AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನ ಮನೆಯನ್ನೂ ಬಿಡದ ಖದೀಮರು; ಅಂತ್ಯಸಂಸ್ಕಾರಕ್ಕೆ ತೆರಳಿದ್ದ ಮನೆಯಲ್ಲಿ ಚಿನ್ನಾಭರಣ ಸೇರಿ ಲಕ್ಷಾಂತರ ರೂ. ಹಣ ಕಳುವು

ಮೈಸೂರಿನ(Mysore) ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಎಂ.ಶ್ರೀ ನಗರದಲ್ಲಿ ಸಾವಿನ ಮನೆಯನ್ನೂ ಬಿಡದ ಕಳ್ಳರು, ಅಂತ್ಯ ಸಂಸ್ಕಾರಕ್ಕಾಗಿ ತೆರಳಿದ್ದ ವೇಳೆ ಮನೆಯ ಬೀಗ ಮುರಿದು ಚಿನ್ನಾಭರಣ, ನಗದು ಎಗರಿಸಿದ್ದಾರೆ. ಈ ಕುರಿತು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾವಿನ ಮನೆಯನ್ನೂ ಬಿಡದ ಖದೀಮರು; ಅಂತ್ಯಸಂಸ್ಕಾರಕ್ಕೆ ತೆರಳಿದ್ದ ಮನೆಯಲ್ಲಿ ಚಿನ್ನಾಭರಣ ಸೇರಿ ಲಕ್ಷಾಂತರ ರೂ. ಹಣ ಕಳುವು
ಅಂತ್ಯಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಚಿನ್ನಾಭರಣ ಸೇರಿ ಲಕ್ಷಾಂತರ ರೂ. ಹಣ ಕಳುವು
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 16, 2024 | 6:35 PM

ಮೈಸೂರು, ಜು.16: ಸಾವಿನ ಮನೆಯನ್ನೂ ಬಿಡದ ಖದೀಮರು, ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ವೇಳೆ ಮನೆಯಲ್ಲಿದ್ದ 1.34 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇರಿ 1 ಲಕ್ಷ ನಗದನ್ನು ಕಳ್ಳರು ದೋಚಿದ ಘಟನೆ ಮೈಸೂರಿನ(Mysore) ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಎಂ.ಶ್ರೀ ನಗರದಲ್ಲಿ ನಡೆದಿದೆ. ಬನ್ನೂರಿನಲ್ಲಿ ವಾಸವಿದ್ದ ಕಂಟ್ರಾಕ್ಟರ್ ಬಸವರಾಜು ಎಂಬುವವರ ತಾಯಿ ಮೃತಪಟ್ಟಿದ್ದರು. ಅದರಂತೆ ತಾಯಿಯ ಅಂತಿಮ ದರ್ಶನ ಪಡೆದು ಅಂತ್ಯ ಸಂಸ್ಕಾರಕ್ಕಾಗಿ ಬಸವರಾಜ್ ಕುಟುಂಬ ಸಮೇತ ತೆರಳಿದ್ದರು. ಈ ವೇಳೆ ಮನೆ ಬಾಗಿಲ ಬೀಗ ಮುರಿದು ಚಿನ್ನಾಭರಣ, ನಗದು ಎಗರಿಸಿದ್ದಾರೆ. ಈ ಕುರಿತು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಹೊರವಲಯದಲ್ಲಿ ನಿಲ್ಲದ ಸರಗಳ್ಳತನ

ಬೆಂಗಳೂರು: ನಗರದ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಎರಡು ಕಡೆ ಹಾಗೂ ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕಡೆ ಸರಣಿ ಸರಗಳ್ಳತನ ನಡೆದಿದೆ. ಹೌದು, ಮಾರಪ್ಪನಪಾಳ್ಯದ ಜಯಲಕ್ಷ್ಮಮ್ಮ(45) ಎಂಬ ಮಹಿಳೆಯ 3ಲಕ್ಷದ 50ಸಾವಿರ ಬೆಲೆಬಾಳುವ 50ಗ್ರಾಂ ಚಿನ್ನದ ಮಾಂಗಲ್ಯ ಸರ, ದೊಂಬರಹಳ್ಳಿಯ ಶಾಂತಮ್ಮ(72) ಎಂಬುವವರ 2ಲಕ್ಷ 40 ಸಾವಿರ ಬೆಲೆಬಾಳುವ 35 ಗ್ರಾಂ ಮಾಂಗಲ್ಯ ಸರ ಹಾಗೂ ಪೀಣ್ಯಾದ ಆಂಜಿನಮ್ಮ(30) ಅವರ 2 ಲಕ್ಷ ಬೆಲೆಬಾಳುವ 30ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಇಬ್ಬರು ದುಷ್ಕರ್ಮಿಗಳು ಎಗರಿಸಿದ್ದಾರೆ.

ಇದನ್ನೂ ಓದಿ:ಕಳ್ಳತನಕ್ಕೆ ಬಂದಿದ್ದ ಕಳ್ಳನ ಕರಾಮತ್ತು; ಸಾರ್ವಜನಿಕರ ಕೈಗೆ ಸಿಗ್ತಿದ್ದಂತೆ ಬಟ್ಟೆ ಬರೆ ಕಳಚಿ‌ ನಗ್ನನಾಗಿ ಪರಾರಿಯಾಗಲು ಯತ್ನ

ಅಡ್ರೆಸ್ ಕೇಳುವ ನೆಪದಲ್ಲಿ ಸರಗಳವು

ಇನ್ನು ಈ ಬ್ಲಾಕ್ ಪಲ್ಸರ್​ನಲ್ಲಿ ಬರುವ ಕಳ್ಳರು, ಅಡ್ರೆಸ್ ಕೇಳುವ ನೆಪದಲ್ಲಿ ಸರಗಳ್ಳತನ ಮಾಡುತ್ತಿದ್ದಾರೆ. ಜೊತೆಗೆ ದಾರಿಯಲ್ಲಿ ನಡೆದಾಡುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುವ ಈ ದುಷ್ಕರ್ಮಿಗಳ ಕುರಿತು ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಹಿನ್ನಲೆ ಎಚ್ಚೆತ್ತ ​ಪೊಲೀಸರು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿದ್ದಾರೆ. ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Tue, 16 July 24

Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್