AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಡಿಸಿ ಕಚೇರಿಯಲ್ಲೂ ಖರೀದಿಸಬಹದು ಜಂಬೂಸವಾರಿ, ಟಾರ್ಚ್​​ ಲೈಟ್​ ಟಿಕೆಟ್

ಆನ್​ಲೈನ್​ನಲ್ಲಿ ಜಂಬೂಸವಾರಿ ಟಾರ್ಚ್​​ ಲೈಟ್ ಟಿಕೆಟ್​ಗೆ ಬೇಡಿಕೆ ಹೆಚ್ಚಿರುವ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲೂ ಟಿಕೆಟ್ ಖರೀದಿಗೆ ಅವಕಾಶ ನೀಡಲಾಗಿದೆ. ಡಿಸಿ ಕಚೇರಿಯ ಸ್ಪಂದನ ಕೇಂದ್ರದಲ್ಲಿ ಟಿಕೆಟ್ ಖರೀದಿ ಮಾಡಬಹುದು. ಈ ಬಗ್ಗೆ ದಸರಾ ವಿಶೇಷಾಧಿಕಾರಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಮೈಸೂರು ಡಿಸಿ ಕಚೇರಿಯಲ್ಲೂ ಖರೀದಿಸಬಹದು ಜಂಬೂಸವಾರಿ, ಟಾರ್ಚ್​​ ಲೈಟ್​ ಟಿಕೆಟ್
ದಸರಾ
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on:Oct 06, 2024 | 9:38 AM

Share

ಮೈಸೂರು, ಅ.06: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರಲ್ಲಿ (Mysuru Dasara 2024) ಜಂಬೂಸವಾರಿ ಮತ್ತು ಟಾರ್ಚ್​​ ಲೈಟ್​ ಶೂಗಳ ಟಿಕೆಟ್​ಗೆ ಬೇಡಿಕೆ ಹೆಚ್ಚಿದೆ. ಹೀಗಾಗಿ ನೇರವಾಗಿ ಟಿಕೆಟ್ ಖರೀದಿ ಮಾಡಲು ಜಿಲ್ಲಾಡಳಿತ ಅವಕಾಶ ನೀಡಿದೆ. ಆನ್​ಲೈನ್​ನಲ್ಲಿ ಜಂಬೂಸವಾರಿ ಟಾರ್ಚ್​​ ಲೈಟ್ ಟಿಕೆಟ್​ಗೆ ಬೇಡಿಕೆ ಹೆಚ್ಚಿರುವ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲೂ ಟಿಕೆಟ್ ಖರೀದಿಗೆ ಅವಕಾಶ ನೀಡಲಾಗಿದೆ. ಡಿಸಿ ಕಚೇರಿಯ ಸ್ಪಂದನ ಕೇಂದ್ರದಲ್ಲಿ ಟಿಕೆಟ್ ಖರೀದಿ ಮಾಡಬಹುದು. ಈ ಬಗ್ಗೆ ದಸರಾ ವಿಶೇಷಾಧಿಕಾರಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇನ್ನು ಒಂದು ದಸರಾ ಗೋಲ್ಡ್ ಕಾರ್ಡ್ ನಲ್ಲಿ ಜಂಬೂಸವಾರಿ ಮೆರವಣಿಗೆ, ಪಂಜಿ‌ನ ಕವಾಯತು, ಚಾಮುಂಡಿಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಟಿಕೆಟ್ ದರ 3500 ರೂಪಾಯಿ ನಿಗದಿಪಡಿಸಲಾಗಿದೆ. ಇನ್ನು ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ 1000 ರೂಪಾಯಿ ನಿಗದಿಪಡಿಸಲಾಗಿದೆ.

ಯುವ ದಸರಾಗೂ ಟಿಕೆಟ್‌

ಈ ಬಾರಿಯ ದಸರಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 40 ಕೋಟಿ ರೂ. ಅನುದಾನ ನೀಡಲಾಗುವುದೆಂದು ಘೋಷಣೆ ಮಾಡಿದ್ದಾರೆ. ಆದರೂ ಕೆಲ ಕಾರ್ಯಕ್ರಮಗಳಿಗೆ ಟಿಕೆಟ್ ದರ ತುಸು ಹೆಚ್ಚಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.’ಯುವ ದಸರೆ’ಗೆ ಇದೇ ಮೊದಲ ಬಾರಿಗೆ ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮುಂಭಾಗದ ಗ್ಯಾಲರಿ 1ರಲ್ಲಿ ಕುಳಿತು ಯುವ ದಸರಾ ನೋಡಲು 8 ಸಾವಿರ ರೂ. ದರ ನಿಗದಿಪಡಿಸಲಾಗಿದೆ. ಅದೇ ರೀತಿ ಗ್ಯಾಲರಿ 2ರಲ್ಲಿ ಕುಳಿತು ವೀಕ್ಷಿಸಲು 5 ಸಾವಿರ ರೂ. ಜೊತೆಗೆ 2500, 1500 ರೂ. ಪ್ರತ್ಯೇಕ ದರವನ್ನೂ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ದಸರಾ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ!

ಈ ಬಾರಿ ನಗರದ ಪ್ರಮುಖ ರಸ್ತೆಗಳನ್ನು ಒಳಗೊಂಡಂತೆ 130 ಕಿ.ಮೀ. ಉದ್ದದಲ್ಲಿ ದೀಪಾಲಂಕಾರ ಇದೆ. 100 ವೃತ್ತಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಡಬಲ್‌ ಡೆಕ್ಕರ್‌ ಬಸ್‌ನಲ್ಲಿಅ. 3ರಿಂದ 21ರವರೆಗೆ ದೀಪಾಲಂಕಾರದ ಸೊಬಗನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಬಹುದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:34 am, Sun, 6 October 24

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?