AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ನಲ್ಲಿ ಭುಗಿಲೆದ್ದ ಅಸಮಾಧಾನ: ರಾಜಕಾರಣ ಬಿಡುತ್ತೇನೆ, ಸಾರಾ ಮಹೇಶ್​ಗೆ ಜಿಟಿಡಿ ಸವಾಲ್…!

ಬಿಜೆಪಿ ಬೆನ್ನಲ್ಲೇ ಇದೀಗ ಜೆಡಿಎಸ್​ನಲ್ಲೂ ಸಹ ಅಸಮಾಧಾನ ಭುಗಿಲೆದ್ದಿದೆ. ಅದರಲ್ಲೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರು ರಾಜ್ಯಾಧ್ಯಕ್ಷರ ನಡೆಗೆ ಅಸಮಾಧಾನಗೊಂಡಿದ್ದು, ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರು ಉಳಿದಿದ್ದಾರೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಾ ರಾ ಮಹೇಶ್ ಮತ್ತು ಜಿಟಿ ದೇವೇಗೌಡ ನಡುವಿನ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ಜೆಡಿಎಸ್​ನಲ್ಲಿ ಭುಗಿಲೆದ್ದ ಅಸಮಾಧಾನ: ರಾಜಕಾರಣ ಬಿಡುತ್ತೇನೆ, ಸಾರಾ ಮಹೇಶ್​ಗೆ ಜಿಟಿಡಿ ಸವಾಲ್...!
ಸಾರಾ ಮಹೇಶ್, ಜಿಟಿ ದೇವೇಗೌಡ
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 25, 2024 | 4:55 PM

Share

ಮೈಸೂರು, (ನವೆಂಬರ್ 25): ಜೆಡಿಎಸ್ ನಾಯಕರಾದ ಜಿಟಿ ದೇವೇಗೌಡ ಮತ್ತು ಸಾ.ರಾ ಮಹೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್.ಡಿ.ಕುಮಾರಸ್ವಾಮಿ ಬಳಿ ನನ್ನ ಮಾತೇನೂ ನಡೆಯುವುದಿಲ್ಲ. ನನ್ನಿಂದ ರಾಜಕೀಯವಾಗಿ ತೊಂದರೆ ಆಗಿದೆ ಎಂದು ಭಾವಿಸಿದ್ದರೆ ಆಣೆ ಪ್ರಮಾಣ ಮಾಡಲು ಚಾಮುಂಡಿಬೆಟ್ಟಕ್ಕೆ ಬರಲಿ ಎಂದು ಸಾ.ರಾ ಮಹೇಶ್ ಸವಾಲ್ ಹಾಕಿದ್ದರು. ಇದೀಗ ಇದಕ್ಕೆ ಪ್ರತಿಕ್ರಿಯಿಸಿರುವ ಜಿಟಿ ದೇವೇಗೌಡ, ಎಚ್.ಡಿ.ದೇವೆಗೌಡರು ನನ್ನನ್ನು ಉಪಚುನಾವಣೆ ಪ್ರಚಾರಕ್ಕೆ ಕರೆದಿದ್ದೇನೆ ಎಂದು ಹೇಳಲಿ. ನಾನು ಅಂದೆ ರಾಜಕಾರಣವನ್ನ ಬಿಟ್ಟುಬಿಡುತ್ತೇನೆ ಮಹೇಶ್​​ಗೆ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿ ದೇವೇಗೌಡ, ಎಚ್.ಡಿ.ದೇವೆಗೌಡರು ನನ್ನನ್ನು ಉಪಚುನಾವಣೆ ಪ್ರಚಾರಕ್ಕೆ ಕರೆದಿದ್ದೇನೆ ಎಂದು ಹೇಳಲಿ. ನಾನು ಅಂದೆ ರಾಜಕಾರಣವನ್ನ ಬಿಟ್ಟುಬಿಡುತ್ತೇನೆ. ಸಾ.ರಾ.ಮಹೇಶ್ ಸುಮ್ಮನೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಸುಳ್ಳು ಹೇಳಿಕೊಂಡು ಚಾಮುಂಡಿಬೆಟ್ಟಕ್ಕೆ ಬಾ ಅಲ್ಲಿಗೆ ಬಾ ಅಂದರೆ ಹೋಗಲು ಆಗುತ್ತದ. ಈ ಹಿಂದೆ ವಿಶ್ವನಾಥ್ ಜೊತೆ ಚಾಮುಂಡಿಬೆಟ್ಟಕ್ಕೆ ಹೋಗಿ ಅವರ ಕಥೆ ಏನಾಯಿತು. ಆ ಕಥೆ ನನಗು ಆಗಬೇಕಾ ಎಂದು ಖಾರವಾಗಿ ಮಾತನಾಡಿದರು.

ಇದನ್ನೂ ಓದಿ: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ಡೆಮಾಲಿಷ್ ಮಾಡ್ತಿದ್ದಾರೆ: ಜಿಟಿ ದೇವೇಗೌಡ ವಾಗ್ದಾಳಿ

ನಾನು ಹೇಳುತ್ತಿರೋದೆ ಸತ್ಯ. ನಾನು ತಪ್ಪು ಮಾಡಿದ್ದರೆ ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಳ್ಳುತ್ತೇನೆ. ಒಂದು ಬಾರಿ ಯಾವುದೋ ತಪ್ಪು ಮಾಡಿದ್ದೆ. ಅಂದು ಸಂಜೆಯೆ ನನ್ನ ತಾಯಿ ಬಳಿ ಹೋಗಿ ತಪ್ಪು ಒಪ್ಪುಕೊಂಡಿದ್ದೆ. ನಾನು ಯಾವುದಕ್ಕೂ ಹೆದರುವುದಿಲ್ಲ ಸುಳ್ಳು ಹೇಳುವವನು ಅಲ್ಲ. ಸುಮ್ಮನೆ ಸಾ.ರಾ.ಮಹೇಶ್ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ವಾಗ್ದಾಳಿ ನಡೆಸಿದರು.

ನನಗೆ ಯಾರೋ ಒಬ್ಬರ ಹೆಸರು ಇಟ್ಟುಕೊಂಡ ರಾಜಕಾರಣ ಮಾಡುವ ಅನಿವಾರ್ಯತೆ ಇಲ್ಲ. ಯಾರು ಇಲ್ಲದಿದ್ದರು ನಾನು ರಾಜಕಾರಣ ಮಾಡಿದ್ದೇನೆ. ನನಗೆ ರಾಜಕೀಯ ಮಾಡುವುದು ಗೊತ್ತು. ನಾನು ಯಾರ ಕತ್ತನ್ನು ಕೊಯ್ದಿಲ್ಲ. ನನ್ನನ್ನು ಯಾರು ಯಾವ ಪಕ್ಷಕ್ಕೂ ಕರೆ ತಂದಿಲ್ಲ. ನಾನು ಸ್ವಂತವಾಗಿ ರಾಜಕಾರಣ ಮಾಡಿದವನು ಎಂದು ವಿರೋಧಿಗಳಿಗೆ ಸಂದೇಶ ರವಾನಿಸಿದರು.

ಈಗಲೂ ಮತ್ತೊಂದು ನೋವು ಆಗುತ್ತಿದೆ

ಜೆಡಿಎಸ್ ನಲ್ಲಿ ನೋವು ನನಗೆ ಹೊಸದಲ್ಲ. ನನಗೆ ಹಲವು ಬಾರಿ ಜೆಡಿಎಸ್ ನಲ್ಲಿ ಇಂತಹ ನೋವು ಉಂಟಾಗಿದೆ. ಈಗಲೂ ಮತ್ತೊಂದು ನೋವು ಆಗುತ್ತಿದೆ. ಏನು ಮಾಡೋಣ. ನನಗೆ ಪದೇ ಪದೇ ಈ ರೀತಿ ಉಂಟಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ಇಬ್ರಾಹಿಂ ಭೇಟಿ ಬಗ್ಗೆ ಜಿಟಿಡಿ ಹೇಳಿದ್ದೇನು?

ಇನ್ನು ಇದೇ ವೇಳೆ ಸಿ.ಎಂ ಇಬ್ರಾಹಿಂ ಭೇಟಿ ವಿಚಾರದ ಬಗ್ಗೆ ಮಾತನಾಡಿ, ಇಬ್ರಾಹಿಂಗೆ ಪ್ರತ್ಯೇಕ ಪ್ರಾದೇಶಿಕ ಪಕ್ಷ ಕಟ್ಟುವ ಉತ್ಸಾಹ ಇದೆ. ಅದನ್ನ ನನ್ನ ಬಳಿ ಹೇಳಿಕೊಂಡಿದ್ದಾರೆ. ರಾಜ್ಯ ಪ್ರವಾಸ ಮುಗಿಸಿ, ಮತ್ತೆ ಮಾತನಾಡುತ್ತೇನೆ ಎಂದು ಹೇಳಿ ಹೋಗಿದ್ದಾರೆ. ಶಾಸಕರನ್ನ ಕಟ್ಟಿಕೊಂಡು ಪಕ್ಷಗಳನ್ನ ಕಟ್ಟಲು ಆಗಲ್ಲ. ಪಕ್ಷ ಕಟ್ಟಲು ಕಾರ್ಯಕರ್ತರು ಬೇಕು. ನಾನು ಅವರು ಹೇಳಿದ್ದನ್ನು ಕೇಳಿಸಿಕೊಂಡಿದ್ದೇನೆ ಅಷ್ಟೆ. ನಾನು ಇಂದಿನವರೆಗೂ ಯಾವ ಜೆಡಿಎಸ್ ಶಾಸಕರ ಜೊತೆಯು ಮಾತನಾಡಿಲ್ಲ. ಯಾರಿಗಾದ್ರು ನೋವಾಗಿದ್ದರೆ ಅವರಾಗೆ ಅವರೇ ಮಾತನಾಡಿದರೆ ಮಾತನಾಡುತ್ತೇನೆ. ನಾನಾಗೇ ನಾನು ಯಾರ ಜೊತೆಯು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!