AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara: ಪಂಜಿನ ಕವಾಯತು ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್

Mysuru Dasara: ಪಂಜಿನ ಕವಾಯತು ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್

ರಾಮ್​, ಮೈಸೂರು
| Edited By: |

Updated on: Oct 02, 2025 | 9:55 PM

Share

ಮೈಸೂರು ದಸರಾ ಹಿನ್ನಲೆ ನಗರದ ಬನ್ನಿಮಂಟಪದ ಮೈದಾನದಲ್ಲಿ ನಡೆದ ಪಂಜಿನ ಕವಾಯತನ್ನ ಕರ್ನಾಟಕ ಗವರ್ನರ್​ ವೀಕ್ಷಿಸಿದ್ದಾರೆ. ಕಾರ್ಯಕ್ರಮ ನೋಡಲು ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಗಿದೆ. ಆಕರ್ಷಕ ಪಂಜಿನ ಕವಾಯತು ನೆರೆದಿದ್ದ ಸಹಸ್ರಾರು ಜನರ ಮನಸೂರೆಗೊಂಡಿದೆ.

ಮೈಸೂರು, ಅಕ್ಟೋಬರ್​ 02: ವಿಶ್ವ ವಿಖ್ಯಾತ ಮೈಸೂರು ದಸರಾ (Dasara) ಹಿನ್ನಲೆ ನಗರದ ಬನ್ನಿಮಂಟಪದ ಮೈದಾನದಲ್ಲಿ ನಡೆದ ಪಂಜಿನ ಕವಾಯತನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವೀಕ್ಷಿಸಿದ್ದಾರೆ. ಕಾರ್ಯಕ್ರಮ ನೋಡಲು ಬಂದ ಗವರ್ನರ್​ ಗೆ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಗಿದೆ. ಗೌರವ ವಂದನೆ ಸ್ವೀಕರಿಸಿದ ರಾಜ್ಯಪಾಲರು ಲೇಸರ್ ಶೋ, ಡ್ರೋನ್ ಶೋ, ಟಾರ್ಚ್​ ಲೈಟ್​ ಪರೇಡ್ ವೀಕ್ಷಿಸಿದ್ದಾರೆ. ಇನ್ನು ಆಕರ್ಷಕ ಪಂಜಿನ ಕವಾಯತು ಕಂಡು ನೆರೆದಿದ್ದ ಸಹಸ್ರಾರು ಜನರು ಖುಷಿ ಪಟ್ಟರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

 

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More