AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಸ್ಕೃತಿಕ ನಗರಿಯಲ್ಲಿ ಸುಗ್ಗಿ ಸಂಭ್ರಮ: ಕಲರ್​ಪುಲ್ ವೇದಿಕೆಯಲ್ಲಿ ಕಲಾತಂಡಗಳ ಕಲರವ

ಮೈಸೂರಿನ ಕಲಾಮಂದಿರದಲ್ಲಿ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಅಕಾಡೆಮಿಯಿಂದ ಜಾನಪದ ಸುಗ್ಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಲಾತಂಡಗಳು ಪ್ರದರ್ಶಿಸಿದ ಕಲಾವೈಭವದ ಚಿತ್ರೋಟ ಇಲ್ಲಿದೆ, ಕಣ್ತುಂಬಿಕೊಳ್ಳಿ.

ಸಾಂಸ್ಕೃತಿಕ ನಗರಿಯಲ್ಲಿ ಸುಗ್ಗಿ ಸಂಭ್ರಮ: ಕಲರ್​ಪುಲ್ ವೇದಿಕೆಯಲ್ಲಿ ಕಲಾತಂಡಗಳ ಕಲರವ
ಮೈಸೂರಿನಲ್ಲಿ ಸುಗ್ಗಿ ಸಂಭ್ರಮ
ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 21, 2020 | 1:52 PM

Share

ಮೈಸೂರು: ಕಲರ್‌ಫುಲ್ ವೇದಿಕೆಯಲ್ಲಿ ಮೇಳೈಸಿದ ಜಾನಪದದ ರಂಗು. ಪೂಜಾಕುಣಿತ, ಕಂಸಾಳೆ, ವೀರಗಾಸೆ, ನಗಾರಿ ತಂಡ, ಚಿಟ್ ಮೇಳ, ಡೊಳ್ಳು ಕುಣಿತ, ಗೊರವರ ಕುಣಿತ, ಕೊಡವರ ಸಾಂಪ್ರದಾಯಿಕ ನೃತ್ಯ.. ಹೀಗೆ ಒಂದೇ ವೇದಿಕೆಯಲ್ಲಿ ನಾನಾ ಜಾನಪದ ನೃತ್ಯಗಳು ಅನಾವರಣಗೊಂಡವು.

ನಿನ್ನೆ ಮೈಸೂರಿನ ಕಲಾಮಂದಿರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಆ ಹಬ್ಬ ಜಾನಪದ ಹಬ್ಬವಾಗಿತ್ತು.‌ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಅಕಾಡೆಮಿಯಿಂದ ಜಾನಪದ ಸುಗ್ಗಿ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಿ ತಮ್ಮ ಕಲೆಯನ್ನ ಪ್ರದರ್ಶನ ಮಾಡಿದ್ವು.

ಜಾನಪದ ಸುಗ್ಗಿ ಲೋಕದ ಅನಾವರಣ ಕಾರ್ಯಕ್ರಮದಲ್ಲಿ ಸಾಕಷ್ಟು ಯುವ ಸಮೂಹ ಕೂಡ ಪಾಲ್ಗೊಂಡು ತಮಟೆ, ಡೊಳ್ಳಿನ ಶಬ್ದಕ್ಕೆ ಸಖತ್ ಸ್ಟೆಪ್ಸ್ ಹಾಕಿ ಎಂಜಾಯ್ ಮಾಡಿದ್ರು. ಸಾಕಷ್ಟು ದಿನಗಳಿಂದ ಆನ್​ಲೈನ್ ಕ್ಲಾಸ್ ಹಾಗೂ ಮನೆಯಲ್ಲಿದ್ದು ಬೋರಾಗಿದ್ದ ವಿದ್ಯಾರ್ಥಿಗಳಿಗೆ ಜಾನಪದ ಸುಗ್ಗಿ ಕಾರ್ಯಕ್ರಮ ಹೊಸ ಲೋಕಕ್ಕೆ ಕರೆದುಕೊಂಡು ಹೋಯ್ತು.

ಒಟ್ಟಾರೆ, ಜಾನಪದ ಕಲೆಗಳನ್ನು ನಗರದ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಿತ್ತು.‌ ಜೊತೆಗೆ ಕೊರೊನಾದಿಂದ ಇಷ್ಟು ದಿನ ಮನೆಯಲ್ಲಿದ್ದ ಕಲಾವಿದರಿಗೂ ಈ ಕಾರ್ಯಕ್ರಮ ಹೊಸ ಆರಂಭ ನೀಡಿತು.

ಜಾನಪದ ಜಾತ್ರೆಯಲ್ಲಿ ಕಿಕ್ಕೇರಿಸೋ ದಂಗಲ್, ಗೆದ್ದು ಬೀಗಿದ ಕುಸ್ತಿಪಟುಗಳು!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ