AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲ ಆಗಿರುವುದು ತರ್ಲೆ ಇನ್ಸ್​ಪೆಕ್ಟರ್​ನಿಂದ’: ತಮ್ಮ ಮೇಲಿನ ಎಫ್​​ಐಆರ್​​ ಬಗ್ಗೆ ಪ್ರತಾಪ್​​ ಸಿಂಹ ಕಿಡಿ

ಟಿ.ನರಸೀಪುರ ಗಣೇಶ ವಿಸರ್ಜನೆ ವೇಳೆ ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿರುವುದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದು, ತರ್ಲೆ ಇನ್ಸ್‌ಪೆಕ್ಟರ್ ಹಾಗೂ ಗೃಹ ಸಚಿವರ ಒತ್ತಡದಿಂದಾಗಿ ಕೇಸ್ ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನನ್ನು ರಾಜಕಾರಣಿ ರೀತಿ ನೋಡಬೇಡಿ, ನಾನೊಬ್ಬ ಪತ್ರಕರ್ತ. ಪತ್ರಕರ್ತರು ಸಂವಿಧಾನವನ್ನು ಚೆನ್ನಾಗಿ ತಿಳಿದುಕೊಂಡಿರುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್​​ ಸಿಂಹ ವಾಗ್ದಾಳಿ ನಡೆಸಿದ್ದಾರೆ.

'ಎಲ್ಲ ಆಗಿರುವುದು ತರ್ಲೆ ಇನ್ಸ್​ಪೆಕ್ಟರ್​ನಿಂದ': ತಮ್ಮ ಮೇಲಿನ ಎಫ್​​ಐಆರ್​​ ಬಗ್ಗೆ ಪ್ರತಾಪ್​​ ಸಿಂಹ ಕಿಡಿ
ಪ್ರತಾಪ್​​ ಸಿಂಹImage Credit source: Pratap Simha Facebook Page
ರಾಮ್​, ಮೈಸೂರು
| Edited By: |

Updated on:Sep 20, 2026 | 6:14 PM

Share

ಮೈಸೂರು, ಸೆಪ್ಟೆಂಬರ್​​ 20: ಟಿ.ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಾಪ್​​ ಸಿಂಹ, ಪ್ರಚೋದನೆ ಕೊಟ್ಟಿದ್ದು ಇನ್ಸ್​ಪೆಕ್ಟರ್. ಹೀಗಾಗಿ ಆತನ ವಿರುದ್ಧ FIR ಆಗ್ಬೇಕಿತ್ತು. ಇನ್ಸ್​ಪೆಕ್ಟರ್ ವರ್ಗಾವಣೆಮಾಡಿ ಕ್ರಮಕೈಗೊಳ್ಳಬೇಕಿತ್ತು. ಧನಂಜಯ ಕೊಟ್ಟ ಚಿತಾವಣೆಗೆ ನಾವು ಸ್ಪಂದಿಸಿದ್ದೇವೆ. ಅವರು ಆಡಿದ್ದ ಮಾತುಗಳನ್ನು ಮಸೀದಿ ಮುಂದೆ ಪ್ರಸ್ತಾಪಿಸಿದ್ದೆ. ಈಗ ನೋಡು ಬಾ ಎಂದು ಕರೆದಿದ್ದೆ. ಪೊಲೀಸರ ಬಗ್ಗೆ ನನಗೆ ಅಪಾರಗೌರವಿದ್ದು, ಟಿ.ನರಸೀಪುರದಲ್ಲಿ ಇದೆಲ್ಲ ಆಗಿರುವುದು ತರ್ಲೆ ಇನ್ಸ್​ಪೆಕ್ಟರ್​ನಿಂದ ಎಂದವರು ಆರೋಪಿಸಿದ್ದಾರೆ.

‘ಗೃಹಸಚಿವರ ಒತ್ತಡಕ್ಕೆ ಮಣಿದು ಕೇಸ್​’

ಗೃಹಸಚಿವರ ಒತ್ತಡಕ್ಕೆ ಮಣಿದು ತನ್ನ ವಿರುದ್ಧ FIR ಹಾಕಿದ್ದಾರೆ.ನಾನು ಕಮಿಷನ್ ಹೊಡೆದಿಲ್ಲ, ಅಕ್ರಮವಾಗಿ ಮುಡಾ ಸೈಟ್ ಪಡೆದಿಲ್ಲ. ಎಫ್ಐಆರ್ ವಿರುದ್ಧ ಕೋರ್ಟ್​ಗೆ ಹೋಗುವೆ, ನ್ಯಾಯ ಸಿಗುತ್ತದೆ. ನಾನು ಅಪ್ಪನ ಹೆಸರು ಹೇಳಿಕೊಂಡು ಬಂದಿಲ್ಲ. ನನ್ನನ್ನು ರಾಜಕಾರಣಿ ರೀತಿ ನೋಡಬೇಡಿ, ನಾನೊಬ್ಬ ಪತ್ರಕರ್ತ. ಪತ್ರಕರ್ತರು ಸಂವಿಧಾನವನ್ನು ಚೆನ್ನಾಗಿ ತಿಳಿದುಕೊಂಡಿರುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್​​ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಟಿ.ನರಸೀಪುರ ಗಣೇಶ ಗಲಾಟೆ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಪ್ರತಾಪ್ ಸಿಂಹ ವಿರುದ್ಧ ಎಫ್​​ಐಆರ್

ಮತ್ತೊಂದೆಡೆ ಪ್ರತಾಪ್​​ ಸಿಂಹ ವಿರುದ್ಧ ಕೇಸ್​​ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಯದುವೀರ್ ಒಡೆಯರ್​​, ಕಾನೂನಾತ್ಮಕವಾಗಿ ಏನು ಕ್ರಮ ಕೈಗೊಳ್ಳಬೇಕಿತ್ತು ಅದನ್ನು ತೆಗೆದುಕೊಂಡಿದ್ದಾರೆ. ನಾವೂ ಕೂಡ ಕಾನೂನಾತ್ಮಕವಾಗಿ ಎದುರಿಸಬೇಕಾಗಿದೆ. ಅವರು ಏನು ಭಾಷಣ ಮಾಡಿದ್ದಾರೆ ನಾನು ನೋಡಿಲ್ಲ. ಇದು ಕೇವಕ ಪ್ರಾರಂಭ, ಕಾನೂನಾತ್ಮಕವಾಗಿ ಎದುರಿಸಲು ನಮಗೂ ಅವಕಾಶ ಇದೆ. ಪ್ರತಾಪ್​​ ಸಿಂಹ ಹೇಳಿರುವುದು ಅವರ ಅಭಿಪ್ರಾಯವೇ ಹೊರತು ಪಕ್ಷದ್ದಲ್ಲ ಎಂದು ಯದುವೀರ್​​ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:50 pm, Sun, 20 September 26

Follow Us
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್