AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವೈಫಲ್ಯ; ವಿಡಿಯೋ ಮಾಡಿ ವಿಷ ಸೇವಿಸಿದ್ದ ಯುವಕ ಸಾವು

ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಚಿಕ್ಕ ಚಿಕ್ಕ ವಿಷಯಗಳಿಗೆ ಬದುಕನ್ನು ಅಂತ್ಯವಾಗಿಸಿಕೊಳ್ಳುತ್ತಿದ್ದಾರೆ. ಇದೀಗ ಪ್ರೇಮ ವೈಫಲ್ಯ ಹಿನ್ನಲೆ ಮೈಸೂರು ತಾಲೂಕಿನ ಹಡಜನ ಗ್ರಾಮದಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಪೋಷಕರು ಕಣ್ಣೀರಿಡುತ್ತಿದ್ದಾರೆ.

ಪ್ರೇಮ ವೈಫಲ್ಯ; ವಿಡಿಯೋ ಮಾಡಿ ವಿಷ ಸೇವಿಸಿದ್ದ ಯುವಕ ಸಾವು
ಮಧುಸೂಧನ್ ಮೃತ ಯುವಕ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 23, 2024 | 4:06 PM

Share

ಮೈಸೂರು, ಆ.23: ಪ್ರೇಮ ವೈಫಲ್ಯ ಹಿನ್ನಲೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ತಾಲೂಕಿನ ಹಡಜನ ಗ್ರಾಮದಲ್ಲಿ ನಡೆದಿದೆ. ಮಧುಸೂಧನ್ ಮೃತ ಯುವಕ. ಇತ ಮೊನ್ನೆ ವಿಡಿಯೋ ಮಾಡಿ ವಿಷ ಸೇವಿಸಿದ್ದ. ಕೂಡಲೇ ಆತನನ್ನು ಪೋಷಕರು ಆಸ್ಪತ್ರೆಗೆ ಸೇರಿಸಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನರ್ಸಿಂಗ್ ಸ್ಟಾಪ್ ನೇಣಿಗೆ ಶರಣು

ವಿಜಯಪುರ: ನನ್ನ ಸಾವಿಗೆ ಸಹೋದ್ಯೋಗಿಗಳು ಕಾರಣವೆಂದು ಆರೋಪಿಸಿ ನರ್ಸಿಂಗ್ ಸ್ಟಾಪ್ ನೇಣಿಗೆ ಶರಣಾಗಿದ್ದಾರೆ. ತಾಳಿಕೋಟಿ ಸಮುದಾಯ ಆರೋಗ್ಯ ಕೇಂದ್ರದ ಸ್ಟಾಪ್ ನರ್ಸ್ ಶಶಿಕಾಂತ ಬೆಣ್ಣೂರು (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ಎರಡು ದಿನಗಳ ಹಿಂದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಹಿನ್ನಲೆ ವಿವಿಧ ಸಂಘಟನೆಗಳಿಂದ ತಾಳಿಕೋಟಿ ಪಟ್ಟಣ ಬಂದ್​ಗೆ ಕರೆ ನೀಡಲಾಗಿದ್ದು, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ರಸ್ತೆಗಳು ಬಿಕೋ ಎನ್ನುತ್ತಿದೆ. ಸ್ಟಾಪ್ ನರ್ಸ್ ಶಶಿಕಾಂತ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.

ಇದನ್ನೂ ಓದಿ:ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; 300 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ ಅಧಿಕಾರಿಗಳು

ಲಾರಿ ಡಿಕ್ಕಿಯಾಗಿ ರಸ್ತೆಯಲ್ಲಿ ತೆರಳುತ್ತಿದ್ದ ಬಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಸ್ತೆಯಲ್ಲಿ ನಡೆದು ಬರುತ್ತಿದ್ದ ಬಾಲಕನಿಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಸಾನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಕಳಿ ಬಳಿ ಸಂಭವಿಸಿದೆ. ಪಶ್ಚಿಮ ಬಂಗಾಳ ಮೂಲದ ಬಾಲಕ ಶಕೀಲ್(11) ಮೃತ ಬಾಲಕ. ಗುಲಾಮ್ ನೂರ್ ಹಾಗೂ ಹಂಗೀನಾ ದಂಪತಿಯ 3ನೇ ಪುತ್ರ ಈ ಶಕೀಲ್, ಇವರು ಹಾರೋಕ್ಯಾತನಹಳ್ಳಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು