Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ರಣ ಮಳೆಗೆ ಮೈಸೂರಿನಲ್ಲಿ ಇಬ್ಬರು ಬಲಿ, 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಮೈಸೂರಿನಲ್ಲಿ ಸುರಿದ ಮಳೆಗೆ ಭಾರೀ ಅನಾಹುತಗಳು ಸಂಭವಿಸಿವೆ. ಇಬ್ಬರು ಮಳೆಗೆ ಬಲಿಯಾಗಿದ್ದು ಬಿರುಗಾಳಿ ಸಹಿತ ಮಳೆಗೆ ಹಲವೆಡೆ ಹಾನಿಯಾಗಿದೆ.

Follow us
ಆಯೇಷಾ ಬಾನು
|

Updated on:May 22, 2023 | 7:57 AM

ಮೈಸೂರು: ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗಿದ್ದು ಭಾರೀ ಅನಾಹುತಗಳು ಸಂಭವಿಸಿವೆ(Karnataka Rain). ಮೈಸೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ಹಲವೆಡೆ ಹಾನಿಯಾಗಿದೆ(Mysuru Rain). ಹಾಗೂ ರಸ್ತೆಯಲ್ಲಿ ಕಡಿದು ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಯುವಕ ಮೃತಪಟ್ಟಿದ್ದಾನೆ(Rain Death). ಮತ್ತೊಂದೆಡೆ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾನೆ. ಹೀಗೆ ಮೈಸೂರಿನಲ್ಲಿ ಮಳೆಯಿಂದ ಭಾರೀ ಅನಾಹುತಗಳು ಸಂಭವಿಸಿವೆ.

ಮಳೆಗೆ ಇಬ್ಬರು ಬಲಿ

ಪಿರಿಯಾಪಟ್ಟಣ ತಾಲೂಕಿನ ಬಾರಸೆ ಗ್ರಾಮದಲ್ಲಿ ರಸ್ತೆಯಲ್ಲಿ ಕಡಿದು ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಸ್ವಾಮಿ(18) ಎಂಬ ಯುವಕ ಸಾವನ್ನಪ್ಪಿದ್ದು ಹರೀಶ್ ಹಾಗೂ ಸಂಜಯ್‌ ಎಂಬ ಇಬ್ಬರಿಗೆ ಗಾಯಗಳಾಗಿವೆ. ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮತ್ತೊಂದೆಡೆ ಹುಣಸೂರು ತಾಲೂಕಿನ ಮಂಟಿಕೊಪ್ಪಲು ಗ್ರಾಮದಲ್ಲಿ ಸಿಡಿಲು ಬಡಿದು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಹರೀಶ್ (42) ಮೃತಪಟ್ಟಿದ್ದಾರೆ. ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗಿದ್ದು ಜಮೀನಿನಲ್ಲಿದ್ದ ಗುಡಿಸಲಿನ ಬಳಿ ರೈತ ಹರೀಶ್ ಆಶ್ರಯ ಪಡೆದಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೆಲವೇ ಗಂಟೆ ಸುರಿದ ಮಳೆಗೆ ಬೆಂಗಳೂರು ತತ್ತರ; ಎಲ್ಲೆಲ್ಲಿ ಎಷ್ಟು ಪ್ರಮಾಣ ಮಳೆ ಸುರಿದಿದೆ? ಇಲ್ಲಿದೆ ವಿವರ

ಮಳೆಗೆ 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಹುಣಸೂರು ತಾಲೂಕಿನಲ್ಲಿ ಗಾಳಿ ಮಳೆಗೆ 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಸಂಭವಿಸಿದೆ. ಗಾಳಿಗೆ ಮನೆಯ ಮೇಲ್ಚಾವಣಿಗೆ ಹಾಕಿದ್ದ ಶೀಟ್​​ಗಳು ಹಾರಿ ಹೋಗಿವೆ. ಗಾಳಿ ಮಳೆಗೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಮರಗಳು ಧರೆಗುರುಳಿದ ಪರಿಣಾಮ ವಿದ್ಯುತ್, ರಸ್ತೆ​ ಸಂಪರ್ಕ ಬಂದ್​ ಆಗಿದೆ. ಹನಗೋಡು ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹನಗೋಡು ಮುಖ್ಯ ರಸ್ತೆಯಲ್ಲಿ ಮರಗಳು ಬಿದ್ದು ರಸ್ತೆ ಸಂಚಾರ ಬಂದ್​ ಆಗಿದೆ. ಹೊಸಕೋಟೆ ಗೇಟ್ ಬಳಿ ಬೃಹತ್ ಮರ ಉರುಳಿ ಸಂಚಾರ ಬಂದ್ ಆಗಿದೆ. ಹನಗೋಡು-ಕಿರಂಗೂರು ಹರಳಹಳ್ಳಿ ರಸ್ತೆ ಜಲಾವೃತಗೊಂಡಿದ್ದು ಸಂಚಾರ ಸ್ಥಗಿತಗೊಂಡಿದೆ. ಕಿರಂಗೂರಿನಲ್ಲಿ ಮಳೆಯಿಂದಾಗಿ 4 ಎಕರೆಯಲ್ಲಿ ಬೆಳೆದಿದ್ದ ಜೋಳ ನಾಶವಾಗಿದೆ. ಹಿಂಡಗುಡ್ಲುವಿನಲ್ಲಿ ಮನೆಗೆ ನೀರು ನುಗ್ಗಿ ದವಸ, ಧಾನ್ಯ, ವಸ್ತುಗಳು ನಾಶವಾಗಿವೆ. ಚನ್ನಸೋಗೆ ಗ್ರಾಮದಲ್ಲಿ ಮೇಲ್ಚಾವಣಿಗಳು ಹಾರಿಹೋಗಿ ಮನೆಗಳಿಗೆ ಹಾನಿಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:43 am, Mon, 22 May 23

ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ