AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅನ್ನಭಾಗ್ಯ ನಂತರ ಕ್ಷೀರಭಾಗ್ಯಕ್ಕೆ ಕುತ್ತು: ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲು ಯತ್ನ

ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲೇ ಕ್ಷೀರಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಹೌದು ಹುಣಸೂರು ತಾಲೂಕಿನ ಮಾದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಿಸುತ್ತಿದ್ದನ್ನು ಗ್ರಾಮಸ್ಥರು ಪತ್ತೆ ಹಚ್ಚಿದ್ದಾರೆ.

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅನ್ನಭಾಗ್ಯ ನಂತರ ಕ್ಷೀರಭಾಗ್ಯಕ್ಕೆ ಕುತ್ತು: ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲು ಯತ್ನ
ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲು ಯತ್ನ
ರಾಮ್​, ಮೈಸೂರು
| Edited By: |

Updated on: Jan 19, 2024 | 2:49 PM

Share

ಮೈಸೂರು, ಜನವರಿ 19: ಸಿದ್ದರಾಮಯ್ಯ (Siddaramaiah) ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, 2013ರಲ್ಲಿ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದರು. ಇದೀಗ ಅವರ ತವರು ಜಿಲ್ಲೆ ಮೈಸೂರಿನಲ್ಲೇ ಕ್ಷೀರಭಾಗ್ಯದ (Kshirabhagya) ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಹೌದು ಹುಣಸೂರು (Hunasur) ತಾಲೂಕಿನ ಮಾದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಿಸುತ್ತಿದ್ದನ್ನು ಗ್ರಾಮಸ್ಥರು ಪತ್ತೆ ಹಚ್ಚಿದ್ದಾರೆ. ಸರ್ಕಾರ ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳು ಹಾಗೂ ಗರ್ಭಿಣಿಯರಿಗೆ ಹಾಲಿನ ಪುಡಿ ನೀಡುತ್ತದೆ.

ಆದರೆ ದುರುಳರು ಈ ಹಾಲಿನ ಪುಡಿಯನ್ನು ಅಕ್ರವಾಗಿ ಬೇರೆಡೆ ಸಾಗಿಸಲು ಯತ್ನಿಸಿದ್ದರು. ಇದನ್ನು ತಿಳಿದ ಗ್ರಮಾಸ್ಥರು ಅಕ್ರವಾಗಿ ಸಾಗಿಸುತ್ತಿದ್ದ ಹುಣಸೂರಿನ ಶಬ್ಬೀರ್‌ ನಗರದ ಅಪ್ಸರ್ ಪಾಷಾನನ್ನು ರೆಡ್​​ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಅರ್ಧ ಕೆ.ಜಿಯ 40 ಪ್ಯಾಕೆಟ್ ಹಾಲಿನ ಪುಡಿ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕ್ಷೀರಭಾಗ್ಯ: ಹಾಲಿನಿಂದ ವಂಚಿತರಾದ ಅಂಗನವಾಡಿ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರು, ಕಾರಣವೇನು? ಇಲ್ಲಿದೆ ಓದಿ

ಅನ್ನಭಾಗ್ಯ ಅಕ್ಕಿ ದುರುಪಯೋಗ

ಕಳೆದ ವರ್ಷ ನವೆಂಬರ್​ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಯರಗನಹಳ್ಳಿ ಸೇರಿದಂತೆ ಮೈಸೂರಿನ ಹಲವು ಕಡೆ ಖರೀದಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡುವ ಜಾಲ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಅಪ್ರಾಪ್ತರನ್ನೇ ದಂಧೆಗೆ ಇಳಿಸಿದ್ದು, ಬಾಲಕರು ಆಟೋ, ಬೈಕ್​ಗಳಲ್ಲಿ ಬಂದು ಅನ್ನಭಾಗ್ಯ ಅಕ್ಕಿಯನ್ನ ಕೆಜಿಗೆ 15 ರೂಪಾಯಿಯಂತೆ ಖರೀದಿ ಮಾಡುತ್ತಿದ್ದರು. ಕಾಳಸಂತೆಯಲ್ಲಿ 50-60 ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಇದೇ ಅಕ್ಕಿ ಹೋಟೆಲ್​ಗಳಿಗೂ ಸರಬರಾಜಾಗುತ್ತಿತ್ತು.

ಪಡಿತರ ರದ್ದು

ಅಕ್ರಮ ದಂಧೆ ಸಕ್ರಿಯವಾಗಿರುವ ಬಗ್ಗೆ ‘ಟಿವಿ9’ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಮೈಸೂರು ಜಿಲ್ಲಾಡಳಿತ, ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವಂತಿಲ್ಲ. ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಅಕ್ರಮವಾಗಿ ಮಾರಾಟ ಮಾರಿದ್ರೆ ಪಡಿತರ ಚೀಟಿ ರದ್ದುಪಡಿಸ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!