AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ

ಡಿಸೆಂಬರ್ 30 ರಂದು ಪ್ರತಿಭಟನೆಗೆ ಕರೆ ನೀಡಿದ ರಾಜ್ಯ ರೈತ ಸಂಘ ಹೇಳಿಕೆ ನೀಡಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಡೇರಿಗಳಲ್ಲಿ ಕಚ್ಚಾ ಹಾಲು ಮಾರಾಟ ನಿಷೇಧಕ್ಕೂ ವಿರೋಧ ವ್ಯಕ್ತವಾಗಿದೆ.

ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 28, 2021 | 6:05 PM

Share

ಮೈಸೂರು: ಜಿಲ್ಲೆಯಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಡಿಸೆಂಬರ್ 30 ರಂದು ಪ್ರತಿಭಟನೆಗೆ ಕರೆ ನೀಡಿದ ರಾಜ್ಯ ರೈತ ಸಂಘ ಹೇಳಿಕೆ ನೀಡಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಡೇರಿಗಳಲ್ಲಿ ಕಚ್ಚಾ ಹಾಲು ಮಾರಾಟ ನಿಷೇಧಕ್ಕೂ ವಿರೋಧ ವ್ಯಕ್ತವಾಗಿದೆ.

ನಂದಿನಿ ತುಪ್ಪ ಕಲಬೆರಕೆ ಆಗಿರೋದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಹಗರಣದಲ್ಲಿ ಹಲವು ಮೈಮುಲ್ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ಇದೆ. ಕೂಡಲೇ ಈ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಅಲ್ಲದೆ ಜನವರಿ 1 ರಿಂದ ಡೈರಿಗಳಲ್ಲಿ ಸ್ಥಳೀಯ ಕಚ್ಚಾ ಹಾಲು ಮಾರಾಟಕ್ಕೆ ನಿಷೇಧ ಮಾಡಿರುವುದು ಖಂಡನೀಯ. ಇದರಿಂದ ಹಾಲು ಉತ್ಪಾದಕರಿಗೆ ಹೊಡೆತ ಬೀಳಲಿದೆ. ಈ ಎಲ್ಲಾ ವಿಚಾರಗಳ ಕುರಿತು ಧರಣಿ ಸತ್ಯಾಗ್ರಹ ನಡೆಸಲು ಮೈಸೂರಿನ ಜಲದರ್ಶಿನಿಯಲ್ಲಿ ನಡೆದ ರೈತ ಸಂಘದ ಮುಖಂಡರ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಹೇಳಿಕೆ ನೀಡಿದ್ದಾರೆ. ಪ್ರಕರಣ ಸಂಬಂಧ DySP ಸುಮಿತ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ನಾಲ್ವರ ಪೈಕಿ ಇಬ್ಬರ ಹೆಸರು ಎಫ್ಐಆರ್​ನಲ್ಲಿ ಉಲ್ಲೇಖ ಮಾಡಲಾಗಿದೆ. ಆರೋಪಿಗಳ ಮಾಹಿತಿ ಆಧರಿಸಿ ಮುಂದಿನ ಕ್ರಮ ಕೈಗೊಳ್ತೇವೆ. ದಾಳಿ ವೇಳೆ 10 ಟನ್ ನಕಲಿ ನಂದಿನಿ ತುಪ್ಪ ಪತ್ತೆಯಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ತುಪ್ಪ ಜಾಲ ಪತ್ತೆ ಪ್ರಕರಣ; ಬೆಂಗಳೂರಿನ ಗೋಡೌನ್‌ ಮೇಲೆ ಮಾದನಾಯಕನಹಳ್ಳಿ ಪೊಲೀಸರು ದಾಳಿ

ಇದನ್ನೂ ಓದಿ: Crime Update: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ, ಬೆಂಗಳೂರಿನಲ್ಲಿ ಮಾದಕ ಹ್ಯಾಶ್​ ಆಯಿಲ್ ವಶಕ್ಕೆ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!