಮೈಸೂರು ಜಿಲ್ಲಾ ಮಂತ್ರಿ ಎಲ್ಲಿ ಹೋದ್ರು ? ಜಿಲ್ಲೆಯಲ್ಲಿ ಮಳೆಯಿಂದ ಅನಾಹುತವಾಗಿದೆ ನೀವು ಖುದ್ದು ಬಂದು ನೋಡಬೇಕು ತಾನೇ? ಸಿಎಂ ಎಲ್ಲಾ ಕಡೆ ಹೋಗಿ ಜನರ ಸಂಕಷ್ಟ ಅಲಿಸುತ್ತಿದ್ದಾರೆ. ಜಿಲ್ಲಾ ಮಂತ್ರಿಗಳು ಯಾಕೆ ಎಲ್ಲೂ ಹೋಗುತ್ತಿಲ್ಲ? ನಿಮಗೆ ಏನಾಗಿದೆ? ಎಂದು ಪ್ರಶ್ನಿಸಿದರು. ಜನಪ್ರತಿನಿಧಿಗಳ ಸಭೆ ನಡೆಸಿ ಸಮಸ್ಯೆ ಪರಿಹರಿಸಿ. ಹಿಂದೆ ಮೋದಿ ಮೈಸೂರಿಗೆ ಬಂದಾಗ ಮೈಸೂರು ಪ್ಯಾರಿಸ್ ಮಾಡ್ತಿನಿ ಅಂತ ಹೇಳಿದ್ದರು. ಈಗ ಮೈಸೂರು ಕೊಳಚೆಯಾಗುತ್ತಿದೆ. ಇದನ್ನು ಮೋದಿ ಬಂದಾಗ ಪ್ರಶ್ನೆ ಮಾಡಬೇಕು ಎಂದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?