AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಬಹುರೂಪಿ ರಂಗೋತ್ಸವದಲ್ಲಿ ಜಾನಪದೋತ್ಸವಕ್ಕೆ ಚಾಲನೆ

ಬಹುರೂಪಿಯ ಮೊದಲ ದಿನ ಮಹಾದೇವ ಮತ್ತು ತಂಡದವರಿಂದ ಕಂಸಾಳೆ, ಕೆರೆಮನೆ ಶಿವಾನಂದ ಹೆಗಡೆ ಅವರಿಂದ ‘ಪಂಚವಟಿ’ ಯಕ್ಷಗಾನ ಹಾಗೂ ಇಡಗುಂಜಿ ಮೇಳವೂ ನಡೆಯಿತು.

ಮೈಸೂರಿನ ಬಹುರೂಪಿ ರಂಗೋತ್ಸವದಲ್ಲಿ ಜಾನಪದೋತ್ಸವಕ್ಕೆ ಚಾಲನೆ
ಕೆರೆಮನೆ ಶಿವಾನಂದ ಹೆಗಡೆ ಅವರಿಂದ ‘ಪಂಚವಟಿ’ ಯಕ್ಷಗಾನ Image Credit source: Indian Express
TV9 Web
| Updated By: ಸುಷ್ಮಾ ಚಕ್ರೆ|

Updated on: Dec 09, 2022 | 4:10 PM

Share

ಮೈಸೂರು: ಮೈಸೂರಿನಲ್ಲಿ ಬಹುರೂಪಿಯ ರಾಷ್ಟ್ರೀಯ ರಂಗೋತ್ಸವದ (Bahuroopi National Theatre Festival) ಅಧಿಕೃತ ಉದ್ಘಾಟನೆಯ ಪೂರ್ವಭಾವಿಯಾಗಿ ‘ಜಾನಪದೋತ್ಸವ’ವನ್ನು(Janapadotsava)  ಗುರುವಾರ ಉದ್ಘಾಟನೆ ಮಾಡಲಾಯಿತು. ಖ್ಯಾತ ಯಕ್ಷಗಾನ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಉಪಸ್ಥಿತಿಯಲ್ಲಿ ಜಾನಪದ ವಿದ್ವಾಂಸ ಡಾ.ಪಿ.ಕೆ. ರಾಜಶೇಖರ್ ಜಾನಪದೋತ್ಸವವನ್ನು ಉದ್ಘಾಟಿಸಿದರು.

ಬಹುರೂಪಿಯ ಮೊದಲ ದಿನ ಮಹಾದೇವ ಮತ್ತು ತಂಡದವರಿಂದ ಕಂಸಾಳೆ, ಕೆರೆಮನೆ ಶಿವಾನಂದ ಹೆಗಡೆ ಅವರಿಂದ ‘ಪಂಚವಟಿ’ ಯಕ್ಷಗಾನ ಹಾಗೂ ಇಡಗುಂಜಿ ಮೇಳವೂ ನಡೆಯಿತು. ಈ ವೇಳೆ ಮಾತನಾಡಿದ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರಿಯಪ್ಪ, ‘ಭಾರತೀಯತೆ’ ವಿಷಯವಾಗಿ ಒಂದು ವಾರದ ರಂಗೋತ್ಸವ ನಡೆಯುತ್ತಿದ್ದು, ಪ್ರತಿ ವರ್ಷದಂತೆ ಕಲಾ ಶಿಬಿರ, ಜಾನಪದ ಶಿಬಿರ, ಚಲನಚಿತ್ರೋತ್ಸವ, ರಾಷ್ಟ್ರೀಯ ವಿಚಾರ ಸಂಕಿರಣ, ಪುಸ್ತಕ ಮೇಳ, ಕಲಾಕೃತಿಗಳ ಪ್ರದರ್ಶನ, ಅನ್ನಸಂತರ್ಪಣೆ, ಅನುಭವ ಪ್ರದರ್ಶನ ನಡೆಯಲಿದೆ ಎಂದರು.

ಇದನ್ನೂ ಓದಿ: ಮೈಸೂರಿನಲ್ಲಿ ಮಾರ್ಚ್ 11ರಿಂದ 10 ದಿನಗಳ ಕಾಲ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಈ ವರ್ಷ ಭೂಮಿಗೀತ, ಕಲಾಮಂದಿರ, ವನರಂಗ, ಬಿ.ವಿ.ಕರಣ ರಂಗಚಾವಡಿ, ಸಂಪತ್ ರಂಗಮಂದಿರದಲ್ಲಿ ಕನ್ನಡದ 12 ನಾಟಕಗಳು, ತುಳು ನಾಟಕ ಸೇರಿದಂತೆ 7 ಭಾಷೆಯ ನಾಟಕಗಳನ್ನು ಬಿಂಬಿಸುವ 7 ರಾಜ್ಯಗಳ ರಂಗತಂಡಗಳು ಪ್ರದರ್ಶನಗೊಳ್ಳಲಿವೆ ಎಂದರು.

23ನೇ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಡಿ. 10ರಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಮೈಸೂರಿನ ರಂಗಾಯಣದ ಆವರಣದಲ್ಲಿ 7 ರಾಜ್ಯಗಳ 7 ವಿವಿಧ ಭಾಷೆಗಳ ನಾಟಕ, 12 ಕನ್ನಡ ಹಾಗೂ ಒಂದು ತುಳು ನಾಟಕ ಸೇರಿ ಒಟ್ಟು 20 ರಂಗ ಪ್ರಯೋಗ ಬಹುರೂಪಿ ರಂಗೋತ್ಸವದಲ್ಲಿ ನಡೆಯಲಿದೆ. ಡಿ. 10ರಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಟ ರಮೇಶ್‌ ಅರವಿಂದ್‌, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ಕುಮಾರ್‌, ಮೇಯರ್‌ ಶಿವಕುಮಾರ್‌ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​