AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ

ಕರ್ನಾಟಕದಾದ್ಯಂತ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದು, ಒಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ಈ ದುರ್ಘಟನೆಗಳು ಸಂಭವಿಸಿವೆ. ಘಟನಾ ಸ್ಥಳಗಳಿಗೆ ಆ ವ್ಯಾಪ್ತಿಯ ಠಾಣೆಗಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ
ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada
ಪ್ರಸನ್ನ ಹೆಗಡೆ
|

Updated on: Feb 20, 2026 | 9:59 AM

Share

ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದಾರೆ.

ಭೀಕರ ಅಪಘಾತ: ಬೈಕ್​​ ಸವಾರರು ಸಾವು

ಮೈಸೂರು ಜಿಲ್ಲೆ ಹುಣಸೂರಿನ ತಾಲೂಕಿನ ಅರಸು ಕಲ್ಲಹಳ್ಳಿ ಗ್ರಾಮದಲ್ಲಿ ಲಾರಿ-ಬೈಕ್​​ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ಸವಾರರು ಬಲಿಯಾಗಿದ್ದಾರೆ. ಅಪಘಾತದ ರಭಸಕ್ಕೆ ಬೈಕ್​​ ಹೊತ್ತಿ ಉರಿದ್ದಿದ್ದು, ಸುರೇಶ್​(63), ಮಾದೇವ್​(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:  ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಅಪಘಾತ; ಬೈಕ್​​ ಸವಾರ ಸಾವು, ಪತ್ನಿ ಗಂಭೀರ

ಲಾರಿ-ಕಾರು ಮುಖಾಮುಖಿ ಡಿಕ್ಕಿ

ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ನಡೆದಿದೆ.

ಪೊಲೀಸ್​ ಸಿಬ್ಬಂದಿಗೆ ಗೂಡ್ಸ್​ ವಾಹನ ಡಿಕ್ಕಿ

ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್​ ಸಿಬ್ಬಂದಿಗೆ ಗೂಡ್ಸ್​ ವಾಹನ ಡಿಕ್ಕಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ‌‌ಯ ಉತ್ತರ ತಾಲೂಕಿನ ಏರ್​ಪೋರ್ಟ್​​ ರಸ್ತೆಯ ಹುಣಸಮಾರನಹಳ್ಳಿ ಬಳಿ ನಡೆದಿದೆ. ಸಿಟಿಗೆ ಪ್ರವೇಶವಿಲ್ಲ ಎಂದು ವಾಹನ ತಡೆದಿದ್ದಕ್ಕೆ ಗುದ್ದಿಕೊಂಡು ಹೋಗಲು ಚಾಲಯ ಯತ್ನ ನಡೆಸಿದ್ದು, ಘಟನೆಯಲ್ಲಿ ಸಂಚಾರಿ ಪೊಲೀಸ್​ ಕಾನ್ಸ್​​ಟೇಬಲ್​ ವಿಕಾಸ್​ಗೆ ಗಂಭೀರ ಗಾಯಗಳಾಗಿವೆ. ನಿತ್ಯ ಬೆಳಗ್ಗೆ 7:30ರಿಂದ 11 ಗಂಟೆವರೆಗೆ ಏರ್​​ಪೋರ್ಟ್​ ರಸ್ತೆಯಲ್ಲಿ ಗೂಡ್ಸ್ ವಾಹನಗಳಿಗೆ ನಿಷೇಧವಿದೆ. ಹೀಗಿದ್ದರೂ ಏರ್​​ಪೋರ್ಟ್​ ಹೆದ್ದಾರಿಗೆ ಗೂಡ್ಸ್ ವಾಹನ ಎಂಟ್ರಿ ಕೊಟ್ಟಿತ್ತು. ಈ ವೇಳೆ‌‌ ವಾಹನ ನಿಲ್ಲಿಸುವಂತೆ ಸೂಚನೆ ನೀಡಿದರೂ ಚಾಲಕ ನಿಲ್ಲಿಸಿಲ್ಲ ಎನ್ನಲಾಗಿದೆ. ಗಂಭೀರ ಗಾಯಗೊಂಡ ವಿಕಾಸ್​​ರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದ್ದು, ಅವರ ದೂರಿನನ್ವಯ ಗೂಡ್ಸ್ ಚಾಲಕನ‌ ವಿರುದ್ಧ ಕೇಸ್ ದಾಖಲಾಗಿದೆ. ಆರೋಪಿ ಭರಕತ್ ಖಾನ್ ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಗೂಡ್ಸ್​ ವಾಹನವನ್ನೂ ಸೀಜ್ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ