AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

77 Independence Day: ಮೈಸೂರಿನಲ್ಲಿ ಬಿಸಿಲೋ ಬಿಸಿಲು, ಸಚಿವ ಡಾ ಹೆಚ್ ಸಿ ಮಹದೇವಪ್ಪ ಸುಸ್ತೋ ಸುಸ್ತು! ಭಾಷಣ ಓದಿ ಸುಸ್ತಾಗಿ ಕುಳಿತ ‘ಡಾಕ್ಟರ್’

Dr HC Mahadevappa: ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸ್ವಾತಂತ್ರ್ಯ ಸಮಾರಂಭ ಅದ್ದೂರಿಯಾಗಿ ನಡೆಯುತ್ತಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸುದೀರ್ಘವಾದ ಭಾಷಣ ಮಾಡತೊಡಗಿದರು. ಆದರೆ ಬಿಸಿಲಿಗೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸುಸ್ತಾದರು. ಸುದೀರ್ಘ ಭಾಷಣ ಓದಿ ಸುಸ್ತಾಗಿ ಕುಳಿತರು. ಡಾ ಎಚ್ ಸಿ ಮಹದೇವಪ್ಪ ಅವರು ಸ್ವಾತಂತ್ರ್ಯೋತ್ಸವ ಭಾಷಣವನ್ನು ಮೊಟಕುಗೊಳಿಸಿದರು. ನೀರು ಕುಡಿದು ಸ್ವಲ್ಪ ಹೊತ್ತು ಸುಧಾರಿಸಿಕೊಂಡರು.

77 Independence Day: ಮೈಸೂರಿನಲ್ಲಿ ಬಿಸಿಲೋ ಬಿಸಿಲು, ಸಚಿವ ಡಾ ಹೆಚ್ ಸಿ ಮಹದೇವಪ್ಪ ಸುಸ್ತೋ ಸುಸ್ತು! ಭಾಷಣ ಓದಿ ಸುಸ್ತಾಗಿ ಕುಳಿತ ‘ಡಾಕ್ಟರ್’
ಭಾಷಣ ಓದಿ ಸುಸ್ತಾಗಿ ಕುಳಿತ ‘ಡಾಕ್ಟರ್’ ಮಹದೇವಪ್ಪ
ರಾಮ್​, ಮೈಸೂರು
| Edited By: |

Updated on:Aug 15, 2023 | 10:29 AM

Share

ಮೈಸೂರು: ಮುಂಗಾರು ಮಳೆ ಕೊಂಚ ವಿರಾಮ ಕೊಟ್ಟಿದೆ. ಅದರಲ್ಲೂ ದೇಶದ 77ನೇ ಸ್ವಾತಂತ್ರ್ಯೋತ್ಸವದಂದು ಸೂರ್ಯ ಪ್ರಖರವಾಗಿ ಬೆಳಕು ಚೆಲ್ಲಿದ್ದಾನೆ. ಮೈಸೂರಿನಲ್ಲಿ (Mysore) ಕೊಂಚ ಹೆಚ್ಚೇ ಬಿಸಿಲಿನ ಝಳ (sunny day ) ಇದ್ದಂತಿದೆ. ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸ್ವಾತಂತ್ರ್ಯ ಸಮಾರಂಭ ಅದ್ದೂರಿಯಾಗಿ ನಡೆಯುತ್ತಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸುದೀರ್ಘವಾದ ಭಾಷಣ ಮಾಡತೊಡಗಿದರು. ಆದರೆ ಬಿಸಿಲಿಗೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ( Dr HC Mahadevappa) ಸುಸ್ತಾದರು. ಸುದೀರ್ಘ ಭಾಷಣ ಓದಿ ಸುಸ್ತಾಗಿ ಕುಳಿತರು.

ಡಾ ಎಚ್ ಸಿ ಮಹದೇವಪ್ಪ ಅವರು ಸ್ವಾತಂತ್ರ್ಯೋತ್ಸವ ಭಾಷಣವನ್ನು ಮೊಟಕುಗೊಳಿಸಿದರು. ನೀರು ಕುಡಿದು ಸ್ವಲ್ಪ ಹೊತ್ತು ಸುಧಾರಿಸಿಕೊಂಡರು. ಚೇತರಿಸಿಕೊಂಡ ನಂತರ ಸಚಿವರು ಮತ್ತೆ ಕಾರ್ಯಕ್ರಮದಲ್ಲಿ‌ ಭಾಗಿಯಾದರು. ಡಾ ಹೆಚ್ ಸಿ ಮಹದೇವಪ್ಪ ತ್ರಿವರ್ಣ ಬಲೂನ್‌ಗಳನ್ನು ಹಾರಿ ಬಿಟ್ಟರು.

ಮೈಸೂರು ವಿಭಾಗೀಯ 58 ಚಾಲಕರಿಗೆ ಬೆಳ್ಳಿ ಪದಕ, ಪ್ರಶಸ್ತಿ ಪತ್ರ, ನಗದು ಬಹುಮಾನ

ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಅವರು 77ನೇ ಸ್ವಾತಂತ್ರ್ಯ ಸಂಭ್ರದದ ಅಂಗವಾಗಿ ಚಾಲಕರಿಗೆ ಪ್ರಶಸ್ತಿ ಪುರಸ್ಕಾರ ವಿತರಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮೈಸೂರು ವಿಭಾಗೀಯ ಸಂಚಾರ ಶಾಖೆ ವತಿಯಿಂದ ಮೈಸೂರು ಜಿಲ್ಲೆಯ ಒಟ್ಟು 58 ಚಾಲಕರಿಗೆ ಬೆಳ್ಳಿ ಪದಕ, ಪ್ರಶಸ್ತಿ ಪತ್ರ, ನಗದು ಬಹುಮಾನ ನೀಡಿದರು. ಅಪಘಾತ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ನೀಡಿದರು. ಕೆ ಎಸ್ ಆರ್ ಟಿ ಸಿ ಚಾಲಕರಿಗೆ ಬೆಳ್ಳಿ ಪದಕ, ನಗದು ಪುರಸ್ಕಾರ ವಿತರಿಸಿದರು. ಗಣನೀಯ ಅವಧಿಯವರೆಗೆ ಸೇವೆ ಸಲ್ಲಿಸಿದ ಚಾಲಕರಿಗೆ ಗೌರವ ಸಂದಾಯವಾಯಿತು. ಗಂಡಭೇರುಂಡ ಲಾಂಛನದ 32 ಗ್ರಾಂ ಬೆಳ್ಳಿ ಪದಕ, ಪ್ರಶಸ್ತಿ ಪತ್ರ, ಎರಡೂ ಸಾವಿರ ನಗದು ಪುರಸ್ಕಾರ ನೀಡಲಾಯಿತು. 250 ರೂಪಾಯಿ ಮಾಸಿಕ ಪ್ರೋತ್ಸಾಹ ಭತ್ಯೆ ನೀಡಿ ಗೌರವಿಸಲಾಯಿತು.

ಮೈಸೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Tue, 15 August 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ