AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಆನೆಗಳೊಂದಿಗೆ ಫೋಟೋ ಶೂಟ್, ರೀಲ್ಸ್‌ಗೆ ಬ್ರೇಕ್‌: ಅಧಿಕಾರಿಗಳಿಗೆ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ

ಮೈಸೂರು ಅರಮನೆ ಆವರಣದಲ್ಲಿ ಧನಂಜಯ ಹಾಗೂ ಕಂಜನ್‌ ಆನೆಗಳ ಕಾದಾಟವಾಗಿದ್ದು, ಇದು ಆತಂಕಕ್ಕೆ ಕಾರಣವಾಗಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ದಸರಾ ಆನೆಗಳೊಂದಿಗೆ ಫೋಟೋ ಶೂಟ್‌ ಹಾಗೂ ವಿಡಿಯೋ, ರೀಲ್ಸ್​​ ಮಾಡದಂತೆ ಈಶ್ವರ ಖಂಡ್ರೆ ಖಡಕ್​ ಸೂಚನೆ ನೀಡಿದ್ದಾರೆ.

ದಸರಾ ಆನೆಗಳೊಂದಿಗೆ ಫೋಟೋ ಶೂಟ್, ರೀಲ್ಸ್‌ಗೆ ಬ್ರೇಕ್‌: ಅಧಿಕಾರಿಗಳಿಗೆ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ
ಮೈಸೂರು ದಸರಾ ಆನೆಗಳು
ಪ್ರಸನ್ನ ಗಾಂವ್ಕರ್​
| Edited By: |

Updated on: Sep 23, 2024 | 5:35 PM

Share

ಮೈಸೂರು, (ಸೆಪ್ಟೆಂಬರ್ 23): ಮೂರು ದಿನದ ಹಿಂದೆ ಮೈಸೂರು ದಸರಾ ಆನೆಗಳಾದ ಧನಂಜಯ ಹಾಗೂ ಕಂಜನ್‌ ಆನೆಯ ಕಾದಾಟದ ನಂತರ ಎಚ್ಚೆತ್ತುಕೊಂಡಿರುವ ಕರ್ನಾಟಕ ಅರಣ್ಯ ಇಲಾಖೆ, ಆನೆಗಳ ಬಳಿ ಫೋಟೋ ಶೂಟ್‌, ರೀಲ್ಸ್‌ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೆ ಸಾರ್ವಜನಿಕರು ಆನೆಗಳ ಬಳಿ ದಂತ ಹಿಡಿದುಕೊಂಡು ಫೋಟೋ ಶೂಟ್‌ ಮಾಡಿಸುವುದು, ವಿಡಿಯೋ ಮಾಡಿಕೊಂಡು ರೀಲ್ಸ್‌ಗೆ ಮುಂದಾಗುವಂತ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.

ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದನಾಡಿಗೆ ಬಂದು ಪ್ರಸ್ತುತ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಸಾಕಾನೆಗಳ ಬಳಿ ಫೋಟೋ ಶೂಟ್‌ ಹಾಗೂ ರೀಲ್ಸ್‌ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳೇ ಅವಕಾಶ ನೀಡಿದ್ದಾರೆ. ಇದರಿಂದ ಆನೆಗಳು ವಿಚರಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಂಜನ್‌ ಹಾಗೂ ಧನಂಜನ್‌ ಎನ್ನುವ ಆನೆಗಳ ನಡುವೆ ಕಾದಾಟ ಆಗಲು ಇದೂ ಒಂದು ಕಾರಣವಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪಿಸಿಸಿಎಫ್‌ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮೈಸೂರು ಅರಮನೆ ಆವರಣದಲ್ಲಿ ಗಜ ಗಲಾಟೆ: ನಿಜಕ್ಕೂ ನಡೆದಿದ್ದೇನು? ಇಲ್ಲಿದೆ ಸ್ವಾರಸ್ಯಕರ ಮಾಹಿತಿ

ಅಧಿಕಾರಿಗಳೇ ರೀಲ್ಸ್​ಗೆ ಅವಕಾಶ ನೀಡ್ತಿದ್ದಾರೆ ಎಂಬ ಆರೋಪ ಇದೆ . ಇದರಿಂದ ಆನೆಗಳು ವಿಚಲಿತಗೊಂಡು ಅನುಚಿತವಾಗಿ ವರ್ತಿಸುತ್ತಿವೆ. ಕಾಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟ ಬಗ್ಗೆ ವರದಿಯಿಂದ ತಿಳಿದುಬಂದಿದೆ. ಕಾಂಜನ್​, ಧನಂಜಯ ಆನೆಗಳು ಕಾದಾಟ ಆಗಲು ಇದೂ ಕಾರಣ. ಆನೆಯ ದಂತ, ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿಕೊಳ್ತಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ತಂದಿರುವ ಅನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡಬೇಕು. ಅಲ್ಲಿಯ ತನಕ ಯಾವುದೇ ಅನಾಹುತ ಆಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.

ಸಚಿವ ಈಶ್ವರ್​ ಖಂಡ್ರೆ ಖಡಕ್ ಎಚ್ಚರಿಕೆ

ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದನಾಡಿಗೆ ಬಂದು ಪ್ರಸ್ತುತ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಸಾಕಾನೆಗಳ ಬಳಿ ಫೋಟೋ ಶೂಟ್‌ ಹಾಗೂ ರೀಲ್ಸ್‌ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳೇ ಅವಕಾಶ ನೀಡಿದ್ದಾರೆ. ಇದರಿಂದ ಆನೆಗಳು ವಿಚರಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಂಜನ್‌ ಹಾಗೂ ಧನಂಜನ್‌ ಎನ್ನುವ ಆನೆಗಳ ನಡುವೆ ಕಾದಾಟ ಆಗಲು ಇದೂ ಒಂದು ಕಾರಣವಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪಿಸಿಸಿಎಫ್‌ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ,

ಇದನ್ನೂ ಓದಿ: ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು, ವಿಡಿಯೋ ವೈರಲ್​

ಕೆಲವರು ಆನೆಗಳ ದಂತಗಳನ್ನು ಹಿಡಿದುಕೊಂಡು, ಮತ್ತ ಕೆಲವರು ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿರುವ ಚಿತ್ರಗಳೂ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ಆನೆಗಳನ್ನು ತಂದ ನಂತರ ಸುರಕ್ಷಿತವಾಗಿ ಅವುಗಳನ್ನು ಶಿಬಿರಕ್ಕೆ ಬಿಡುವವರೆಗೂ ಯಾವುದೇ ಅನಾಹುತ ಆಗದಂತೆ ಎಚ್ಚರ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರೀಲ್ಸ್‌ಮಾಡಲು ಅವಕಾಶ ನೀಡಿ ನಿರ್ಲಕ್ಷ್ಯ ತೋರಿರುವ ಅಧಿಕಾರಿ ಹಾಗು ಸಿಬ್ಬಂದಿಗೆ ಸ್ಪಷ್ಟನೆ ನೀಡಬೇಕು. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ