AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿ‌ ಶೀಟರ್​ಗೆ ಸಿಕ್ತು ರಾಜ್ಯೋತ್ಸವ ಪ್ರಶಸ್ತಿ; ಕುತೂಹಲ ಸೃಷ್ಟಿಸಿದ ಮೈಸೂರು ಜಿಲ್ಲಾಡಳಿತದ ನಿರ್ಧಾರ

ಮೈಸೂರು ಜಿಲ್ಲಾ‌ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರೌಡಿ‌ ಶೀಟರ್​ಗೆ ನೀಡಿ ಗೌರವಿಸಲಾಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿದ್ದಾರ ಎಂಬ ಅನುಮಾನ ಹುಟ್ಟಿಕೊಂಡಿದೆ.

ರೌಡಿ‌ ಶೀಟರ್​ಗೆ ಸಿಕ್ತು ರಾಜ್ಯೋತ್ಸವ ಪ್ರಶಸ್ತಿ; ಕುತೂಹಲ ಸೃಷ್ಟಿಸಿದ ಮೈಸೂರು ಜಿಲ್ಲಾಡಳಿತದ ನಿರ್ಧಾರ
ಅಶೋಕ್
ದಿಲೀಪ್​, ಚೌಡಹಳ್ಳಿ
| Updated By: ಆಯೇಷಾ ಬಾನು|

Updated on:Nov 20, 2023 | 9:46 AM

Share

ಮೈಸೂರು, ನ.20: ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ ಗುರುತಿಸಿಕೊಂಡವರು, ರಾಜ್ಯಕ್ಕೆ ಉತ್ತಮ ಕೊಡುಗೆ ನೀಡಿದವರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ನೀಡಲಾಗುತ್ತೆ. ಆದರೆ ಮೈಸೂರು ಜಿಲ್ಲಾ‌ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರೌಡಿ‌ ಶೀಟರ್​ಗೆ (Rowdy Sheeter) ನೀಡಿ ಗೌರವಿಸಲಾಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿದ್ದಾರ ಎಂಬ ಅನುಮಾನ ಹುಟ್ಟಿಕೊಂಡಿದೆ.

ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ರೌಡಿ‌ ಶೀಟರ್‌ ಅಶೋಕ್​ಗೆ ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಆದರೆ ಕಾಂಗ್ರೆಸ್ ಮುಖಂಡನಾಗಿರುವ ಅಶೋಕ್‌ ಅಲಿಯಾಸ್ ಕುಳ್ಳ‌ ಅಶೋಕ್, ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ರೌಡಿ‌ ಶೀಟರ್ ಆಗಿದ್ದಾರೆ. ಇತ್ತೀಜೆಗೆ ಅಶೋಕ್ ಪುತ್ರ ನೇವಲ್ ಅಶೋಕ್ ಪುಂಡಾಟ ನಡೆಸಿದ್ದ. ಈ ಪ್ರಕರಣ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ಅಶೋಕ್​ನ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಅಶೋಕ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಿಂದಿಂದೆ ಓಡಾಡುತ್ತಿದ್ದಾರೆ. ಸಿಎಂ ಹಾಗೂ ಡಿಸಿಎಂ ಹಿಂಬಾಲಕ ಎಂಬ ಕಾರಣಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆಯಾ? ಅಥವಾ ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿದ್ದಾರ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಕ್ರಿಮಿನಲ್ ಹಿನ್ನೆಲೆ ಕಾರಣಕ್ಕೆ ರಾಜ್ಯ ಸರ್ಕಾರ ಹಲವರನ್ನು ಪ್ರಶಸ್ತಿಗೆ ಪರಿಗಣಿಸದೆ ಕೈ ಬಿಟ್ಟಿದೆ. ಆದರೆ ಅಶೋಕ್​ಗೆ ಪ್ರಶಕ್ತಿ ಸಿಕ್ಕಿದ್ದು ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ.

ಇದನ್ನೂ ಓದಿ: ಮೈಸೂರು: ಕನ್ನಡ ರಾಜ್ಯೋತ್ಸವ ದಿನ ಅನ್ನದಾನ ವಿಚಾರವಾಗಿ ಗಲಾಟೆ; ಪುರಸಭೆ ಸದಸ್ಯನ ಮೇಲೆ ಹಲ್ಲೆ

ಮೈಸೂರಿನಲ್ಲಿ ನ. 1ರಂದು ಸಂಜೆ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಿಲ್ಲಾಡಳಿತದ ವತಿಯಿಂದ ನಗರದ ಓವೆಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ 52 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ 17 ಮಂದಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:45 am, Mon, 20 November 23

‘ನಮಗೆ ಮೋಸ ಆಗಿದ್ದು ನಿಜ’; ಪುಷ್ಪಾ ಬಗ್ಗೆ ಕಲಾವಿದೆ ಸ್ವರ್ಣ ಬೇಸರ
‘ನಮಗೆ ಮೋಸ ಆಗಿದ್ದು ನಿಜ’; ಪುಷ್ಪಾ ಬಗ್ಗೆ ಕಲಾವಿದೆ ಸ್ವರ್ಣ ಬೇಸರ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ