AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ, ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್​ಗೆ ಸೇರುವೆ, ಈಮುನ್ನವೇ ಬಿಜೆಪಿ ಸೇರಿ ಡಿಸಿಎಂ ಆಗಬಹುದಿತ್ತು: ಶಾಸಕ ಜಿ.ಟಿ.ದೇವೇಗೌಡ

ನಾನು ಯಾವಾಗಲೂ ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಬಿಎಸ್ ಯಡಿಯೂರಪ್ಪನವರು ಐದು ಟಿಕೇಟ್ ಕೊಡ್ತೀನಿ, ಐದು ಸ್ಥಳ ಆಯ್ಕೆ ಮಾಡಿಕೊಳ್ಳಿ ಅಂದಿದ್ದರು. ಆದರೆ ನಾನು ಯಾವತ್ತೂ ಅಧಿಕಾರಕ್ಕೆ ಆಸೆಪಟ್ಟವನಲ್ಲ. ನನಗೆ ಜನರ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಅವರು ತಿಳಿಸಿದರು.

ನನಗೆ, ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್​ಗೆ ಸೇರುವೆ, ಈಮುನ್ನವೇ ಬಿಜೆಪಿ ಸೇರಿ ಡಿಸಿಎಂ ಆಗಬಹುದಿತ್ತು: ಶಾಸಕ ಜಿ.ಟಿ.ದೇವೇಗೌಡ
ಜಿ.ಟಿ.ದೇವೇಗೌಡ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 30, 2021 | 7:40 PM

Share

ಮೈಸೂರು: ನನಗೆ, ನನ್ನ ಮಗನಿಗೆ ಟಿಕೆಟ್ ಖಚಿತ ಪಡಿಸಿದರೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅಧಿಕಾರಕ್ಕೆ ಆಸೆಪಟ್ಟಿದ್ದರೆ ಬಿಜೆಪಿಗೆ ಸೇರಿ ಉಪ ಮುಖ್ಯಮಂತ್ರಿಯಾಗುತ್ತಿದ್ದೆ. ಹದಿನೇಳು ಜನರು ಬಿಜೆಪಿಗೆ ಸೇರಿದಾಗ ಆ ಲಿಸ್ಟ್​ನಲ್ಲಿ ನನ್ನ ಹೆಸರೇ ಮೊದಲಿತ್ತು. ನಾನು ಯಾವಾಗಲೂ ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಬಿಎಸ್ ಯಡಿಯೂರಪ್ಪನವರು ಐದು ಟಿಕೇಟ್ ಕೊಡ್ತೀನಿ, ಐದು ಸ್ಥಳ ಆಯ್ಕೆ ಮಾಡಿಕೊಳ್ಳಿ ಅಂದಿದ್ದರು. ಆದರೆ ನಾನು ಯಾವತ್ತೂ ಅಧಿಕಾರಕ್ಕೆ ಆಸೆಪಟ್ಟವನಲ್ಲ. ನನಗೆ ಜನರ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗೂ ಮುನ್ನ ಟಿಕೆಟ್ ಸಿಗುವುದು ಖಚಿತವಾದಲ್ಲಿ ಪುತ್ರ ಹರೀಶ್‌ ಗೌಡ ಕಾಂಗ್ರೆಸ್ ಸೇರಲಿದ್ದಾರೆ. ಆ ಬಳಿಕ ನಾನು ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ. ನಾನು ಈಗ ಕಾಂಗ್ರೆಸ್ ಸೇರುತ್ತೇನೆಂದು ಹೇಳಿಲ್ಲ. ಸದ್ಯಕ್ಕೆ ನಾನು ತಟಸ್ಥವಾಗಿ ಇರುತ್ತೇನೆ ಎಂದು ಅವರು ತಿಳಿಸಿದರು. ಎಲ್ಲೂ ಅವಕಾಶ ಸಿಗದಿದ್ದರೆ ಜೆಡಿಎಸ್‌ಗೆ ಬರುತ್ತಾರೆ ಎಂದ ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ದೇವಿಯ ಕೃಪೆ ಏನಿದೆಯೋ ಅದೇ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಯಾರನ್ನೂ ಬಿಡುವುದಿಲ್ಲ; ಸುದ್ದಿಗೋಷ್ಠಿ ವೇಳೆ ಕಮಲ್ ಪಂತ್ ಹೇಳಿಕೆ 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ

(JDS MLA GT DeveGowda says will joins Congress if confirm ticket to me and my son)

Published On - 5:13 pm, Mon, 30 August 21

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​