AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ವಿರುದ್ಧ ಸಾಹಿತಿ ಎಸ್.ಎಲ್. ಬೈರಪ್ಪ ಸಾತ್ವಿಕ ಸಿಟ್ಟು, ಪ್ರಧಾನಿ ಮೋದಿಗೆ ಪತ್ರ

ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಚಾಮುಂಡಿಬೆಟ್ಟಕ್ಕೆ ತೊಂದರೆಯಾಗುತ್ತದೆ. ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ಇದಾಗಿದೆ. ಈ ಯೋಜನೆಯನ್ನ ಅನುಷ್ಠಾನಗೊಳಿಸಬಾರದು. ಜೊತೆಗೆ ಚಾಮುಂಡಿಬೆಟ್ಟಕ್ಕೆ ಹೋಗುವಂತ ವಾಹನಗಳಿಗೆ ನಿರ್ಬಂಧ ಹಾಕಬೇಕು ಎಂದು ಪತ್ರದಲ್ಲಿ ಎಸ್.ಎಲ್. ಬೈರಪ್ಪ ತಿಳಿಸಿದ್ದಾರೆ.

ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ವಿರುದ್ಧ ಸಾಹಿತಿ ಎಸ್.ಎಲ್. ಬೈರಪ್ಪ ಸಾತ್ವಿಕ ಸಿಟ್ಟು, ಪ್ರಧಾನಿ ಮೋದಿಗೆ ಪತ್ರ
ಹಿರಿಯ ಸಾಹಿತಿ S.L.ಭೈರಪ್ಪ (ಎಡ); ಪ್ರಧಾನಿ ಮೋದಿ(ಬಲ)
TV9 Web
| Edited By: ಆಯೇಷಾ ಬಾನು|

Updated on:Nov 23, 2021 | 12:34 PM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟ ಉಳಿಸಿ ಅಂತ ಸಾಹಿತಿ ಎಸ್.ಎಲ್. ಬೈರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಸರ್ಕಾರ ಕೈಗೊಂಡಿರುವ ಯೋಜನೆಯನ್ನು ಎಸ್.ಎಲ್. ಬೈರಪ್ಪ ವಿರೋಧಿಸಿದ್ದಾರೆ.

ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಚಾಮುಂಡಿಬೆಟ್ಟಕ್ಕೆ ತೊಂದರೆಯಾಗುತ್ತದೆ. ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ಇದಾಗಿದೆ. ಈ ಯೋಜನೆಯನ್ನ ಅನುಷ್ಠಾನಗೊಳಿಸಬಾರದು. ಜೊತೆಗೆ ಚಾಮುಂಡಿಬೆಟ್ಟಕ್ಕೆ ಹೋಗುವಂತ ವಾಹನಗಳಿಗೆ ನಿರ್ಬಂಧ ಹಾಕಬೇಕು. ಗಣ್ಯವ್ಯಕ್ತಿಗಳ ವಾಹನ ಸೇರಿದಂತೆ ಎಲ್ಲಾ ವಾಹನಗಳಿಗು ನಿರ್ಬಂಧ ವಿಧಿಸಬೇಕು. ಸರ್ಕಾರದಿಂದಲೇ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಗಳನ್ನು ಬಿಡಬೇಕು. ಜೊತೆಗೆ ಚಾಮುಂಡಿ ಬೆಟ್ಟದಲ್ಲಿ ವಾಸ ಇರುವ 4 ಸಾವಿರ ಜನರಿಗೆ ನಗರದಲ್ಲಿ ಸ್ಥಳವಕಾಶ ಮಾಡಿಕೊಡಬೇಕು. ದೇವಸ್ಥಾನದ ಅರ್ಚಕರು ಹಾಗೂ ದೇವಾಲಯದ ಸಿಬ್ಬಂದಿಗೆ ಮಾತ್ರ ಉಳಿಯಲು ಅವಕಾಶಕೊಡಬೇಕು ಎಂದು ಸಾಹಿತಿ ಎಸ್.ಎಲ್. ಬೈರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚಾಮುಂಡಿ ಬೆಟ್ಟದಲ್ಲೀಗಾ ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಮೈಸೂರಿನ ಜನ ಸೇರಿದಂತೆ ಅನೇಕರು ಸರ್ಕಾರದ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿರಂತರ ಮಳೆಯಿಂದಾಗಿ ಚಾಮುಂಡಿ ಬೆಟ್ಟ ಕುಸಿಯುತ್ತಿದೆ. ಈ ನಡುವೆ ಸರ್ಕಾರ ಕಾಮಗಾರಿ ಮಾಡಲು ಹೊರಟಿದೆ. ಸರ್ಕಾರದ ನಡೆಗೆ ಇತಿಹಾಸ ತಜ್ಞರು ಮತ್ತು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಚಾಮುಂಡಿಬೆಟ್ಟ ಉಳಿಸಿ ಅಭಿಯಾನವನ್ನು ಕೈಗೊಂಡಿದ್ದಾರೆ. ಸದ್ಯ ಈ ಬಗ್ಗೆ ಸಾಹಿತಿ ಎಸ್.ಎಲ್. ಬೈರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಚಾಮುಂಡಿ ಬೆಟ್ಟ ಉಳಿಸಿ ಅಭಿಯಾನಕ್ಕೆ ಕೈಜೋಡಿಸಲು ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಒಡೆಯರ್ ಕರೆ

Published On - 12:30 pm, Tue, 23 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ