AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ; ಮತ್ತೋರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಕುರಿತು ನಿನ್ನೆ ಮಹತ್ವದ ಸುಳಿವು ಸಿಕ್ಕಿತ್ತು. ಅದರಂತೆ ನಿನ್ನೆ ಮಧ್ಯರಾತ್ರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಂದು ಆರೋಪಿಯನ್ನು ಪೊಲೀಸರು ಮೈಸೂರಿಗೆ ಕರೆತರಲಿದ್ದಾರೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ; ಮತ್ತೋರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ; ಮತ್ತೋರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು
TV9 Web
| Edited By: ಸಾಧು ಶ್ರೀನಾಥ್​|

Updated on:Aug 31, 2021 | 9:11 AM

Share

ಮೈಸೂರು: ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ಏರಿದೆ. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಕುರಿತು ನಿನ್ನೆ ಮಹತ್ವದ ಸುಳಿವು ಸಿಕ್ಕಿತ್ತು. ಅದರಂತೆ ನಿನ್ನೆ ಮಧ್ಯರಾತ್ರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಂದು ಆರೋಪಿಯನ್ನು ಪೊಲೀಸರು ಮೈಸೂರಿಗೆ ಕರೆತರಲಿದ್ದಾರೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ: ನಿನ್ನೆ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ನಿನ್ನೆ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ಮಾಡಲಾಗಿದೆ. ಈ ವೇಳೆ ಆರೋಪಿಗಳು ಗಂಧದ ಮರ ಹುಡುಕಿಕೊಂಡು ಹೋಗಿರುವುದು ತಿಳಿದುಬಂದಿದೆ.

ಚಾಮುಂಡಿಬೆಟ್ಟದ ತಪ್ಪಲಿನ ಪ್ರದೇಶಕ್ಕೆ ಗೂಡ್ಸ್ ಆಟೋದಲ್ಲಿ ತೆರಳಿದ್ದ ಆರೋಪಿಗಳು, ಗಂಧದ ಮರ ಹುಡುಕಾಡಿದ್ದಾರೆ. ಗಂಧದ ಮರ ಸಿಗದ ಹಿನ್ನೆಲೆ, ಅಲ್ಲಿಯೇ ಕುಳಿತು ಪಾರ್ಟಿ ಮಾಡಿದ್ದಾರೆ. ಈ ವೇಳೆ ಅಲ್ಲಿಗೆ ಬಂದಿದ್ದ ಯುವಕ, ಯುವತಿ ಇಬ್ಬರನ್ನೂ ಬೆದರಿಸಿ ದರೋಡೆ ಮಾಡಲು ಯತ್ನಿಸಿದ್ದು, ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಈ ಎಲ್ಲಾ ಮಾಹಿತಿಗಳನ್ನು ಆರೋಪಿಗಳು ಮಹಜರು ವೇಳೆ ತಿಳಿಸಿದ್ದಾರೆ. ಮಹಜರು ಸಮಯದಲ್ಲಿ ಎಸಿಪಿ ಎಂ. ಎನ್.ಶಶಿಧರ್, ಆಲನಹಳ್ಳಿ ಇನ್ಸ್​ಪೆಕ್ಟರ್​ ರವಿಶಂಕರ್‌ ಭಾಗಿಯಾಗಿದ್ದರು.

ಇಂದು ಬಂಧಿತ ಆರೋಪಿಗಳಿಗೆ ಮೂರನೇ ದಿನದ ವಿಚಾರಣೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೂಡ ಸಂತ್ರಸ್ತೆಯಿಂದ ಸಹಕಾರ ಸಿಗದ ಹಿನ್ನೆಲೆ ಆರೋಪಿಗಳ ಮಂಪರು ಪರೀಕ್ಷೆಗೆ ಚಿಂತನೆ ನಡೆಸಲಾಗಿದೆ. ಅಲ್ಲದೆ ಮುಂಬೈಗೆ ಹೋದ ನಂತರ ಸಂತ್ರಸ್ತೆ ಪೋಷಕರು ಕೂಡ ಸಂಪರ್ಕಕ್ಕೆ ಸಿಗುತ್ತಿಲ್ಲ. ಹೀಗಾಗಿ ಐಡೆಂಟಿಫಿಕೇಶನ್ ಪೆರೇಡ್ ಹಾಗೂ ಹೇಳಿಕೆ ಸಿಗುವುದು ಅನುಮಾನ. ಇದೇ ಕಾರಣಕ್ಕೆ ವೈಜ್ಞಾನಿಕ ಸಾಕ್ಷ್ಯ ಸಂಗ್ರಹಕ್ಕೆ ಮುಂದಾದ ಪೊಲೀಸರು, ಇಂದು ನ್ಯಾಯಾಲಯದಿಂದ ಈ ಬಗ್ಗೆ ಅನುಮತಿ ಪಡೆಯುವ ಸಾಧ್ಯತೆ ಇದೆ.

ಮೈಸೂರು: ಇನ್ನೂ ಸಿಗದ ಓರ್ವ ಆರೋಪಿ ಒಟ್ಟು 6 ಜನರಿಂದ ಕೃತ್ಯದ ಬಗ್ಗೆ ಮಾಹಿತಿ ಇದ್ದು, ಆರೋಪಿಗಳ ವಿಚಾರಣೆ ವೇಳೆ 7 ಜನರಿದ್ದ ಬಗ್ಗೆ ಮಾಹಿತಿ ದೊರೆತಿದೆ. ಸದ್ಯ ತಮಿಳುನಾಡಿನಲ್ಲಿ ಬೀಡು ಬಿಟ್ಟಿರುವ ಒಂದು ತಂಡ, ಆರೋಪಿಗಳು ನೀಡಿರುವ ಸುಳಿವು ಆಧಾರಿಸಿ ಕಾರ್ಯಾಚರಣೆ ನಡೆಸುತ್ತಿದೆ. ಇಂದು ಅಥವಾ ನಾಳೆ ಆರೋಪಿಗಳ ಬಂಧನ ಸಾಧ್ಯತೆ ಇದೆ. ತಪ್ಪಿಸಿಕೊಂಡಿರುವ ಆರೋಪಿ ಗಂಧದ ಮರ ಕಳ್ಳತನದಲ್ಲಿ ಭಾಗಿಯಾಗಿದ್ದ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ:

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಕದ್ದ ಮೊಬೈಲ್​ನಿಂದ ಸಿಕ್ಕಿಬಿದ್ದ ಆರೋಪಿಗಳು

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ

 

Published On - 8:34 am, Tue, 31 August 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ