AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಮುಕ್ತ ವಿವಿ: ಅಧ್ಯಾಪಕರ ಸಂಘದ ಸಭೆಗೆ ಕುಲಪತಿಗಳಿಂದ ಅನುಮತಿ ನಿರಾಕರಣೆ; ಬಯಲಿನಲ್ಲೇ ನಡೆದ ಸಭೆ

ಮುಕ್ತ ವಿವಿಯಲ್ಲಿನ ಬೆಳವಣಿಗೆಗಳಿಂದ ಅಸಮಧಾನಗೊಂಡು, ಹಳಿ ತಪ್ಪಿರುವ ವಿವಿಯನ್ನು ಉಳಿಸಿಕೊಳ್ಳುವ ಸಲುವಾಗಿ ಸಂಘಕ್ಕೆ ಮರುಜೀವ ನೀಡಲಾಗಿದೆ ಎಂದು ಕೆಲ ಪ್ರಾಧ್ಯಾಪಕರು ತಿಳಿಸಿದ್ದಾರೆ. ಸದ್ಯ ಇದು ಪ್ರಾಧ್ಯಾಪಕರು ಹಾಗೂ ಮುಕ್ತ ವಿವಿ ಆಡಳಿತ ಮಂಡಳಿಯ ನಡುವಿನ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿವಿ: ಅಧ್ಯಾಪಕರ ಸಂಘದ ಸಭೆಗೆ ಕುಲಪತಿಗಳಿಂದ ಅನುಮತಿ ನಿರಾಕರಣೆ; ಬಯಲಿನಲ್ಲೇ ನಡೆದ ಸಭೆ
ಬಯಲಿನಲ್ಲೇ ನಡೆದ ಸಭೆ
TV9 Web
| Edited By: |

Updated on: Dec 12, 2021 | 7:30 AM

Share

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿಯ ಅಧ್ಯಾಪಕರ ಸಂಘದ ಸಭೆಗೆ ಕುಲಪತಿಗಳು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ, ಬಯಲಿನಲ್ಲೇ ಸಭೆ ನಡೆಸಿದ ಪ್ರಾಧ್ಯಾಪಕರು ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಅಧ್ಯಾಪಕರ ಸಂಘ(ರಿ)ದ ಸರ್ವ ಸದಸ್ಯರ ಸಭೆಯಲ್ಲಿ ಕಾರ್ಯಕಾರಿ ಸಮಿತಿಯನ್ನು ಹೊಸದಾಗಿ ಮುಂದಿನ ಅವಧಿಗೆ ಆಯ್ಕೆ ಮಾಡಲಾಗಿದೆ.

ಮುಕ್ತ ವಿವಿಯ ಕ್ಯಾಂಪಸ್ ಆವರಣದಲ್ಲಿನ ಕಾವೇರಿ ಭವನದಲ್ಲಿ ಸರ್ವ ಸಮಿತಿ ಸಭೆ ನಡೆಸಲು ವಿಶ್ವವಿದ್ಯಾನಿಲಯಕ್ಕೆ ಡಿಸೆಂಬರ್ 6 ರಂದೇ ಲಿಖಿತ ಮನವಿ ಸಲ್ಲಿಸಲಾಗಿತ್ತು, ಆದರೆ ಕುಲಪತಿ ಪ್ರೊ ವಿದ್ಯಾಶಂಕರ್ ಸಭೆಗೆ ಸ್ಥಳಾವಕಾಶ ನಿರಾಕರಿಸಿದ್ದಾರೆ. ಈ ಬಗ್ಗೆ ಮುಕ್ತ ವಿವಿ ಕುಲಸಚಿವರು ಡಿಸೆಂಬರ್ 9 ರಂದು ಪತ್ರ ಮುಖೇನ ಅಧ್ಯಾಪಕರ ಸಂಘಕ್ಕೆ ಈ ಬಗ್ಗೆ ಸ್ಪಷ್ಟಪಡಿಸಿತ್ತು. ಇದರಿಂದ ವಿಧಿಯಿಲ್ಲದೆ ಕಾವೇರಿ ಭವನದ ಹೊರಭಾಗ ರಸ್ತೆಯ ಪಕ್ಕ ಮರದ ಕೆಳಗೆ ಬಯಲಿನಲ್ಲೇ ಮುಕ್ತವಾಗಿ ಸರ್ವಸದಸ್ಯರ ಸಾಮಾನ್ಯ ಸಭೆ ನಡೆಸಲಾಗಿದೆ.

ಈ ಸಭೆಯಲ್ಲಿ ಸರ್ವಾನುಮತದಿಂದ ಸಂಘದ ಅಧ್ಯಕ್ಷರಾಗಿ ಡಾ. ಎನ್.ಜಿ.ರಾಜು, ಉಪಾಧ್ಯಕ್ಷರಾಗಿ ಡಾ.ಸಿ. ಮಹದೇವಮೂರ್ತಿ, ಪ್ರಧಾನ ಕಾರ್ಯದರ್ಶಿಯಾಗಿ ಡಾ. ಜಗದೀಶ್‌ ಬಾಬು ಹೆಚ್.ಕೆ., ಖಜಾಂಚಿಯಾಗಿ ಡಾ. ಎಸ್. ನಿರಂಜನ್ ರಾಜ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ. ಎನ್. ಕೃಷ್ಣಪ್ಪ, ಡಾ. ಎಂ.ಎಸ್. ಹೇಮಲತಾ, ಡಾ. ಜೆ.ಎಸ್. ಚಂದ್ರಶೇಖರ್, ಶ್ರೀ ಎಸ್.ವಿ. ನಿರಂಜನ್, ಪ್ರೊ. ಎ. ರಂಗಸ್ವಾಮಿ, ಡಾ. ಗೋಪಾಲಸ್ವಾಮಿ, ಡಾ. ಛಾಯ .ಆರ್ ರವರನ್ನು ಆಯ್ಕೆ ಮಾಡಲಾಗಿದೆ.

ಈಗ ಏಕೆ ಸಂಘ? ಕರ್ನಾಟಕ ರಾಜ್ಯ ಮುಕ್ತ ವಿವಿ ಅಧ್ಯಾಪಕರ ಸಂಘ ನೋಂದಾಣಿಗೊಂಡು ಹತ್ತಾರು ವರ್ಷಗಳೇ ಕಳೆದಿತ್ತು. ಆದರೆ ಕೆಲ ವರ್ಷಗಳಿಂದ ಅದು ನಿಷ್ಕ್ರಿಯವಾಗಿತ್ತು. ಇದೀಗ ಮುಕ್ತ ವಿವಿಯಲ್ಲಿನ ಬೆಳವಣಿಗೆಗಳಿಂದ ಅಸಮಧಾನಗೊಂಡು, ಹಳಿ ತಪ್ಪಿರುವ ವಿವಿಯನ್ನು ಉಳಿಸಿಕೊಳ್ಳುವ ಸಲುವಾಗಿ ಸಂಘಕ್ಕೆ ಮರುಜೀವ ನೀಡಲಾಗಿದೆ ಎಂದು ಕೆಲ ಪ್ರಾಧ್ಯಾಪಕರು ತಿಳಿಸಿದ್ದಾರೆ. ಸದ್ಯ ಇದು ಪ್ರಾಧ್ಯಾಪಕರು ಹಾಗೂ ಮುಕ್ತ ವಿವಿ ಆಡಳಿತ ಮಂಡಳಿಯ ನಡುವಿನ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ.

ವರದಿ: ರಾಮ್ ಟಿವಿ9 ಮೈಸೂರು

ಇದನ್ನೂ ಓದಿ: ಮೈಸೂರು ಪರಿಷತ್ ಚುನಾವಣೆ: ಆಕ್ಸಿಜನ್ ಜೊತೆಗೆ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ

ಇದನ್ನೂ ಓದಿ: ಮೈಸೂರು ಸಮೀಪದ ಕಂತೆ ಮಾದಪ್ಪ ಬೆಟ್ಟದಲ್ಲಿ ಮತ್ತೆ ಕಾಣಿಸಿಕೊಂಡವು ಕಾಡಾನೆಗಳು, ಆತಂಕದಲ್ಲಿ ಜನ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್