AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಇನ್ಫೋಸಿಸ್​ ಆವರಣದಲ್ಲಿ ಕೊನೆಗೂ ಸಿಗದ ಚಿರತೆ: 16 ದಿನಗಳ ಕಾರ್ಯಾಚರಣೆ ಸ್ಥಗಿತ, ಇನ್ನು ಡ್ರೋನ್ ಕಣ್ಣು

ಕೊನೆಗೂ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಆವರಣದಲ್ಲಿ ಕಂಡುಬಂದಿದ್ದ ಚಿರತೆ ಸಿಗಲೇ ಇಲ್ಲ. ಅರಣ್ಯ ಇಲಾಖೆ ಸತತ 16 ದಿನಗಳ ಕಾಲ ಹಗಲು ರಾತ್ರಿ ಹುಡುಕಾಟ ನಡೆಸಿದರೂ ಚಿರತೆ ಮಾತ್ರ ಸಿಗಲೇ ಇಲ್ಲ. ಇದೀಗ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಕೈಬಿಟ್ಟಿದೆ. ಆದರೆ, ಡ್ರೋನ್ ಕಣ್ಗಾವಲು ಇಡಲಾಗುತ್ತದೆ.

ಮೈಸೂರು ಇನ್ಫೋಸಿಸ್​ ಆವರಣದಲ್ಲಿ ಕೊನೆಗೂ ಸಿಗದ ಚಿರತೆ: 16 ದಿನಗಳ ಕಾರ್ಯಾಚರಣೆ ಸ್ಥಗಿತ, ಇನ್ನು ಡ್ರೋನ್ ಕಣ್ಣು
ಮೈಸೂರು ಇನ್ಫೋಸಿಸ್​ ಆವರಣದಲ್ಲಿ ಕೊನೆಗೂ ಸಿಗದ ಚಿರತೆ
ರಾಮ್​, ಮೈಸೂರು
| Updated By: Ganapathi Sharma|

Updated on: Jan 16, 2025 | 7:25 AM

Share

ಮೈಸೂರು, ಜನವರಿ 16: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್​ನ ಆವರಣದಲ್ಲಿ ಡಿಸೆಂಬರ್ 31 ರಂದು ಚಿರತೆ ಕಾಣಿಸಿಕೊಂಡು ಸಂಸ್ಥೆಯ ಎಲ್ಲ ಸಿಬ್ಬಂದಿಯಲ್ಲಿ ಆತಂಕ ಹುಟ್ಟಿಸಿತ್ತು. ಚಿರತೆಯ ಓಡಾಟವನ್ನು ಸಿಸಿಟಿವಿಯಲ್ಲಿ ಕಂಡ ಸಿಬ್ಬಂದಿ ಹೌಹಾರಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಹೋದಡೆಯೆಲ್ಲಾ ಹುಡುಕಾಟ ನಡೆಸಿದ್ದರು. ಆದರೆ, 16 ದಿನಗಳಿಂದ ಹುಡುಕಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ.

ಮೈಸೂರಿನಲ್ಲಿ ಇನ್ಫೋಸಿಸ್ ಕ್ಯಾಂಪಸ್ ಆವರಣ ಸುಮಾರು 300 ಎಕರೆಯಷ್ಟಿದೆ. ಇನ್ಫೋಸಿಸ್​ನಲ್ಲಿ ಕೇವಲ ಕಟ್ಟಡಗಳು ಮಾತ್ರವಲ್ಲ ಖಾಲಿ ಪ್ರದೇಶ, ನೀರಿನ ಹೊಂಡಗಳು ಸಹ ಇವೆ. ಹೀಗಾಗಿ, ಇಲ್ಲಿ ಚಿರತೆ ಹುಡುಕುವುದು ಅಷ್ಟು ಸುಲಭವಾಗಿರಲಿಲ್ಲ. ಅದಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬರೋಬ್ಬರಿ 70 ಜನರ ತಂಡ ರಚಿಸಿದ್ದರು. ಇನ್ಫೋಸಿಸ್​ನ ಪ್ರತಿ ಮೂಲೆ ಮೂಲೆಯಲ್ಲೂ ಚಿರತೆಗಾಗಿ ಹುಡುಕಾಟ ನಡೆಸಿತ್ತು. ಟ್ರಾಪ್ ಕ್ಯಾಮೆರಾ, ಡ್ರೋನ್ ಕ್ಯಾಮೆರಾ ಇನ್ಫೋಸಿಸ್ಆವರಣದ ಸಿಸಿ ಕ್ಯಾಮರಾ ಸೇರಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಚಿರತೆ ಸೆರೆಗೆ ತಂಡ ಮುಂದಾಗಿತ್ತು. ಚಿರತೆಯ ಹೆಜ್ಜೆ ಗುರುತುಗಳು ಸಹ ಅರಣ್ಯ ಇಲಾಖೆಯವರಿಗೆ ಸಿಕ್ಕಿಲ್ಲ. ಹೀಗಾಗಿ, ಚಿರತೆ ಪತ್ತೆ ಕಾರ್ಯಚರಣೆ ಸ್ಥಗಿತಗೊಳಿಸಿದ್ದಾರೆ ಎಂದು ಡಿಸಿಎಫ್ ಡಾ. ಬಸವರಾಜ್ ತಿಳಿಸಿದ್ದಾರೆ.

ಸದ್ಯ ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಕೈಬಿಡಲಾಗಿದ್ದು, ರಾತ್ರಿ ನಿಗಾ ಇರಲಿದೆ. ಜತೆಗೆ ಕ್ಯಾಮರಾ ಮೂಲಕ ಕಾರ್ಯಾಚರಣೆ ಹಾಗೂ‌ ಸಿಬ್ಬಂದಿ ಗಸ್ತು ಮುಂದುವರಿಯಲಿದೆ. ಸದ್ಯ ಇನ್ಫೋಸಿಸ್ ಸಿಬ್ಬಂದಿ ವರ್ಕ್ ಫ್ರಮ್ ಹೋಮ್‌ನಲ್ಲಿದ್ದು, ಚಿರತೆ ಸಿಗದಿದ್ದರೆ ಮುಂದೇನು ಎಂಬ ಆತಂಕ ಕಾಡುತ್ತಿದೆ.

ವರ್ಕ್ ಫ್ರಂ ಹೋಮ್ ಮುಂದುವರಿಕೆ

ಚಿರತೆ ಕಾಟದ ಆತಂಕದ ಕಾರಣ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್‌ ಆಯ್ಕೆ ಮುಂದುವರಿಸಲಾಗಿದೆ. ಇದು ಎಷ್ಟು ದಿನಗಳ ವರೆಗೆ ಮುಂದುವರಿಯಲಿದೆ ಎಂಬುದನ್ನು ಕಾದುನೋಡಬೇಕಿದೆ. ಸದ್ಯಕ್ಕೆ ಅರಣ್ಯ ಇಲಾಖೆ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರೂ ಕಣ್ಗಾವಲು ಮುಂದುವರಿದಿದೆ. ಹೀಗಾಗಿ ಗಸ್ತು ಸಿಬ್ಬಂದಿಗೆ ಅಥವಾ ಸಿಸಿಟಿವಿ, ಡ್ರೋನ್ ಕ್ಯಾಮರಾದಲ್ಲಿ ಒಂದು ವೇಳೆ ಚಿರತೆ ಪತ್ತೆಯಾದರೆ ಮತ್ತೆ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಸದ್ಯದ ಮಟ್ಟಿಗೆ ವರ್ಕ್ ಫ್ರಂ ಹೋಮ್ ಮುಂದುವರಿಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪತ್ತೆಯಾಗದ ಚಿರತೆ; 12 ತಂಡಗಳಿಂದ ಕಾರ್ಯಾಚರಣೆ

ಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಕಾರ್ಯ ಪಡೆ, ಆನೆ ಕಾರ್ಯ ಪಡೆ, 70 ಇನ್ಫೋಸಿಸ್ ಸಿಬ್ಬಂದಿ ಸೇರಿ 12 ಜಂಟಿ ತಂಡಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಚಿರತೆ ಮಾತ್ರ ಪತ್ತೆಯಾಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ