AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಮನೆಗೋಡೆ ಕುಸಿದು ಬಾಣಂತಿ ಸಾವು, ಬದುಕುಳಿದ ಮಗು ತಾಯಿ ಇಲ್ಲದೇ ತಬ್ಬಲಿ ಆಯ್ತು

ಕರ್ನಾಟಕದ ಹಲವೆಡೆ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದ್ದು, ಪಶ್ಚಿಮ ಘಟ್ಟಗಳಲ್ಲಿ ಗುಡ್ಡಕುಸಿದು ಅನೇಕರು ಸಾವನ್ನಪ್ಪಿದ್ದಾರೆ. ಇದೀಗ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ(Periyapatna) ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮಳೆಗೆ ಮನೆಗೋಡೆ ಬಾಣಂತಿ ಸಾವನ್ನಪ್ಪಿದ್ದು, ಬದುಕುಳಿದ ಮಗು ತಬ್ಬಲಿಯಾಗಿದೆ.

ಮಳೆಗೆ ಮನೆಗೋಡೆ ಕುಸಿದು ಬಾಣಂತಿ ಸಾವು, ಬದುಕುಳಿದ ಮಗು ತಾಯಿ ಇಲ್ಲದೇ ತಬ್ಬಲಿ ಆಯ್ತು
ಮನೆಗೋಡೆ ಕುಸಿದು ಬಾಣಂತಿ ಸಾವು
ರಾಮ್​, ಮೈಸೂರು
| Edited By: |

Updated on:Jul 19, 2024 | 3:15 PM

Share

ಮೈಸೂರು, ಜು.19: ಭಾರಿ ಮಳೆ(Rain)ಯಿಂದ ಮನೆಗೋಡೆ ಕುಸಿದು ಬಾಣಂತಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ(Periyapatna) ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ. ಹೇಮಲತಾ(22) ಮೃತ ರ್ದುದೈವಿ. ಇತ್ತ ಅದೃಷ್ಟವಶಾತ್​ ಮಗುವೊಂದು ಪಾರಾಗಿದೆ. ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಜೋರಾಗಿದ್ದು, ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ದುರ್ಘಟನೆ ನಡೆದಿದೆ.

ಮಳೆಗೆ ಮನೆ ಕುಸಿದು ಹೈರಾಣಾ ತುಂಬು ಗರ್ಭಿಣಿ

ಬೆಳಗಾವಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು ಜನರ ಬದುಕನ್ನೇ ಬೀದಿಗೆ ತರುತ್ತಿದೆ. ರಾತೋರಾತ್ರಿ ಸುರಿದ ಮಳೆಗೆ, ಮನೆ ಕುಸಿದು ಬಿದ್ದು, 9 ತಿಂಗಳ ತುಂಬು ಗರ್ಭಿಣಿ ಹೈರಾಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಗೆ ಸಾವಂತ್ ತೇಗೂರು ಎಂಬುವವರ ಮನೆ ಕುಸಿದು ಬಿದ್ದಿದ್ದು, ಸಾವಂತ್‌ ಅವರು ಮಗಳನ್ನು ಹೆರಿಗೆಗೆ ಎಂದು ಮನೆಗೆ ಕರೆತಂದಿದ್ದರು. ಹೆರಿಗೆಗೆ 4 ದಿನ ಇರುವಾಗಲೇ ಮಳೆಗೆ ಮನೆ ಕುಸಿದಿದೆ. ಇದರಿಂದ ಮಗಳ ಹೆರಿಗೆಯ ನಿರೀಕ್ಷೆಯಲ್ಲಿದ್ದ ಅಪ್ಪ- ಅಮ್ಮನಿಗೆ ಬರಸಿಡಿಲು ಬಡಿದಂತಾಗಿದೆ. ತುರ್ತಾಗಿ ಬೇರೆಲ್ಲೂ ಮನೆ ಸಿಗದೇ ಇರುವುದರಿಂದ ತುಂಬು ಗರ್ಭಿಣಿ ಜತೆಗೆ ಕುಸಿದು ಬಿದ್ದಿರುವ ಮನೆಯಲ್ಲಿಯೇ ವಾಸಿಸುವ ದುಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ:ಉಕ್ಕಡಗಾತ್ರಿ ಪುಣ್ಯಕ್ಷೇತ್ರದ ಜನಕ್ಕೆ ತಪ್ಪದ ಸಂಕಷ್ಟ; ಮಳೆಗಾಲದ ಮೂರು ತಿಂಗಳು ಜಲ ದಿಗ್ಬಂಧನ

ಮನೆ‌ ಮೇಲ್ಛಾವಣಿ ಕುಸಿದು ಮೂವರ ಸಾವು

ಹಾವೇರಿ: ಇತ್ತ ಮಹಾಮಳೆಗೆ ಮನೆ‌ ಮೇಲ್ಛಾವಣಿ ಕುಸಿದು ಮಾದಾಪುರ ಗ್ರಾಮದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯವಾಗಿದ್ದು, ಸವಣೂರು ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಘಟನೆ ತಿಳಿಯುತ್ತಿದ್ದಂತೆ ಹಾವೇರಿ ಡಿಸಿ ವಿಜಯ್ ಮಹಾಂತೇಶ್ ದಾನಮ್ಮನವರ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಜೊತೆಗೆ ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Fri, 19 July 24

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!