AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಮುಕ್ತ ವಿವಿಯ ಕರ್ಮಕಾಂಡ ಬಯಲಿಗೆ, ಹಣ ಕೊಟ್ಟರೆ ಪರೀಕ್ಷೆಯಲ್ಲಿ ಕಾಪಿಗೆ ಅವಕಾಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಲಂಚಾವತಾರ ಬಯಲಿಗೆ ಬಂದಿದೆ. ಹಣ ಕೊಟ್ಟರೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ವಿದ್ಯಾರ್ಥಿಯೊಬ್ಬ ಪ್ರಾಧ್ಯಾಪಕರ ಜೊತೆ ಮಾತನಾಡಿರುವ ಆಡಿಯೋ ವೈರಲ್ ಆಗುತ್ತಿದೆ.

ದಿಲೀಪ್​, ಚೌಡಹಳ್ಳಿ
| Edited By: |

Updated on:Sep 11, 2023 | 11:18 AM

Share

ಮೈಸೂರು, ಸೆ.11: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (Karnataka State Open University) ಲಂಚಾವತಾರ ಬಯಲಿಗೆ ಬಂದಿದೆ. ಹಣ ಕೊಟ್ಟರೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ವಿದ್ಯಾರ್ಥಿಯೊಬ್ಬ ಪ್ರಾಧ್ಯಾಪಕರ ಜೊತೆ ಮಾತನಾಡಿರುವ ಆಡಿಯೋ ವೈರಲ್ (Audio Viral) ಆಗುತ್ತಿದೆ.

ಎಂಎಸ್​​​ಸಿ ಪ್ರಶ್ನೆ ಪತ್ರಿಕೆಗೆ 1500 ರೂ., ಎಂಎ ಮತ್ತು ಎಂಕಾಮ್ ಪ್ರಶ್ನೆ ಪತ್ರಿಕೆಗೆ 1 ಸಾವಿರ ರೂಪಾಯಿ ಕೊಟ್ಟರೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಹಣ ಕೊಡದ ವಿದ್ಯಾರ್ಥಿಗಳನ್ನು ಬೇರೆ ಪರೀಕ್ಷಾ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸುತ್ತಾರೆ. ಈ ಸಂಬಂಧ ವಿವಿ ಪ್ರಾಧ್ಯಾಪಕರ ಜೊತೆ ವಿದ್ಯಾರ್ಥಿಯೊಬ್ಬ ಮಾತನಾಡಿರುವ ಆಡಿಯೋ ವೈರಲ್ ಆಗುವ ಮೂಲಕ ವಿವಿಯ ಲಂಚಾವತಾರ ಬಯಲಿಗೆ ಬಂದಿದೆ.

ಆಡಿಯೋದಲ್ಲಿ ಇರುವಂತೆ, ಚಿತ್ರದುರ್ಗ ಪರೀಕ್ಷಾ ಕೇಂದ್ರದಲ್ಲಿ ಒಂದು ಸೆಮಿಸ್ಟರ್​​ಗೆ ಮೂರು ಸಾವಿರ ರೂಪಾಯಿ ಲಂಚ ಪಡೆದು ಕಾಪಿ ಹೊಡೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಹಣ ಕೊಡದ ವಿದ್ಯಾರ್ಥಿಗಳನ್ನು ಪ್ರತ್ಯೇಕ ರೂಮ್​ನಲ್ಲಿ ಕೂರಿಸಿ ಪರೀಕ್ಷೆ ಬರೆಸುವ ಮೂಲಕ ಟಾರ್ಗೆಟ್ ಮಾಡಲಾಗುತ್ತದೆ. ಬೆಂಗಳೂರಿನ ಯುವತಿಯೊಬ್ಬೊಳು ಇದರ ವಿರುದ್ಧ ಧ್ವನಿ ಎತ್ತಿದ್ದಳು.

ಇದನ್ನೂ ಓದಿ: ರಾಯಚೂರು ನಗರಸಭೆಯಲ್ಲಿನ ಲಂಚಾವತಾರ ಬಯಲು ಮಾಡಿದ ಸಾರ್ವಜನಿಕರು, ವಿಡಿಯೋ ವೈರಲ್

ಚಿತ್ರದುರ್ಗ ಕೇಂದ್ರ ಬೇಡ ಎಂದು ದಾವಣಗೆರೆ ಪರೀಕ್ಷಾ ಕೇಂದ್ರ ತೆಗೆದುಕೊಂಡೆ. ಆದರೆ, ಚಿತ್ರದುರ್ಗಕ್ಕಿಂತ ಹೆಚ್ಚು ಲಂಚಾವತಾರ ಇಲ್ಲಿದೆ. ಚಿತ್ರದುರ್ಗದಲ್ಲಿ ಒಂದು ಸೆಮೆಸ್ಟರ್​ಗೆ 1 ಸಾವಿರ ಕೇಳಿದರೆ, ದಾವಣಗೆರೆಯಲ್ಲಿ ಒಂದು ವಿಷಯಕ್ಕೆ 1 ಸಾವಿರ ಕೇಳಿದ್ದಾರೆ.

ದಾವಣಗೆರೆ ರೀಜನಲ್ ಸೆಂಟರ್​ನ ಕೊಠಡಿಯೊಂದರಲ್ಲಿ 36 ಮಂದಿ ಇದ್ದರು. ಯಾರು ಎಲ್ಲಿ ಬೇಕಾದರೂ ಕುಳಿತುಕೊಳ್ಳಬಹುದಾಗಿತ್ತು. ನೋಂದಣಿ ಸಂಖ್ಯೆ ಏನೂ ಇಲ್ಲ. ಇದನ್ನು ಪರೀಕ್ಷಾ ಸಂಯೋಜಕರಲ್ಲಿ ಪ್ರಶ್ನಿಸಿದಾಗ, ಬೆಳಗ್ಗೆಯಿಂದ ನಾನು ತಿಂಡಿ ತಿಂದಿಲ್ಲ, ಅದನ್ನು ವಿಚಾರ ಮಾಡುತ್ತಿದ್ದೇನೆ ಎಂದು ಹೇಳಿದ್ದಾಗಿ ವಿದ್ಯಾರ್ಥಿ ಹೇಳುವುದನ್ನು ಆಡಿಯೋದಲ್ಲಿ ಕೇಳಬಹುದು.

ಅಲ್ಲದೆ, ಲಂಚಾವತಾರದ ಬಗ್ಗೆ ಉಪ ಕುಲಾಪತಿಗೆ ತಿಳಿಸಲೆಂದು ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ. ಮುಂದಿನ ಪರೀಕ್ಷೆಯ ವೇಳೆ ನಾನು ಕುಳಿತಿದ್ದ ರೂಮ್​ನಲ್ಲಿ 36 ವಿದ್ಯಾರ್ಥಿಗಳಲ್ಲಿ 12 ಮಂದಿ ಮಾತ್ರ ಇದ್ದರು. ಉಳಿದವರು ಎಲ್ಲಿ ಎಂದು ಸಿಬ್ಬಂದಿಯನ್ನು ಕೇಳಿದರೆ, ಅವರೆಲ್ಲ ಕಾಪಿ ಮಾಡುವವರು ಬಂದಿಲ್ಲ ಎಂದು ಹೇಳಿದ್ದಾರೆ. ಪ್ರಶ್ನೆ ಪತ್ರಿಕೆ ಬಂದ ನಂತರ ಉಳಿದವರನ್ನು ಬೇರೆ ರೂಮ್​ನಲ್ಲಿ ಕೂರಿಸಿ ಅವರಿಂದ ತಲಾ ಸಾವಿರ ರೂ. ಪಡೆದು ಪರೀಕ್ಷೆ ಬರೆಸಿದ್ದಾರೆ ಎಂದು ವಿದ್ಯಾರ್ಥಿ ಹೇಳಿದ್ದಾನೆ.

ಘಟನೆ ಸಂಬಂಧ ದಾವಣಗೆರೆ ಎಸ್​ಪಿಗೆ ತಿಳಿಸಿದಾಗ ಅವರು ಒಂದು ವ್ಯಾನ್​ನಲ್ಲಿ ಕಳುಹಿಸಿಕೊಟ್ಟರು. ಇದು ಐದನೇ ವಿಷಯದ ಪರೀಕ್ಷೆಯಾಗಿತ್ತು. ಅಂದು ಎಲ್ಲವೂ ಸರಿಯಾಗಿಯೇ ನಡೆದಿತ್ತು. ಆದರೆ, ಪರೀಕ್ಷಾ ಸಂಯೋಜಕರು ನನ್ನನ್ನು ಟಾರ್ಗೆಟ್ ಮಾಡಿದ್ದರು. ನೀನು ವಿಸಿಗೆ ಹೋಗಿ ಹೇಳಿ ಏನ್ ಮಾಡ್ತಿಯೋ ಮಾಡು ಅಂತ ಅವರು ಹೇಳಿದ್ದಾಗಿ ವಿದ್ಯಾರ್ಥಿ ಹೇಳುವುದನ್ನು ಆಡಿಯೋದಲ್ಲಿ ಕೇಳಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:14 am, Mon, 11 September 23

Follow Us
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ