ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ ಕೆಂಪೇಗೌಡ ನಿಧನ

ಖ್ಯಾತ ಕನ್ನಡ ಭಾಷಾವಿಜ್ಞಾನಿ ಡಾ. ಕೆ. ಕೆಂಪೇಗೌಡರು ನಿಧನರಾಗಿದ್ದಾರೆ. ಅವರು ಭಾಷಾ ವಿಜ್ಞಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಮತ್ತು ಡಿ.ಲಿಟ್ ಪದವಿ ಪಡೆದಿದ್ದ ಅವರು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ ಮತ್ತು ಅನೇಕ ಲೇಖನಗಳನ್ನು ಬರೆದಿದ್ದಾರೆ. ಅವರ ನಿಧನವು ಕನ್ನಡ ಭಾಷಾ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ.

ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ ಕೆಂಪೇಗೌಡ ನಿಧನ
ಭಾಷಾವಿಜ್ಞಾನಿ ಡಾ. ಕೆ.ಕೆಂಪೆಗೌಡ
Edited By:

Updated on: Feb 26, 2025 | 3:59 PM

ಮೈಸೂರು, ಫೆಬ್ರವರಿ 26: ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ ಕೆಂಪೇಗೌಡ (K Kempegowda) ನಿಧನರಾಗಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿರುವ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚನ್ನಪಟ್ಟಣದ ಹೆಚ್ ಬ್ಯಾಡ್ರಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ಹಿರಿಯ ಲೇಖಕ ಕೆ. ಕೆಂಪೇಗೌಡ ಅವರು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದವರು. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಶೆಟ್ಟಿಹಳ್ಳಿಯಲ್ಲಿ ಮಾಧ್ಯಮಿಕ ಮತ್ತು ಚನ್ನಪಟ್ಟಣದಲ್ಲಿ ಹೈಯರ್ ಸೆಕೆಂಡರಿ ಶಿಕ್ಷಣ ಪಡೆದರು. ಮೈಸೂರು ವಿಶ್ವವಿದ್ಯಾಲಯದಿಂದ ಹಿಂದಿ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಭಾಷಾ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು.
(ಸಂಶೋಧನೆ ಮತ್ತು ಗ್ರಂಥರಚನೆಗೆ ಅನುವಾದ A Descriptive Analysis of Irula Dialect) ಈ ವಿಷಯ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ.ಪದವಿ ಪಡೆದರು. ಸಾಮಾನ್ಯ ಭಾಷಾ ವಿಜ್ಞಾನ ಕೃತಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದರು.

ಭಾಷಾ ವಿಜ್ಞಾನ ಕೋಶ, ಧ್ವನಿಮಾ ವಿಜ್ಞಾನ, ಸಾಮಾನ್ಯ ಭಾಷಾ ವಿಜ್ಞಾನ, ಕನ್ನಡ ಭಾಷಾ ಚರಿತ್ರೆ, ತೌಲನಿಕ ದ್ರಾವಿಡ ಭಾಷಾ ವಿಜ್ಞಾನ, ಕನ್ನಡ ಭಾಷ ಸ್ವರೂಪ, ಕನ್ನಡ ಉಪಭಾಷೆಗಳ ಅಧ್ಯಯನ ಸೇರಿದಂತೆ ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದ ಅನೇಕ ಲೇಖನಗಳನ್ನು ಕನ್ನಡಕ್ಕೆ ಕೊಡುಗೆಯಾಗಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Wed, 26 February 25