AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ, ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್​ಗೆ ಸೇರುವೆ, ಈಮುನ್ನವೇ ಬಿಜೆಪಿ ಸೇರಿ ಡಿಸಿಎಂ ಆಗಬಹುದಿತ್ತು: ಶಾಸಕ ಜಿ.ಟಿ.ದೇವೇಗೌಡ

ನಾನು ಯಾವಾಗಲೂ ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಬಿಎಸ್ ಯಡಿಯೂರಪ್ಪನವರು ಐದು ಟಿಕೇಟ್ ಕೊಡ್ತೀನಿ, ಐದು ಸ್ಥಳ ಆಯ್ಕೆ ಮಾಡಿಕೊಳ್ಳಿ ಅಂದಿದ್ದರು. ಆದರೆ ನಾನು ಯಾವತ್ತೂ ಅಧಿಕಾರಕ್ಕೆ ಆಸೆಪಟ್ಟವನಲ್ಲ. ನನಗೆ ಜನರ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಅವರು ತಿಳಿಸಿದರು.

ನನಗೆ, ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್​ಗೆ ಸೇರುವೆ, ಈಮುನ್ನವೇ ಬಿಜೆಪಿ ಸೇರಿ ಡಿಸಿಎಂ ಆಗಬಹುದಿತ್ತು: ಶಾಸಕ ಜಿ.ಟಿ.ದೇವೇಗೌಡ
ಜಿ.ಟಿ.ದೇವೇಗೌಡ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 30, 2021 | 7:40 PM

Share

ಮೈಸೂರು: ನನಗೆ, ನನ್ನ ಮಗನಿಗೆ ಟಿಕೆಟ್ ಖಚಿತ ಪಡಿಸಿದರೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅಧಿಕಾರಕ್ಕೆ ಆಸೆಪಟ್ಟಿದ್ದರೆ ಬಿಜೆಪಿಗೆ ಸೇರಿ ಉಪ ಮುಖ್ಯಮಂತ್ರಿಯಾಗುತ್ತಿದ್ದೆ. ಹದಿನೇಳು ಜನರು ಬಿಜೆಪಿಗೆ ಸೇರಿದಾಗ ಆ ಲಿಸ್ಟ್​ನಲ್ಲಿ ನನ್ನ ಹೆಸರೇ ಮೊದಲಿತ್ತು. ನಾನು ಯಾವಾಗಲೂ ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಬಿಎಸ್ ಯಡಿಯೂರಪ್ಪನವರು ಐದು ಟಿಕೇಟ್ ಕೊಡ್ತೀನಿ, ಐದು ಸ್ಥಳ ಆಯ್ಕೆ ಮಾಡಿಕೊಳ್ಳಿ ಅಂದಿದ್ದರು. ಆದರೆ ನಾನು ಯಾವತ್ತೂ ಅಧಿಕಾರಕ್ಕೆ ಆಸೆಪಟ್ಟವನಲ್ಲ. ನನಗೆ ಜನರ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗೂ ಮುನ್ನ ಟಿಕೆಟ್ ಸಿಗುವುದು ಖಚಿತವಾದಲ್ಲಿ ಪುತ್ರ ಹರೀಶ್‌ ಗೌಡ ಕಾಂಗ್ರೆಸ್ ಸೇರಲಿದ್ದಾರೆ. ಆ ಬಳಿಕ ನಾನು ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ. ನಾನು ಈಗ ಕಾಂಗ್ರೆಸ್ ಸೇರುತ್ತೇನೆಂದು ಹೇಳಿಲ್ಲ. ಸದ್ಯಕ್ಕೆ ನಾನು ತಟಸ್ಥವಾಗಿ ಇರುತ್ತೇನೆ ಎಂದು ಅವರು ತಿಳಿಸಿದರು. ಎಲ್ಲೂ ಅವಕಾಶ ಸಿಗದಿದ್ದರೆ ಜೆಡಿಎಸ್‌ಗೆ ಬರುತ್ತಾರೆ ಎಂದ ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ದೇವಿಯ ಕೃಪೆ ಏನಿದೆಯೋ ಅದೇ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಯಾರನ್ನೂ ಬಿಡುವುದಿಲ್ಲ; ಸುದ್ದಿಗೋಷ್ಠಿ ವೇಳೆ ಕಮಲ್ ಪಂತ್ ಹೇಳಿಕೆ 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ

(JDS MLA GT DeveGowda says will joins Congress if confirm ticket to me and my son)

Published On - 5:13 pm, Mon, 30 August 21

Follow Us
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್