AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಬಹುರೂಪಿ ರಂಗೋತ್ಸವದಲ್ಲಿ ಜಾನಪದೋತ್ಸವಕ್ಕೆ ಚಾಲನೆ

ಬಹುರೂಪಿಯ ಮೊದಲ ದಿನ ಮಹಾದೇವ ಮತ್ತು ತಂಡದವರಿಂದ ಕಂಸಾಳೆ, ಕೆರೆಮನೆ ಶಿವಾನಂದ ಹೆಗಡೆ ಅವರಿಂದ ‘ಪಂಚವಟಿ’ ಯಕ್ಷಗಾನ ಹಾಗೂ ಇಡಗುಂಜಿ ಮೇಳವೂ ನಡೆಯಿತು.

ಮೈಸೂರಿನ ಬಹುರೂಪಿ ರಂಗೋತ್ಸವದಲ್ಲಿ ಜಾನಪದೋತ್ಸವಕ್ಕೆ ಚಾಲನೆ
ಕೆರೆಮನೆ ಶಿವಾನಂದ ಹೆಗಡೆ ಅವರಿಂದ ‘ಪಂಚವಟಿ’ ಯಕ್ಷಗಾನ Image Credit source: Indian Express
TV9 Web
| Edited By: |

Updated on: Dec 09, 2022 | 4:10 PM

Share

ಮೈಸೂರು: ಮೈಸೂರಿನಲ್ಲಿ ಬಹುರೂಪಿಯ ರಾಷ್ಟ್ರೀಯ ರಂಗೋತ್ಸವದ (Bahuroopi National Theatre Festival) ಅಧಿಕೃತ ಉದ್ಘಾಟನೆಯ ಪೂರ್ವಭಾವಿಯಾಗಿ ‘ಜಾನಪದೋತ್ಸವ’ವನ್ನು(Janapadotsava)  ಗುರುವಾರ ಉದ್ಘಾಟನೆ ಮಾಡಲಾಯಿತು. ಖ್ಯಾತ ಯಕ್ಷಗಾನ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಉಪಸ್ಥಿತಿಯಲ್ಲಿ ಜಾನಪದ ವಿದ್ವಾಂಸ ಡಾ.ಪಿ.ಕೆ. ರಾಜಶೇಖರ್ ಜಾನಪದೋತ್ಸವವನ್ನು ಉದ್ಘಾಟಿಸಿದರು.

ಬಹುರೂಪಿಯ ಮೊದಲ ದಿನ ಮಹಾದೇವ ಮತ್ತು ತಂಡದವರಿಂದ ಕಂಸಾಳೆ, ಕೆರೆಮನೆ ಶಿವಾನಂದ ಹೆಗಡೆ ಅವರಿಂದ ‘ಪಂಚವಟಿ’ ಯಕ್ಷಗಾನ ಹಾಗೂ ಇಡಗುಂಜಿ ಮೇಳವೂ ನಡೆಯಿತು. ಈ ವೇಳೆ ಮಾತನಾಡಿದ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರಿಯಪ್ಪ, ‘ಭಾರತೀಯತೆ’ ವಿಷಯವಾಗಿ ಒಂದು ವಾರದ ರಂಗೋತ್ಸವ ನಡೆಯುತ್ತಿದ್ದು, ಪ್ರತಿ ವರ್ಷದಂತೆ ಕಲಾ ಶಿಬಿರ, ಜಾನಪದ ಶಿಬಿರ, ಚಲನಚಿತ್ರೋತ್ಸವ, ರಾಷ್ಟ್ರೀಯ ವಿಚಾರ ಸಂಕಿರಣ, ಪುಸ್ತಕ ಮೇಳ, ಕಲಾಕೃತಿಗಳ ಪ್ರದರ್ಶನ, ಅನ್ನಸಂತರ್ಪಣೆ, ಅನುಭವ ಪ್ರದರ್ಶನ ನಡೆಯಲಿದೆ ಎಂದರು.

ಇದನ್ನೂ ಓದಿ: ಮೈಸೂರಿನಲ್ಲಿ ಮಾರ್ಚ್ 11ರಿಂದ 10 ದಿನಗಳ ಕಾಲ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಈ ವರ್ಷ ಭೂಮಿಗೀತ, ಕಲಾಮಂದಿರ, ವನರಂಗ, ಬಿ.ವಿ.ಕರಣ ರಂಗಚಾವಡಿ, ಸಂಪತ್ ರಂಗಮಂದಿರದಲ್ಲಿ ಕನ್ನಡದ 12 ನಾಟಕಗಳು, ತುಳು ನಾಟಕ ಸೇರಿದಂತೆ 7 ಭಾಷೆಯ ನಾಟಕಗಳನ್ನು ಬಿಂಬಿಸುವ 7 ರಾಜ್ಯಗಳ ರಂಗತಂಡಗಳು ಪ್ರದರ್ಶನಗೊಳ್ಳಲಿವೆ ಎಂದರು.

23ನೇ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಡಿ. 10ರಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಮೈಸೂರಿನ ರಂಗಾಯಣದ ಆವರಣದಲ್ಲಿ 7 ರಾಜ್ಯಗಳ 7 ವಿವಿಧ ಭಾಷೆಗಳ ನಾಟಕ, 12 ಕನ್ನಡ ಹಾಗೂ ಒಂದು ತುಳು ನಾಟಕ ಸೇರಿ ಒಟ್ಟು 20 ರಂಗ ಪ್ರಯೋಗ ಬಹುರೂಪಿ ರಂಗೋತ್ಸವದಲ್ಲಿ ನಡೆಯಲಿದೆ. ಡಿ. 10ರಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಟ ರಮೇಶ್‌ ಅರವಿಂದ್‌, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ಕುಮಾರ್‌, ಮೇಯರ್‌ ಶಿವಕುಮಾರ್‌ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ