AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಮನೆಗೋಡೆ ಕುಸಿದು ಬಾಣಂತಿ ಸಾವು, ಬದುಕುಳಿದ ಮಗು ತಾಯಿ ಇಲ್ಲದೇ ತಬ್ಬಲಿ ಆಯ್ತು

ಕರ್ನಾಟಕದ ಹಲವೆಡೆ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದ್ದು, ಪಶ್ಚಿಮ ಘಟ್ಟಗಳಲ್ಲಿ ಗುಡ್ಡಕುಸಿದು ಅನೇಕರು ಸಾವನ್ನಪ್ಪಿದ್ದಾರೆ. ಇದೀಗ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ(Periyapatna) ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮಳೆಗೆ ಮನೆಗೋಡೆ ಬಾಣಂತಿ ಸಾವನ್ನಪ್ಪಿದ್ದು, ಬದುಕುಳಿದ ಮಗು ತಬ್ಬಲಿಯಾಗಿದೆ.

ಮಳೆಗೆ ಮನೆಗೋಡೆ ಕುಸಿದು ಬಾಣಂತಿ ಸಾವು, ಬದುಕುಳಿದ ಮಗು ತಾಯಿ ಇಲ್ಲದೇ ತಬ್ಬಲಿ ಆಯ್ತು
ಮನೆಗೋಡೆ ಕುಸಿದು ಬಾಣಂತಿ ಸಾವು
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 19, 2024 | 3:15 PM

Share

ಮೈಸೂರು, ಜು.19: ಭಾರಿ ಮಳೆ(Rain)ಯಿಂದ ಮನೆಗೋಡೆ ಕುಸಿದು ಬಾಣಂತಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ(Periyapatna) ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ. ಹೇಮಲತಾ(22) ಮೃತ ರ್ದುದೈವಿ. ಇತ್ತ ಅದೃಷ್ಟವಶಾತ್​ ಮಗುವೊಂದು ಪಾರಾಗಿದೆ. ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಜೋರಾಗಿದ್ದು, ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ದುರ್ಘಟನೆ ನಡೆದಿದೆ.

ಮಳೆಗೆ ಮನೆ ಕುಸಿದು ಹೈರಾಣಾ ತುಂಬು ಗರ್ಭಿಣಿ

ಬೆಳಗಾವಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು ಜನರ ಬದುಕನ್ನೇ ಬೀದಿಗೆ ತರುತ್ತಿದೆ. ರಾತೋರಾತ್ರಿ ಸುರಿದ ಮಳೆಗೆ, ಮನೆ ಕುಸಿದು ಬಿದ್ದು, 9 ತಿಂಗಳ ತುಂಬು ಗರ್ಭಿಣಿ ಹೈರಾಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಗೆ ಸಾವಂತ್ ತೇಗೂರು ಎಂಬುವವರ ಮನೆ ಕುಸಿದು ಬಿದ್ದಿದ್ದು, ಸಾವಂತ್‌ ಅವರು ಮಗಳನ್ನು ಹೆರಿಗೆಗೆ ಎಂದು ಮನೆಗೆ ಕರೆತಂದಿದ್ದರು. ಹೆರಿಗೆಗೆ 4 ದಿನ ಇರುವಾಗಲೇ ಮಳೆಗೆ ಮನೆ ಕುಸಿದಿದೆ. ಇದರಿಂದ ಮಗಳ ಹೆರಿಗೆಯ ನಿರೀಕ್ಷೆಯಲ್ಲಿದ್ದ ಅಪ್ಪ- ಅಮ್ಮನಿಗೆ ಬರಸಿಡಿಲು ಬಡಿದಂತಾಗಿದೆ. ತುರ್ತಾಗಿ ಬೇರೆಲ್ಲೂ ಮನೆ ಸಿಗದೇ ಇರುವುದರಿಂದ ತುಂಬು ಗರ್ಭಿಣಿ ಜತೆಗೆ ಕುಸಿದು ಬಿದ್ದಿರುವ ಮನೆಯಲ್ಲಿಯೇ ವಾಸಿಸುವ ದುಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ:ಉಕ್ಕಡಗಾತ್ರಿ ಪುಣ್ಯಕ್ಷೇತ್ರದ ಜನಕ್ಕೆ ತಪ್ಪದ ಸಂಕಷ್ಟ; ಮಳೆಗಾಲದ ಮೂರು ತಿಂಗಳು ಜಲ ದಿಗ್ಬಂಧನ

ಮನೆ‌ ಮೇಲ್ಛಾವಣಿ ಕುಸಿದು ಮೂವರ ಸಾವು

ಹಾವೇರಿ: ಇತ್ತ ಮಹಾಮಳೆಗೆ ಮನೆ‌ ಮೇಲ್ಛಾವಣಿ ಕುಸಿದು ಮಾದಾಪುರ ಗ್ರಾಮದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯವಾಗಿದ್ದು, ಸವಣೂರು ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಘಟನೆ ತಿಳಿಯುತ್ತಿದ್ದಂತೆ ಹಾವೇರಿ ಡಿಸಿ ವಿಜಯ್ ಮಹಾಂತೇಶ್ ದಾನಮ್ಮನವರ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಜೊತೆಗೆ ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Fri, 19 July 24

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು