AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನದಲ್ಲಿ ಅಷ್ಟು ನೋವಿದ್ದರೂ ಯುಗಾದಿಯ ಶುಭಾಶಯ ತಿಳಿಸಿದ ಕನ್ನಡ ಪ್ರೇಮಿ ಸಯ್ಯದ್ ಇಸಾಕ್‌

ಕನ್ನಡ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ನಿನ್ನೆಯಿಂದ ಹಲವಾರು ಜನ ಬಂದು ಪುಸ್ತಕ ಹಾಗೂ ನೆರವನ್ನು ನೀಡಿ ಪ್ರೀತಿ ತೋರಿದ್ದಾರೆ. ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು ವಿನಮ್ರ ಭಾವ ಹಂಚಿಕೊಂಡಿದ್ದಾರೆ.

ಮನದಲ್ಲಿ ಅಷ್ಟು ನೋವಿದ್ದರೂ ಯುಗಾದಿಯ ಶುಭಾಶಯ ತಿಳಿಸಿದ ಕನ್ನಡ ಪ್ರೇಮಿ ಸಯ್ಯದ್ ಇಸಾಕ್‌
ಕನ್ನಡ ಪ್ರೇಮಿ ಸಯ್ಯದ್ ಇಸಾಕ್​ರ ಗ್ರಂಥಾಲಯ
shruti hegde
| Edited By: |

Updated on: Apr 11, 2021 | 5:22 PM

Share

ಮೈಸೂರು: ವಿದ್ಯೆ ಬಲ್ಲವನು ಏನು ಬೇಕಾದರೂ ಮಾಡಬಲ್ಲ. ಅದು ಪುಸ್ತಕಓದುವುದರಿಂದ ಮಾತ್ರ ಸಾಧ್ಯ. ಆದರೆ ಮೈಸೂರಿನ ಗ್ರಂಥಾಲಯಕ್ಕೆ ಕೆಲ ಕಿಡಿಗೇಡಿಗಳು ಬೆಂಕಿ ಇಟ್ಟು ಗ್ರಂಥಾಲಯದಲ್ಲಿದ್ದ 11 ಸಾವಿರ ಪುಸ್ತಕಗಳು ಸುಟ್ಟು ಭಸ್ಮವಾಗಿದ್ದವು. ಸಾಂಸ್ಕೃತಿಕ ನಗರಿ ಮೈಸೂರಿನ ಕನ್ನಡ ಪ್ರೇಮಿ ಸಯ್ಯದ್ ಅವರ ಗ್ರಂಥಾಲಯಕ್ಕೆ ಬೆಂಕಿ ಹೊತ್ತುಕೊಂಡಿದ್ದು ಪುಸ್ತಕಗಳು ಬೆಂಕಿಗಾಹುತಿಯಾಗಿದ್ದವು.ಇಂತಹ ನೋವಿನ ಸಂದರ್ಭದಲ್ಲೂ ನೋವಿನಲ್ಲೂ ಕನ್ನಡ ಪ್ರೇಮಿ ಸಯ್ಯದ್ ಇಸಾಕ್‌ ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ.

ಕನ್ನಡ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ನಿನ್ನೆಯಿಂದ ಹಲವಾರು ಜನ ಬಂದು ಪುಸ್ತಕ ಹಾಗೂ ನೆರವನ್ನು ನೀಡಿ ಪ್ರೀತಿ ತೋರಿದ್ದಾರೆ. ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು ವಿನಮ್ರ ಭಾವ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ನನ್ನನ್ನು ದೂರವಾಣಿ ಮೂಲಕ ಮಾತನಾಡಿಸಿದ್ದಾರೆ. ಇದೇ ಜಾಗದಲ್ಲಿ ಗ್ರಂಥಾಲಯ ನಿರ್ಮಿಸಿ ಕೊಡುವ ಭರವಸೆ ನೀಡಿದ್ದಾರೆ. ಪುಸ್ತಕ ನೀಡುತ್ತಿರುವ ಎಲ್ಲರಿಗೂ ಧನ್ಯವಾದಗಳು ಎಂದ ಸಯ್ಯದ್ ಇಸಾಕ್‌ ಹೇಳಿದ್ದಾರೆ.

ಮೈಸೂರಿನ ರಾಜೀವ್‌ ನಗರದಲ್ಲಿರುವ ಅಪ್ಪಟ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಅವ​ರ ಗ್ರಂಥಾಲಯದ 11 ಸಾವಿರ ಪುಸ್ತಕಗಳು ಸುಟ್ಟು ಕರಕಲಾಗಿದ್ದವು. ಈ ಜ್ಞಾನ ದೇಗುಲವನ್ನು 2011ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಸಯ್ಯದ್ ಇಸಾಕ್ ತಮ್ಮ ಉಳಿತಾಯದ ಹಣದಲ್ಲಿ ಗುಡಿಸಿಲಿನಲ್ಲೇ ಗ್ರಂಥಾಲಯ ನಿರ್ಮಿಸಿದ್ದರು. ತನಗೆ ಅಕ್ಷರ ಜ್ಞಾನ ಇಲ್ಲದಿದ್ದರೇನಂತೆ ಇತರರಿಗೆ ಅಕ್ಷರ ಜ್ಞಾನ ನೀಡಲು ಮುಂದಾಗಿದ್ದ ಸಯ್ಯದ್​ರ ಗ್ರಂಥಾಲಯ ಹಾಗೂ ಅವರ ಈ ಪ್ರೀತಿ ಮೈಸೂರಿನಲ್ಲಿ ಅಪಾರ ಜನ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ ದುಷ್ಕರ್ಮಿಗಳು ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಕೃತ್ಯ ಎಸಗಿದ್ದರು.

ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ 

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ