AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ವಿರುದ್ಧ ಸಾಹಿತಿ ಎಸ್.ಎಲ್. ಬೈರಪ್ಪ ಸಾತ್ವಿಕ ಸಿಟ್ಟು, ಪ್ರಧಾನಿ ಮೋದಿಗೆ ಪತ್ರ

ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಚಾಮುಂಡಿಬೆಟ್ಟಕ್ಕೆ ತೊಂದರೆಯಾಗುತ್ತದೆ. ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ಇದಾಗಿದೆ. ಈ ಯೋಜನೆಯನ್ನ ಅನುಷ್ಠಾನಗೊಳಿಸಬಾರದು. ಜೊತೆಗೆ ಚಾಮುಂಡಿಬೆಟ್ಟಕ್ಕೆ ಹೋಗುವಂತ ವಾಹನಗಳಿಗೆ ನಿರ್ಬಂಧ ಹಾಕಬೇಕು ಎಂದು ಪತ್ರದಲ್ಲಿ ಎಸ್.ಎಲ್. ಬೈರಪ್ಪ ತಿಳಿಸಿದ್ದಾರೆ.

ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ವಿರುದ್ಧ ಸಾಹಿತಿ ಎಸ್.ಎಲ್. ಬೈರಪ್ಪ ಸಾತ್ವಿಕ ಸಿಟ್ಟು, ಪ್ರಧಾನಿ ಮೋದಿಗೆ ಪತ್ರ
ಹಿರಿಯ ಸಾಹಿತಿ S.L.ಭೈರಪ್ಪ (ಎಡ); ಪ್ರಧಾನಿ ಮೋದಿ(ಬಲ)
TV9 Web
| Updated By: ಆಯೇಷಾ ಬಾನು|

Updated on:Nov 23, 2021 | 12:34 PM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟ ಉಳಿಸಿ ಅಂತ ಸಾಹಿತಿ ಎಸ್.ಎಲ್. ಬೈರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಸರ್ಕಾರ ಕೈಗೊಂಡಿರುವ ಯೋಜನೆಯನ್ನು ಎಸ್.ಎಲ್. ಬೈರಪ್ಪ ವಿರೋಧಿಸಿದ್ದಾರೆ.

ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಚಾಮುಂಡಿಬೆಟ್ಟಕ್ಕೆ ತೊಂದರೆಯಾಗುತ್ತದೆ. ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ಇದಾಗಿದೆ. ಈ ಯೋಜನೆಯನ್ನ ಅನುಷ್ಠಾನಗೊಳಿಸಬಾರದು. ಜೊತೆಗೆ ಚಾಮುಂಡಿಬೆಟ್ಟಕ್ಕೆ ಹೋಗುವಂತ ವಾಹನಗಳಿಗೆ ನಿರ್ಬಂಧ ಹಾಕಬೇಕು. ಗಣ್ಯವ್ಯಕ್ತಿಗಳ ವಾಹನ ಸೇರಿದಂತೆ ಎಲ್ಲಾ ವಾಹನಗಳಿಗು ನಿರ್ಬಂಧ ವಿಧಿಸಬೇಕು. ಸರ್ಕಾರದಿಂದಲೇ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಗಳನ್ನು ಬಿಡಬೇಕು. ಜೊತೆಗೆ ಚಾಮುಂಡಿ ಬೆಟ್ಟದಲ್ಲಿ ವಾಸ ಇರುವ 4 ಸಾವಿರ ಜನರಿಗೆ ನಗರದಲ್ಲಿ ಸ್ಥಳವಕಾಶ ಮಾಡಿಕೊಡಬೇಕು. ದೇವಸ್ಥಾನದ ಅರ್ಚಕರು ಹಾಗೂ ದೇವಾಲಯದ ಸಿಬ್ಬಂದಿಗೆ ಮಾತ್ರ ಉಳಿಯಲು ಅವಕಾಶಕೊಡಬೇಕು ಎಂದು ಸಾಹಿತಿ ಎಸ್.ಎಲ್. ಬೈರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚಾಮುಂಡಿ ಬೆಟ್ಟದಲ್ಲೀಗಾ ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಮೈಸೂರಿನ ಜನ ಸೇರಿದಂತೆ ಅನೇಕರು ಸರ್ಕಾರದ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿರಂತರ ಮಳೆಯಿಂದಾಗಿ ಚಾಮುಂಡಿ ಬೆಟ್ಟ ಕುಸಿಯುತ್ತಿದೆ. ಈ ನಡುವೆ ಸರ್ಕಾರ ಕಾಮಗಾರಿ ಮಾಡಲು ಹೊರಟಿದೆ. ಸರ್ಕಾರದ ನಡೆಗೆ ಇತಿಹಾಸ ತಜ್ಞರು ಮತ್ತು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಚಾಮುಂಡಿಬೆಟ್ಟ ಉಳಿಸಿ ಅಭಿಯಾನವನ್ನು ಕೈಗೊಂಡಿದ್ದಾರೆ. ಸದ್ಯ ಈ ಬಗ್ಗೆ ಸಾಹಿತಿ ಎಸ್.ಎಲ್. ಬೈರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಚಾಮುಂಡಿ ಬೆಟ್ಟ ಉಳಿಸಿ ಅಭಿಯಾನಕ್ಕೆ ಕೈಜೋಡಿಸಲು ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಒಡೆಯರ್ ಕರೆ

Published On - 12:30 pm, Tue, 23 November 21

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ