AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ, ಭವಾನಿ ರೇವಣ್ಣ ಸಂಬಂಧಿ ಜೈಲು ಪಾಲು

ಒಂದು ಕಡೆ ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದರೆ, ಇನ್ನೊಂದೆಡೆ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ಸಂಚಲನ ಮೂಡಿಸಿದೆ. ಇದೀಗ ಈ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಸಂಬಂಧಿಯಾದ ಸತೀಶ್ ಬಾಬು ಎಂಬುವವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ, ಭವಾನಿ ರೇವಣ್ಣ ಸಂಬಂಧಿ ಜೈಲು ಪಾಲು
ಭವಾನಿ ರೇವಣ್ಣ ಸಂಬಂಧಿ ಸತೀಶ್​ ಬಾಬು ಜೈಲು ಪಾಲು
ದಿಲೀಪ್​, ಚೌಡಹಳ್ಳಿ
| Edited By: |

Updated on:May 03, 2024 | 3:51 PM

Share

ಮೈಸೂರು, ಮೇ.03: ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿದೆ. ಅದರಂತೆ ಇದೀಗ ರೇವಣ್ಣ ಪತ್ನಿ ಭವಾನಿ ರೇವಣ್ಣ ಸಂಬಂಧಿಯಾದ ಸತೀಶ್ ಬಾಬುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೌದು, ಈ ಘಟನೆಗೆ ಸಂಬಂಧಪಟ್ಟಂತೆ ವಿಡಿಯೋದಲ್ಲಿನ ಸಂತ್ರಸ್ತ ಮಹಿಳೆಯಾದ ನನ್ನ ತಾಯಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ರೇವಣ್ಣ, ಸತೀಶ್​ ಬಾಬು ವಿರುದ್ದ ಸಂತ್ರಸ್ತೆ ಮಗ ದೂರು ನೀಡಿದ್ದರು. ಈ ಕುರಿತು ಮೈಸೂರು ಜಿಲ್ಲೆ K.R.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿಸಲಾಗಿದೆ.

ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್

ಪ್ರಜ್ವಲ್ ರೇವಣ್ಣ ವಿರುದ್ದ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದ ಸಂತ್ರಸ್ತೆ, ಅಪರಾಧ ತನಿಖಾ ಇಲಾಖೆಗೆ (CID) ದೂರು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್​ ದಾಖಲಾಗಿದೆ.ಇನ್ನು ಘಟನೆ ಕುರಿತು ಸಂತ್ರಸ್ತೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಜನಪ್ರತಿನಿಧಿಯಾಗಿರುವ ಮಹಿಳೆ, ಶಾಸಕರು ಹಾಗೂ ಸಂಸದರ ಬಳಿ ಕ್ಷೇತ್ರದ ಅಭಿವೃದ್ಧಿ ಕೆಲಸದ ಬಗ್ಗೆ ಚರ್ಚಿಸಲು ಹೋಗಿದ್ದಾಗ ಆರೋಪಿ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಅರೆಸ್ಟ್ ಮಾಡಿಕೊಂಡು ಬರುತ್ತೇವೆ: ಸಿದ್ದರಾಮಯ್ಯ, ಸಿಎಂ

ಹಾಸನ ಮೂಲದ ಮಹಿಳೆ ಪ್ರಜ್ವಲ್​ ರೇವಣ್ಣ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಎಸ್​ಐಟಿಗೆ ಹೇಳಿಕೆ ನೀಡಿದ್ದರು. ಎಸ್​ಐಟಿ ಹೇಳಿಕೆ ಆಧರಿಸಿ ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್​​ ದಾಖಲಿಸಿಕೊಂಡಿದ್ದು,ಇದರ ಬೆನ್ನಲೇ ಇದೀಗ ಸಂತ್ರಸ್ತೆ ಪತಿ ಸಿಐಡಿಗೆ ದೂರು ನೀಡಿರುವುದು ಪ್ರಜ್ವಲ್​ ರೇವಣ್ಣಗೆ ಸಂಕಷ್ಟ ಜಾಸ್ತಿಯಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್​ಐಟಿ ನೋಟಿಸ್​ ನೀಡಿದೆ. ಆದರೆ ಎಸ್​ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್​ ರೇವಣ್ಣಗೆ ಮತ್ತಷ್ಟು ತೆಲೆನೋವಾಗಿದೆ. ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರವೇ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Fri, 3 May 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?