AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ, ಭವಾನಿ ರೇವಣ್ಣ ಸಂಬಂಧಿ ಜೈಲು ಪಾಲು

ಒಂದು ಕಡೆ ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದರೆ, ಇನ್ನೊಂದೆಡೆ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ಸಂಚಲನ ಮೂಡಿಸಿದೆ. ಇದೀಗ ಈ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಸಂಬಂಧಿಯಾದ ಸತೀಶ್ ಬಾಬು ಎಂಬುವವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ, ಭವಾನಿ ರೇವಣ್ಣ ಸಂಬಂಧಿ ಜೈಲು ಪಾಲು
ಭವಾನಿ ರೇವಣ್ಣ ಸಂಬಂಧಿ ಸತೀಶ್​ ಬಾಬು ಜೈಲು ಪಾಲು
ದಿಲೀಪ್​, ಚೌಡಹಳ್ಳಿ
| Edited By: |

Updated on:May 03, 2024 | 3:51 PM

Share

ಮೈಸೂರು, ಮೇ.03: ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿದೆ. ಅದರಂತೆ ಇದೀಗ ರೇವಣ್ಣ ಪತ್ನಿ ಭವಾನಿ ರೇವಣ್ಣ ಸಂಬಂಧಿಯಾದ ಸತೀಶ್ ಬಾಬುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೌದು, ಈ ಘಟನೆಗೆ ಸಂಬಂಧಪಟ್ಟಂತೆ ವಿಡಿಯೋದಲ್ಲಿನ ಸಂತ್ರಸ್ತ ಮಹಿಳೆಯಾದ ನನ್ನ ತಾಯಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ರೇವಣ್ಣ, ಸತೀಶ್​ ಬಾಬು ವಿರುದ್ದ ಸಂತ್ರಸ್ತೆ ಮಗ ದೂರು ನೀಡಿದ್ದರು. ಈ ಕುರಿತು ಮೈಸೂರು ಜಿಲ್ಲೆ K.R.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿಸಲಾಗಿದೆ.

ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್

ಪ್ರಜ್ವಲ್ ರೇವಣ್ಣ ವಿರುದ್ದ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದ ಸಂತ್ರಸ್ತೆ, ಅಪರಾಧ ತನಿಖಾ ಇಲಾಖೆಗೆ (CID) ದೂರು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್​ ದಾಖಲಾಗಿದೆ.ಇನ್ನು ಘಟನೆ ಕುರಿತು ಸಂತ್ರಸ್ತೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಜನಪ್ರತಿನಿಧಿಯಾಗಿರುವ ಮಹಿಳೆ, ಶಾಸಕರು ಹಾಗೂ ಸಂಸದರ ಬಳಿ ಕ್ಷೇತ್ರದ ಅಭಿವೃದ್ಧಿ ಕೆಲಸದ ಬಗ್ಗೆ ಚರ್ಚಿಸಲು ಹೋಗಿದ್ದಾಗ ಆರೋಪಿ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಅರೆಸ್ಟ್ ಮಾಡಿಕೊಂಡು ಬರುತ್ತೇವೆ: ಸಿದ್ದರಾಮಯ್ಯ, ಸಿಎಂ

ಹಾಸನ ಮೂಲದ ಮಹಿಳೆ ಪ್ರಜ್ವಲ್​ ರೇವಣ್ಣ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಎಸ್​ಐಟಿಗೆ ಹೇಳಿಕೆ ನೀಡಿದ್ದರು. ಎಸ್​ಐಟಿ ಹೇಳಿಕೆ ಆಧರಿಸಿ ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್​​ ದಾಖಲಿಸಿಕೊಂಡಿದ್ದು,ಇದರ ಬೆನ್ನಲೇ ಇದೀಗ ಸಂತ್ರಸ್ತೆ ಪತಿ ಸಿಐಡಿಗೆ ದೂರು ನೀಡಿರುವುದು ಪ್ರಜ್ವಲ್​ ರೇವಣ್ಣಗೆ ಸಂಕಷ್ಟ ಜಾಸ್ತಿಯಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್​ಐಟಿ ನೋಟಿಸ್​ ನೀಡಿದೆ. ಆದರೆ ಎಸ್​ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್​ ರೇವಣ್ಣಗೆ ಮತ್ತಷ್ಟು ತೆಲೆನೋವಾಗಿದೆ. ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರವೇ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Fri, 3 May 24

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ