AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಿಷ್ಕಾರಕ್ಕೆ ಮನನೊಂದು ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ವ್ಯಕ್ತಿ ಸಾವು

ನಂಜನಗೂಡು(Nanjanagudu)ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ವ್ಯಕ್ತಿಯೋರ್ವ ಬಹಿಷ್ಕಾರಕ್ಕೆ ಮನನೊಂದು ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ಸಾವನ್ನಪ್ಪಿದ್ದಾನೆ. ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಕ್ಕಾಗಿ ಮೃತ ತಾಯಿ ಕಣ್ಣೀರು ಹಾಕುತ್ತಿದ್ದಾರೆ.

ಬಹಿಷ್ಕಾರಕ್ಕೆ ಮನನೊಂದು ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ವ್ಯಕ್ತಿ ಸಾವು
ಸ್ವಾಮಿ (48) ಮೃತ ವ್ಯಕ್ತಿ
ದಿಲೀಪ್​, ಚೌಡಹಳ್ಳಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 24, 2024 | 7:31 PM

Share

ಮೈಸೂರು, ಸೆ.24: ಬಹಿಷ್ಕಾರಕ್ಕೆ ಮನನೊಂದು ವ್ಯಕ್ತಿಯೋರ್ವ ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡು(Nanjanagudu)ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ. ಸ್ವಾಮಿ (48) ಮೃತ ವ್ಯಕ್ತಿ. ಒಂದು ವರ್ಷದ ಹಿಂದೆ ಗ್ರಾಮ ಪಂಚಾಯಿತಿ ಚುನಾವಣೆ ಸಮಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮುಖಂಡರು ನಮಗೆ ಬಹಿಷ್ಕಾರ ಹಾಕಿದ್ದರು. ಒಂದು ಲಕ್ಷ ದಂಡ ಕಟ್ಟಿದರೆ ಮಾತ್ರ ಬಹಿಷ್ಕಾರ ವಾಪಸ್ಸು ಎಂದು ಹೇಳಿದ್ದರು.

ಈ ಹಿನ್ನಲೆ ಕಳೆದ ಒಂದು ವರ್ಷದಿಂದ ಗ್ರಾಮದ ಹೊರ ವಲಯದಲ್ಲಿ ನಮ್ಮ ಕುಟುಂಬ ವಾಸವಿತ್ತು. ಬಹಿಷ್ಕಾರದಿಂದ ಮನನೊಂದು ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ನನ್ನ ಮಗ ಸ್ವಾಮಿ ಅತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ತಾಯಿ ತಿಮ್ಮಮ್ಮ ಎನ್ನುವವರು ಗಂಭೀರ ಆರೋಪ ಮಾಡಿದ್ದು, ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:ಆತ್ಮಹತ್ಯೆ ತಾಣ ಆಗುತ್ತಿದೆಯಾ ನಮ್ಮ ಮೆಟ್ರೋ? 9 ತಿಂಗಳಲ್ಲಿ 7ನೇ ಘಟನೆ, ಇಬ್ಬರು ಸಾವು!

ಹೆಂಡತಿ ಮನೆಯವರ ವಿರುದ್ದ ವಿಡಿಯೋ ಮಾಡಿಟ್ಟು ವ್ಯಕ್ತಿ ಆತ್ಮಹತ್ಯೆ

ಕೋಲಾರ: ತಾಲೂಕಿನ ಮುದುವತ್ತಿ ಗ್ರಾಮದ ಬಳಿಯ ಮಾರ್ಕಂಡೇಶ್ವರ ಬೆಟ್ಟದಲ್ಲಿ ಪತ್ನಿಯ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಶ್ರೀಕಾಂತ್(31) ಎಂಬ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. ಪತ್ನಿ ಪಾವನಾ, ಮಾವ ಯಲ್ಲಪ್ಪರಿಂದ ಕಿರುಕುಳ ಹಾಗೂ ಕೊಲೆ ಬೆದರಿಕೆ ಇದೆ ಎಂದು ಆರೋಪಿಸಿ ವಿಡಿಯೋ ಮಾಡಿಟ್ಟು ಬಳಿಕ ನೇಣಿಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು