AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ, ಭವಾನಿ ರೇವಣ್ಣ ಸಂಬಂಧಿ ಜೈಲು ಪಾಲು

ಒಂದು ಕಡೆ ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದರೆ, ಇನ್ನೊಂದೆಡೆ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ಸಂಚಲನ ಮೂಡಿಸಿದೆ. ಇದೀಗ ಈ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಸಂಬಂಧಿಯಾದ ಸತೀಶ್ ಬಾಬು ಎಂಬುವವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ, ಭವಾನಿ ರೇವಣ್ಣ ಸಂಬಂಧಿ ಜೈಲು ಪಾಲು
ಭವಾನಿ ರೇವಣ್ಣ ಸಂಬಂಧಿ ಸತೀಶ್​ ಬಾಬು ಜೈಲು ಪಾಲು
ದಿಲೀಪ್​, ಚೌಡಹಳ್ಳಿ
| Edited By: |

Updated on:May 03, 2024 | 3:51 PM

Share

ಮೈಸೂರು, ಮೇ.03: ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿದೆ. ಅದರಂತೆ ಇದೀಗ ರೇವಣ್ಣ ಪತ್ನಿ ಭವಾನಿ ರೇವಣ್ಣ ಸಂಬಂಧಿಯಾದ ಸತೀಶ್ ಬಾಬುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೌದು, ಈ ಘಟನೆಗೆ ಸಂಬಂಧಪಟ್ಟಂತೆ ವಿಡಿಯೋದಲ್ಲಿನ ಸಂತ್ರಸ್ತ ಮಹಿಳೆಯಾದ ನನ್ನ ತಾಯಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ರೇವಣ್ಣ, ಸತೀಶ್​ ಬಾಬು ವಿರುದ್ದ ಸಂತ್ರಸ್ತೆ ಮಗ ದೂರು ನೀಡಿದ್ದರು. ಈ ಕುರಿತು ಮೈಸೂರು ಜಿಲ್ಲೆ K.R.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿಸಲಾಗಿದೆ.

ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್

ಪ್ರಜ್ವಲ್ ರೇವಣ್ಣ ವಿರುದ್ದ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದ ಸಂತ್ರಸ್ತೆ, ಅಪರಾಧ ತನಿಖಾ ಇಲಾಖೆಗೆ (CID) ದೂರು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್​ ದಾಖಲಾಗಿದೆ.ಇನ್ನು ಘಟನೆ ಕುರಿತು ಸಂತ್ರಸ್ತೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಜನಪ್ರತಿನಿಧಿಯಾಗಿರುವ ಮಹಿಳೆ, ಶಾಸಕರು ಹಾಗೂ ಸಂಸದರ ಬಳಿ ಕ್ಷೇತ್ರದ ಅಭಿವೃದ್ಧಿ ಕೆಲಸದ ಬಗ್ಗೆ ಚರ್ಚಿಸಲು ಹೋಗಿದ್ದಾಗ ಆರೋಪಿ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಅರೆಸ್ಟ್ ಮಾಡಿಕೊಂಡು ಬರುತ್ತೇವೆ: ಸಿದ್ದರಾಮಯ್ಯ, ಸಿಎಂ

ಹಾಸನ ಮೂಲದ ಮಹಿಳೆ ಪ್ರಜ್ವಲ್​ ರೇವಣ್ಣ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಎಸ್​ಐಟಿಗೆ ಹೇಳಿಕೆ ನೀಡಿದ್ದರು. ಎಸ್​ಐಟಿ ಹೇಳಿಕೆ ಆಧರಿಸಿ ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್​​ ದಾಖಲಿಸಿಕೊಂಡಿದ್ದು,ಇದರ ಬೆನ್ನಲೇ ಇದೀಗ ಸಂತ್ರಸ್ತೆ ಪತಿ ಸಿಐಡಿಗೆ ದೂರು ನೀಡಿರುವುದು ಪ್ರಜ್ವಲ್​ ರೇವಣ್ಣಗೆ ಸಂಕಷ್ಟ ಜಾಸ್ತಿಯಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್​ಐಟಿ ನೋಟಿಸ್​ ನೀಡಿದೆ. ಆದರೆ ಎಸ್​ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್​ ರೇವಣ್ಣಗೆ ಮತ್ತಷ್ಟು ತೆಲೆನೋವಾಗಿದೆ. ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರವೇ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Fri, 3 May 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ