AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಾರ್ಯಕ್ರಮದ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ; ಕಾಂಗ್ರೆಸ್​​​ ಪ್ರತಿಭಟನೆ

ಜೂನ್​ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ  ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ‌ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಕಾರ್ಯಕ್ರಮದ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡದಿರುವುದಕ್ಕೆ ಯದುವೀರ ಭಾವಚಿತ್ರ ಹಿಡಿದು ಕಾಂಗ್ರೆಸ್ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ.

ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಾರ್ಯಕ್ರಮದ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ; ಕಾಂಗ್ರೆಸ್​​​ ಪ್ರತಿಭಟನೆ
ಸಾಂಧರ್ಬಿಕ ಚಿತ್ರImage Credit source: The Times of India
TV9 Web
| Updated By: ವಿವೇಕ ಬಿರಾದಾರ|

Updated on:Jun 14, 2022 | 5:39 PM

Share

ಮೈಸೂರು: ಜೂನ್​ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ‌ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಕಾರ್ಯಕ್ರಮದ ವೇದಿಕೆಯಲ್ಲಿ  ಯದುವಂಶದವರಿಗೆ ಅವಕಾಶ ನೀಡದಿರುವುದಕ್ಕೆ ಮೈಸೂರು ಜಿಲ್ಲಾ ಪಂಚಾಯತಿ ಬಳಿ ಯದುವೀರ ಭಾವಚಿತ್ರ ಹಿಡಿದು ಕಾಂಗ್ರೆಸ್ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಸಂಸದ ಪ್ರತಾಪಸಿಂಹ ಹಾಗೂ ಯೋಗ ಸಮಿತಿ ವಿರುದ್ದ ಘೋಷಣೆ ಕೂಗಿದ್ದಾರೆ.

ರಾಜಮನೆತನದವರಿಗೆ ಕರೆಯದೆ‌ ಅವಮಾನ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಪೋಸ್ಟರ್ ಚಳುವಳಿ ಮಾಡಲಾಗುವುದು. ಮೈಸೂರಿನ ಯಾರಿಗೂ ಅವಕಾಶ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿ: ಯೋಗ ದಿನಾಚರಣೆಯ ಮಾಹಿತಿ ವಿಚಾರದಲ್ಲೂ ರಾಜಕಾರಣ: ಸಂಸದ ಪ್ರತಾಪ್​ ಸಿಂಹ-ಶಾಸಕ ರಾಮದಾಸ್ ನಡುವೆ ಜಟಾಪಟಿ

ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಜೂನ್​​ 21ರಂದು ಮೈಸೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ.  ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡುತ್ತಿದೆ.

ಯೋಗಾಭ್ಯಾಸದಲ್ಲಿ 15,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಸಂಬಂಧ ಸಿದ್ದತಾ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಈಗಾಗಲೆ ಕೆಲ ಸೂಚನೆ ನೀಡಿದ್ದಾರೆ. ಜೂ.13ರೊಳಗೆ ಯೋಗಪಟುಗಳ ಆಯ್ಕೆ ಪೂರ್ಣಗೊಳಿಸಿ, ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ಮಾಡಿ. ಯೋಗಪಟುಗಳಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ವ್ಯವಸ್ಥೆ ಮಾಡಿ. ಕುಡಿಯುವ ನೀರು ಸೇರಿ ಎಲ್ಲ ವ್ಯವಸ್ಥೆ ಮಾಡಿ. ಕಾರ್ಯಕ್ರಮದ ಯಶಸ್ಸಿಗೆ ಒಟ್ಟು 14 ಸಮಿತಿಗಳ ರಚನೆ ಮಾಡಿ ಎಂದು ಸೂಚನೆ ನೀಡಿದ್ದಾರೆ. ಹಾಗೇ ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾವ ಶಾಸಕರಿಗೂ ವೇದಿಕೆ ಮೇಲೆ ಅವಕಾಶವಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಯೋಗ (Yoga) ಮಾಡುವ ವೇದಿಕೆ ರಾಜಕೀಯ ವೇದಿಕೆಯಲ್ಲ. ಸಭಾ ಕಾರ್ಯಕ್ರಮದಲ್ಲಿ ನನಗೂ ಅವಕಾಶವಿಲ್ಲ. ಯಾವುದೇ ಸ್ಥಳೀಯ ಶಾಸಕರಿಗೂ ಅವರ ವೇದಿಕೆಯಲ್ಲಿ ಸ್ಥಾನ ಇರುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೋದಿ ಅವರ ಜೊತೆ ಮುಖ್ಯಮಂತ್ರಿ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಅವಕಾಶವಿದೆ. ನಾವೆಲ್ಲರೂ ವೇದಿಕೆಯ ಕೆಳಭಾಗದ ಒಂದು ಬದಿಯಲ್ಲಿರುತ್ತೇವೆ. ಇದರಲ್ಲಿ ಯಾವ ಬದಲಾವಣೆಗಳು ಇಲ್ಲ ಎಂದು ಹೇಳಿದರು. ನನ್ನ ಮತ್ತು ರಾಮದಾಸ್ ನಡುವೆ ಈ ವಿಚಾರದಲ್ಲಿ ಕ್ರೆಡಿಟ್ ವಾರ್ ನಡೆಯುತ್ತಿಲ್ಲ. ಮೋದಿ ಅವರ ವೇದಿಕೆ ಮುಂಭಾಗ 7 ಸಾವಿರ ಜನಕ್ಕೆ ಅವಕಾಶ ಇರುತ್ತದೆ. ಒಟ್ಟಾರೆ ಅರಮನೆಯ ಎಲ್ಲಾ ಭಾಗವೂ ಸೇರಿ 15 ಸಾವಿರ ಜನಕ್ಕೆ ಅವಕಾಶವಾಗಬಹುದು. ಆದರೆ ಎಲ್ಲರಿಗೂ ಮೋದಿ ಅವರು ಕಾಣುವುದಿಲ್ಲ ಎಂದು ಮೈಸೂರು ಸಂಸದ ಪ್ರತಾಪ ಸಿಂಹಾ ಹೇಳಿದ್ದಾರೆ.

ಫ್ಲೆಕ್ಸ್​ ಹಾಕಿ ನಗರದ ಸೌಂದರ್ಯ ಹಾಳುಮಾಡಬೇಡಿ

ಯೋಗ ದಿನದಲ್ಲಿ ಪಾಲ್ಗೊಳ್ಳಲು ಈಗಾಗಲೇ ನೊಂದಣಿ ಆರಂಭವಾಗಿದೆ. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯೋಗ ಮಾಡಲು ಅವಕಾಶ ನೀಡಲಾಗುತ್ತದೆ. ಮೋದಿ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್​ಗಳನ್ನ ಯಾರು ಹಾಕಬೇಡಿ. ಸರ್ಕಾರವೇ ಮೋದಿ ಅವರ ಸ್ವಾಗತದ ಬ್ಯಾನರ್​ಗಳನ್ನು ಹಾಕುತ್ತದೆ. ನಮ್ಮ ಪಕ್ಷದವರೇ ಇರಲಿ ಅಥವಾ ಇತರ ಯಾವುದೇ ಸಂಘ ಸಂಸ್ಥೆಗಳೇ ಇರಲಿ, ಯಾವುದೇ ಫ್ಲೆಕ್ಸ್​ಗಳನ್ನ ಹಾಕಿ ನಗರದ ಸೌಂದರ್ಯ ಹಾಳುಮಾಡಬೇಡಿ ಎಂದು ಕಿವಿಮಾತು ಹೇಳಿದರು.

ಮೋದಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ

ಜೂನ್​ 21ರಂದು ಮೈಸೂರಿನಲ್ಲಿವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿರುವ ಹಿನ್ನಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ಮೋದಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜೂ 21 ರಂದು ಮೈಸೂರಿಗೆ ಮೋದಿ ಆಗಮಿಸುತ್ತಿದ್ದು, ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಅರಮನೆ ಆವರಣದಲ್ಲಿ‌ ಯೋಗ ಫೆಡರೇಶನ್‌ನಿಂದ ತಾಲೀಮು ನಡೆಯುತ್ತಿದ್ದು, ಸಂಸದ ಪ್ರತಾಪಸಿಂಹ, ಶಾಸಕ ಎಸ್​.ಎ ರಾಮದಾಸ್ ಸೇರಿ ಹಲವರು ಭಾಗಿಯಾಗಲಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Tue, 14 June 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?