AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ

ಕರ್ನಾಟಕದಾದ್ಯಂತ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದು, ಒಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ಈ ದುರ್ಘಟನೆಗಳು ಸಂಭವಿಸಿವೆ. ಘಟನಾ ಸ್ಥಳಗಳಿಗೆ ಆ ವ್ಯಾಪ್ತಿಯ ಠಾಣೆಗಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ
ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada
ಪ್ರಸನ್ನ ಹೆಗಡೆ
|

Updated on: Feb 20, 2026 | 9:59 AM

Share

ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದಾರೆ.

ಭೀಕರ ಅಪಘಾತ: ಬೈಕ್​​ ಸವಾರರು ಸಾವು

ಮೈಸೂರು ಜಿಲ್ಲೆ ಹುಣಸೂರಿನ ತಾಲೂಕಿನ ಅರಸು ಕಲ್ಲಹಳ್ಳಿ ಗ್ರಾಮದಲ್ಲಿ ಲಾರಿ-ಬೈಕ್​​ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ಸವಾರರು ಬಲಿಯಾಗಿದ್ದಾರೆ. ಅಪಘಾತದ ರಭಸಕ್ಕೆ ಬೈಕ್​​ ಹೊತ್ತಿ ಉರಿದ್ದಿದ್ದು, ಸುರೇಶ್​(63), ಮಾದೇವ್​(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:  ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಅಪಘಾತ; ಬೈಕ್​​ ಸವಾರ ಸಾವು, ಪತ್ನಿ ಗಂಭೀರ

ಲಾರಿ-ಕಾರು ಮುಖಾಮುಖಿ ಡಿಕ್ಕಿ

ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ನಡೆದಿದೆ.

ಪೊಲೀಸ್​ ಸಿಬ್ಬಂದಿಗೆ ಗೂಡ್ಸ್​ ವಾಹನ ಡಿಕ್ಕಿ

ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್​ ಸಿಬ್ಬಂದಿಗೆ ಗೂಡ್ಸ್​ ವಾಹನ ಡಿಕ್ಕಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ‌‌ಯ ಉತ್ತರ ತಾಲೂಕಿನ ಏರ್​ಪೋರ್ಟ್​​ ರಸ್ತೆಯ ಹುಣಸಮಾರನಹಳ್ಳಿ ಬಳಿ ನಡೆದಿದೆ. ಸಿಟಿಗೆ ಪ್ರವೇಶವಿಲ್ಲ ಎಂದು ವಾಹನ ತಡೆದಿದ್ದಕ್ಕೆ ಗುದ್ದಿಕೊಂಡು ಹೋಗಲು ಚಾಲಯ ಯತ್ನ ನಡೆಸಿದ್ದು, ಘಟನೆಯಲ್ಲಿ ಸಂಚಾರಿ ಪೊಲೀಸ್​ ಕಾನ್ಸ್​​ಟೇಬಲ್​ ವಿಕಾಸ್​ಗೆ ಗಂಭೀರ ಗಾಯಗಳಾಗಿವೆ. ನಿತ್ಯ ಬೆಳಗ್ಗೆ 7:30ರಿಂದ 11 ಗಂಟೆವರೆಗೆ ಏರ್​​ಪೋರ್ಟ್​ ರಸ್ತೆಯಲ್ಲಿ ಗೂಡ್ಸ್ ವಾಹನಗಳಿಗೆ ನಿಷೇಧವಿದೆ. ಹೀಗಿದ್ದರೂ ಏರ್​​ಪೋರ್ಟ್​ ಹೆದ್ದಾರಿಗೆ ಗೂಡ್ಸ್ ವಾಹನ ಎಂಟ್ರಿ ಕೊಟ್ಟಿತ್ತು. ಈ ವೇಳೆ‌‌ ವಾಹನ ನಿಲ್ಲಿಸುವಂತೆ ಸೂಚನೆ ನೀಡಿದರೂ ಚಾಲಕ ನಿಲ್ಲಿಸಿಲ್ಲ ಎನ್ನಲಾಗಿದೆ. ಗಂಭೀರ ಗಾಯಗೊಂಡ ವಿಕಾಸ್​​ರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದ್ದು, ಅವರ ದೂರಿನನ್ವಯ ಗೂಡ್ಸ್ ಚಾಲಕನ‌ ವಿರುದ್ಧ ಕೇಸ್ ದಾಖಲಾಗಿದೆ. ಆರೋಪಿ ಭರಕತ್ ಖಾನ್ ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಗೂಡ್ಸ್​ ವಾಹನವನ್ನೂ ಸೀಜ್ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ