AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ಸುದ್ದಿಗಳು: ರಸ್ತೆಗಳಲ್ಲಿ ಪ್ರತಿಮೆ ಸ್ಥಾಪನೆಗೆ ಹೈಕೋರ್ಟ್ ನಿರ್ಬಂಧ

ಇಂದು ಕರ್ನಾಟಕ ಹೈಕೋರ್ಟ್ ಕೆಲವು ಮಹತ್ವದ ಅರ್ಜಿಗಳ ವಿಚಾರಣೆ ನಡೆಸಿತು. ಹಾಗಾದರು ಯಾವ ಅರ್ಜಿಗಳವು? ಕೋರ್ಟ್​ ಆದೇಶಗಳೇನು ?ಎಂಬ ವಿವರ ಇಲ್ಲಿದೆ.

ಹೈಕೋರ್ಟ್​ ಸುದ್ದಿಗಳು: ರಸ್ತೆಗಳಲ್ಲಿ ಪ್ರತಿಮೆ ಸ್ಥಾಪನೆಗೆ ಹೈಕೋರ್ಟ್ ನಿರ್ಬಂಧ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Sep 07, 2021 | 3:35 PM

Share

ಬೆಂಗಳೂರು: ರಸ್ತೆಗಳಲ್ಲಿ ಪ್ರತಿಮೆ ಸ್ಥಾಪನೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಆಧರಿಸಿ ಹೈಕೋರ್ಟ್ ನಿರ್ದೇಶನ ನೀಡಿದೆ. ಮೈಸೂರಿನ ಗನ್ ಹೌಸ್ ಸರ್ಕಲ್‌ನಲ್ಲಿ ಪ್ರತಿಮೆ ಸ್ಥಾಪಿಸುವ ಮೈಸೂರು ಪಾಲಿಕೆಯ ನಿರ್ಣಯವನ್ನು ರದ್ದುಗೊಳಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಮೈಸೂರಿನ ಗನ್ ಹೌಸ್ ಸರ್ಕಲ್‌ನಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಪ್ರತಿಮೆ ಸ್ಥಾಪನೆಗೆ ಸರ್ಕಾರ ಮತ್ತು ಮೈಸೂರು ಪಾಲಿಕೆ ಅನುಮೋದನೆ ನೀಡಿದ್ದವು. ಪ್ರತಿಮೆ ಸ್ಥಾಪನೆಯನ್ನು‌ ಪ್ರಶ್ನಿಸಿ ಕ್ಷತ್ರಿಯ ಮಹಾಸಭಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಗನ್ ಹೌಸ್ ಸರ್ಕಲ್ ರಸ್ತೆ ಮಧ್ಯದಲ್ಲಿದೆ. ಸುಪ್ರೀಂ ಕೋರ್ಟ್ ಪ್ರತಿಮೆಗಳ ಸ್ಥಾಪನೆಗೆ ನಿರ್ಬಂಧ ಹೇರಿದೆ. ಜತೆಗೆ ಈಕುರಿತು ಯಾವುದೇ ಅನುಮತಿ ನೀಡದಂತೆ ಸರ್ಕಾರಗಳಿಗೆ ಸೂಚಿಸಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಹೈಕೋರ್ಟ್ ಸೂಚನೆ ನೀಡಿದೆ.

ಬಿಬಿಎಂಪಿ ಮಳಿಗೆ ಹಂಚಿಕೆ- ಹೈಕೋರ್ಟ್ ಅಸಮಾಧಾನ ಟೆಂಡರ್ ಕರೆಯದೆ ಬಿಬಿಎಂಪಿ ಮಳಿಗೆ ಹಂಚಿದ ಆರೋಪ‌ದಡಿ ಬಿಬಿಎಂಪಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ಏಕೆ ದಾಖಲಿಸಬಾರದು ಎಂದು ಪ್ರಶ್ನಿಸಿದ ಹೈಕೋರ್ಟ್, ಕಾರಣ ಕೇಳಿ ಬಿಬಿಎಂಪಿ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ಜಯನಗರ ಶಾಪಿಂಗ್ ಕಾಂಪ್ಲೆಕ್ಸ್​ನ ಮಳಿಗೆಯೊಂದನ್ನು ಟೆಂಡರ್ ಮೂಲಕವೇ ಹಂಚಲಾಗುವುದು ಎಂದು ಈ ಹಿಂದೆ ಬಿಬಿಎಂಪಿ ಪ್ರಮಾಣಪತ್ರ ಸಲ್ಲಿಸಿತ್ತು. ಆದರೆ ತದನಂತರ ಹೈಕೋರ್ಟ್‌ಗೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದಂತೆ ಬಿಬಿಎಂಪಿ ನಡೆದುಕೊಂಡಿರಲಿಲ್ಲ. ಟೆಂಡರ್ ಕರೆಯದೇ ಮಳಿಗೆಗಳ ಹಂಚಿಕೆ ಮಾಡಿತ್ತು. ಬಿಬಿಎಂಪಿಯ ಈ ನಡೆಯ ಕುರಿತು ಎಂ.ಶರಣು ಎಂಬುವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಬಿಬಿಎಂಪಿಯ ಈ ನಡೆಗೆ ಅಸಮಾಧಾನ ವ್ಯಕ್ತಪಡಿಸಿದೆ.

ವಿಳಂಬ ಮಾಡದೇ ತನಿಖೆ ನಡೆಸಿ ಸಬ್ ರಿಜಿಸ್ಟ್ರಾರ್ ಕಚೇರಿಗಳ ಫ್ರಾಂಕಿಂಗ್ ನಕಲು ಆರೋಪದ ಸಿಬಿಐ ತನಿಖೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಪ್ರಕರಣದ ಬಗ್ಗೆ ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ತನಿಖೆಯ ಹೊಣೆಯನ್ನ ಹಿರಿಯ ಅಧಿಕಾರಿಗೆ ವಹಿಸಲಾಗಿದೆ. ಹೀಗಾಗಿ ತನಿಖೆಗೆ 3 ತಿಂಗಳ‌ ಕಾಲಾವಕಾಶ ರಾಜ್ಯ ಸರ್ಕಾರ ಕೋರಿದೆ. ಇದಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್ ವಿಳಂಬ ಮಾಡದಂತೆ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ ನೀಡಿದೆ.

ಇದನ್ನೂ ಓದಿ: 

ನಿಫಾ ಭೀತಿ: ಕೇರಳದಿಂದ ಬರುವವರಿಗೆ ಕಡ್ಡಾಯ ತಪಾಸಣೆ; ಇನ್ನೊಂದೆಡೆ, ಹಣ್ಣುಗಳಿಂದ ವೈರಸ್​ ಹಬ್ಬುವ ಭಯ

ಮೈಸೂರು: ರಸ್ತೆಗಿಳಿದ ಕಾಡುಪ್ರಾಣಿಗಳು; ಕಾಡೆಮ್ಮೆ, ಜಿಂಕೆ, ಕರಡಿಗಳನ್ನು ಕಂಡು ಪುಳಕಿತರಾದ ಜನ

(Karnataka High Court rejects decision of establish statues in public roads)

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ