AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನೋಂದಣಿ ಮಾಡಿಸುವವರು 2ನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು: ಕೆ ಸುಧಾಕರ

ಜೂನ್​ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನ ಅರಮನೆ ಆವರಣದಲ್ಲಿ ನಡೆಯುವ ಯೋಗ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸುವವರು 2ನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು ಎಂದು ಮೈಸೂರಿನಲ್ಲಿ ಆರೋಗ್ಯ ಇಲಾಖೆಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಮೈಸೂರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನೋಂದಣಿ ಮಾಡಿಸುವವರು 2ನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು: ಕೆ ಸುಧಾಕರ
ಆರೋಗ್ಯ ಸಚಿವ ಕೆ.ಸುಧಾಕರ್
TV9 Web
| Updated By: ವಿವೇಕ ಬಿರಾದಾರ|

Updated on:Jun 14, 2022 | 8:37 PM

Share

ಮೈಸೂರು: ಜೂನ್​ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೈಸೂರಿನ ಅರಮನೆ ಆವರಣದಲ್ಲಿ ನಡೆಯುವ ಯೋಗ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸುವವರು 2ನೇ ಡೋಸ್ ಕಡ್ಡಾಯವಾಗಿ ಪಡೆದಿರಬೇಕು ಎಂದು ಮೈಸೂರಿನಲ್ಲಿ ಆರೋಗ್ಯ ಇಲಾಖೆಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಲಸಿಕೆ ಪಡೆಯದವರಿಗೆ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ. ಯೋಗ ದಿನಕ್ಕೂ 72 ಗಂಟೆ ಮುಂಚೆ ರಿಪೋರ್ಟ್‌ ಕಡ್ಡಾಯವಾಗಿ ಪಡೆದಿರಬೇಕು. 2 ಡೋಸ್ ಹಾಕಿಸಿಕೊಂಡವರಿಗೆ ನೆಗೆಟಿವ್ ಸರ್ಟಿಫಿಕೆಟ್‌ ಬೇಡ. ಯೋಗದ ವೇಳೆ ಥರ್ಮಲ್‌ ಸ್ಕ್ಯಾನಿಂಗ್‌, ಸ್ಯಾನಿಟೈಸರ್ ವ್ಯವಸ್ಥೆ ಇರುತ್ತೆ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಜೂನ್​​ 21ರಂದು ಮೈಸೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ದಿನಾಚರಣೆಯಲ್ಲಿ ಯೋಗ  ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ.  ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡುತ್ತಿದೆ.

ಇದನ್ನು ಓದಿ: ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಾರ್ಯಕ್ರಮದ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ; ಕಾಂಗ್ರೆಸ್​​​ ಪ್ರತಿಭಟನೆ

ಯೋಗಾಭ್ಯಾಸದಲ್ಲಿ 15,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಸಂಬಂಧ ಸಿದ್ದತಾ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಈಗಾಗಲೆ ಕೆಲ ಸೂಚನೆ ನೀಡಿದ್ದಾರೆ. ಜೂ.13ರೊಳಗೆ ಯೋಗಪಟುಗಳ ಆಯ್ಕೆ ಪೂರ್ಣಗೊಳಿಸಿ, ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ಮಾಡಿ. ಯೋಗಪಟುಗಳಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ವ್ಯವಸ್ಥೆ ಮಾಡಿ. ಕುಡಿಯುವ ನೀರು ಸೇರಿ ಎಲ್ಲ ವ್ಯವಸ್ಥೆ ಮಾಡಿ. ಕಾರ್ಯಕ್ರಮದ ಯಶಸ್ಸಿಗೆ ಒಟ್ಟು 14 ಸಮಿತಿಗಳ ರಚನೆ ಮಾಡಿ ಎಂದು ಸೂಚನೆ ನೀಡಿದ್ದಾರೆ. ಹಾಗೇ ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೋದಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ

ಜೂನ್​ 21ರಂದು ಮೈಸೂರಿನಲ್ಲಿವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿರುವ ಹಿನ್ನಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ಮೋದಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜೂ 21 ರಂದು ಮೈಸೂರಿಗೆ ಮೋದಿ ಆಗಮಿಸುತ್ತಿದ್ದು, ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಅರಮನೆ ಆವರಣದಲ್ಲಿ‌ ಯೋಗ ಫೆಡರೇಶನ್‌ನಿಂದ ತಾಲೀಮು ನಡೆಯುತ್ತಿದ್ದು, ಸಂಸದ ಪ್ರತಾಪಸಿಂಹ, ಶಾಸಕ ಎಸ್​.ಎ ರಾಮದಾಸ್ ಸೇರಿ ಹಲವರು ಭಾಗಿಯಾಗಲಿದ್ದಾರೆ. ಯೋಗ ತಾಲೀಮಿಗೆ  ಸಾವಿರಾರು ವಿದ್ಯಾರ್ಥಿಗಳು ಸಾಥ್ ನೀಡಿದರು.

ಇದನ್ನು ಓದಿ:  ಮೈಸೂರು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಮೋದಿ ವೇದಿಕೆಯಲ್ಲಿ ಯದುವಂಶದವರಿಗೆ ಅವಕಾಶ ನೀಡಿಲ್ಲ ವಿವಾದ: ಪ್ರತಾಪ ಸಿಂಹ ಸ್ಪಷ್ಟನೆ

ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಸಿಎಂ ಬೊಮ್ಮಾಯಿ

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ 15,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಸಂಬಂಧ ಸಿದ್ದತಾ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಕೆಲ ಸೂಚನೆ ನೀಡಿದ್ದಾರೆ. ಜೂ.13ರೊಳಗೆ ಯೋಗಪಟುಗಳ ಆಯ್ಕೆ ಪೂರ್ಣಗೊಳಿಸಿ, ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ಮಾಡಿ. ಯೋಗಪಟುಗಳಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ವ್ಯವಸ್ಥೆ ಮಾಡಿ. ಕುಡಿಯುವ ನೀರು ಸೇರಿ ಎಲ್ಲ ವ್ಯವಸ್ಥೆ ಮಾಡಿ. ಕಾರ್ಯಕ್ರಮದ ಯಶಸ್ಸಿಗೆ ಒಟ್ಟು 14 ಸಮಿತಿಗಳ ರಚನೆ ಮಾಡಿ ಎಂದು ಸೂಚನೆ ನೀಡಿದ್ದಾರೆ. ಹಾಗೇ ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 pm, Tue, 14 June 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?